Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...