Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...