Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...