Homeಮುಖಪುಟಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

"ಆಕೆಯ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಳು. ಆಕೆಯ ಸ್ಥಿತಿ ಗಂಭಿರವಾಗಿದೆ, ಹಾಗಾಗಿ ಲಕ್ನೋಗೆ ಕರೆದೊಯ್ಯುವಂತೆ ಸ್ಥಳೀಯ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದರು. ಆದರೆ ಬಲರಾಂಪರ ಪಟ್ಟಣದ ಬಳಿ ಹೋಗುತ್ತಿರುವಾಗ ನನ್ನ ಮಗಳು ಸತ್ತುಹೋದಳು" ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.

- Advertisement -
- Advertisement -

ಹತ್ರಾಸ್‌ನಲ್ಲಿ ನಡೆದ ಘೋರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ನೆನಪು ಮಾಸುವ ಮುನ್ನ, ಉತ್ತರಪ್ರದೇಶದಲ್ಲಿ ಮಂಗಳವಾರ ಸಂಜೆ ಮತ್ತೊಬ್ಬ ದಲಿತ ಯುವತಿಗೆ ಮತ್ತುಬರಿಸಿ ಅತ್ಯಾಚಾರ ಮಾಡಿದ ನಂತರ ಹಲ್ಲೆ ಮಾಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಆಕೆ ಸಾವನ್ನಪ್ಪಿರುವ ದುರ್ಘಟನೆ ಜರುಗಿದೆ.

ಹತ್ರಾಸ್‌ನಿಂದ 500 ಕಿ.ಮೀ ದೂರದಲ್ಲಿರುವ ಬಲರಾಂಪುರದ ಯುವತಿ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದು, ಆಕೆಯನ್ನು ಮಂಗಳವಾರ ಸಂಜೆ, ಲಕ್ನೋ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾಳೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಪೊಲೀಸರು, ಮಹಿಳೆಯ ದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಿದ್ದು, ವೈದ್ಯಕೀಯ ಪರೀಕ್ಷೆಯಿಂದ ಅತ್ಯಾಚಾರ ದೃಢಪಟ್ಟಿದೆಯೇ ಎಂಬುದರ ಬಗ್ಗೆ ಅಧಿಕೃತವಾಗಿ ಮಾತನಾಡಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಕಾಲೇಜಿಗೆ ದಾಖಲಾಗಲು ಹೋಗುವಾಗ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ. ಯುವತಿ ಸರಿಯಾದ ಸಮಯಕ್ಕೆ ಮನೆಗೆ ಬರಲಿಲ್ಲವಾದ್ದರಿಂದ ಆಕೆಯ ಕುಟುಂಬವು ಹುಡುಕಾಡಲು ಪ್ರಾರಂಭಿಸಿದೆ. ಆದರೆ, ಸಂಜೆ 7 ಗಂಟೆ ಸುಮಾರಿಗೆ ಆಕೆ ಹಿಂತಿರುಗಿದ್ದು, ಹಲ್ಲೆಕೋರರು ಆಕೆಯನ್ನು ಇ-ರಿಕ್ಷಾದಲ್ಲಿ ಕೂರಿಸಿ ಮನೆಗೆ ಕಳುಹಿಸಿದ್ದಾರೆ ಎಂದು ಕುಟುಂಬ ಹೇಳಿದೆ.

“ಅಪಹರಿಸಿದವರು ಅವಳಿಗೆ ಯಾವುದೋ ಚುಚ್ಚುಮದ್ದು ನೀಡಿದ್ದರಿಂದಾಗಿ ಅಕೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ನಂತರ ಅವಳ ಮೇಲೆ ಅತ್ಯಾಚಾರ ಮಾಡಿ, ಆಕೆಯ ಕಾಲು ಮತ್ತು ಬೆನ್ನನ್ನು ಮುರಿದಿದ್ದಾರೆ. ನಂತರ ಆಕೆಯನ್ನು ನಮ್ಮ ಮನೆಯ ಮುಂದೆ ಎಸೆದಿದ್ದರು. ನನ್ನ ಮಗಳಿಗೆ ಮಾತನಾಡಲೂ, ನಿಲ್ಲಲೂ ಸಾಧ್ಯವಾಗಲಿಲ್ಲ. ನನ್ನನ್ನು ಉಳಿಸಿ. ಸಾಯಲು ಇಷ್ಟವಿಲ್ಲ ಎಂದು ಅಳುತ್ತಿದ್ದಳು” ಎಂದು ಸಂತ್ರಸ್ತೆಯ ಯುವತಿಯ ತಾಯಿ ರೋದಿಸುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

“ಆಕೆಯ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಳು. ಆಕೆಯ ಸ್ಥಿತಿ ಗಂಭಿರವಾಗಿದೆ, ಹಾಗಾಗಿ ಲಕ್ನೋಗೆ ಕರೆದೊಯ್ಯುವಂತೆ ಸ್ಥಳೀಯ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದರು. ಆದರೆ ಬಲರಾಂಪರ ಪಟ್ಟಣದ ಬಳಿ ಹೋಗುತ್ತಿರುವಾಗ ನನ್ನ ಮಗಳು ಸತ್ತುಹೋದಳು” ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.

ಆದರೆ, ಶವಪರೀಕ್ಷೆಯಲ್ಲಿ ಆಕೆಯ ಕೈ ಕಾಲುಗಳು ಮುರಿದಿವೆ ಎಂದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ಈ ಪ್ರಕರಣದಲ್ಲಿ, ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ಕೈ ಕಾಲುಗಳನ್ನು ಮುರಿದ ಆರೋಪಗಳು ನಿಜವಲ್ಲ. ಮರಣೋತ್ತರ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಿಲ್ಲ” ಎಂದು ಬಲರಾಂಪುರ್ ಪೊಲೀಸರು ಕಳೆದ ರಾತ್ರಿ ಟ್ವೀಟ್ ಮಾಡಿದ್ದಾರೆ.

“ಅವಳ ಕೈಗಳಲ್ಲಿ ಗ್ಲೂಕೋಸ್ ಸಿರಿಂಜ್ ಅಂಟಿಕೊಂಡಿತ್ತು. ಚುಚ್ಚುಮದ್ದಿನ ಗುರುತುಗಳಿದ್ದವು. ಅವಳ ಸ್ಥತಿ ತುಂಬಾ ಗಂಭಿರವಾಗಿತ್ತು. ಕುಟುಂಬವು ಇಬ್ಬರು ವ್ಯಕ್ತಿಗಳನ್ನು ಹೆಸರಿಸಿದ್ದರು. ಪೊಲೀಸರು ಶೀಘ್ರ ಕ್ರಮ ಕೈಗೊಂಡು ಅವರನ್ನು ಬಂಧಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ದೇವ್ ರಂಜನ್ ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಹತ್ರಾಸ್ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಮಂಗಳವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಂದು ಮಧ್ಯರಾತ್ರಿ ಪೊಲೀಸರು ಆಕೆಯ ಕುಟುಂಬದವರಿಗೂ ತಿಳಿಸದೇ ಶವಸಂಸ್ಕಾರ ಮಾಡಿದ್ದರು. ಇದರ ವಿರುದ್ಧ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದರ ನಡುವೆ ಇಂತಹದ್ದೇ ಮತ್ತೊಂದು ಘಟನೆ ಉತ್ತರಪ್ರದೇಶದಲ್ಲೇ ವರದಿಯಾಗಿರುವುದು ಆಘಾತವನ್ನುಂಟುಮಾಡಿದೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಇಂತಹದ್ದೇ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...