Homeಕರ್ನಾಟಕಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ - ತಿರುಗಿ ನೋಡದ ಜಿಲ್ಲಾಡಳಿತ

ಧಾರವಾಡ: 8 ದಿನಗಳಿಂದ ಪೌರಕಾರ್ಮಿಕರ ಪ್ರತಿಭಟನೆ – ತಿರುಗಿ ನೋಡದ ಜಿಲ್ಲಾಡಳಿತ

ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

- Advertisement -
- Advertisement -

ನೂರಾರು ಪೌರಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 8 ದಿನಗಳಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮತ್ತು ನೇರ ಪಾವತಿಗೆ ರಾಜ್ಯಸರ್ಕಾರ ಆದೇಶ ನೀಡಿದ್ದಾಗ್ಯೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ಆದೇಶವನ್ನು ಪಾಲಿಸದೆ ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ನೊಂದಿಗೆ ಮಾತನಾಡಿದ ಹೋರಾಟಗಾರರಾದ ವಿಜಯ್ ಗುಂತ್ರಾಲ್, “2017ರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೇರ ನೇಮಕಾತಿ ಮತ್ತು ನೇರ ಪಾವತಿಗೆಂದು ಆದೇಶ ಹೊರಡಿಸಿ 4 ವರ್ಷಗಳು ಕಳೆದರೂ ಇನ್ನೂ ಜಾರಿಗೆ ಬಂದಿಲ್ಲ. ಹಾಗಾಗಿ ಇದನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಆಗಿನಿಂದಲೂ ಪ್ರತಿಭಟಿಸುತ್ತಲೇ ಇದ್ದೇವೆ. ಈಗ ಕಳೆದ 8 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

“ನೇರ ವೇತನ ಪಾವತಿ ಮಾಡುವುದಕ್ಕೆ 2018ರಲ್ಲಿ ಜಿಲ್ಲಾಧಿಕಾರಿಗಳು ಅನುಮೋದನೆ ಕೊಟ್ಟಿದ್ದಾರೆ. ಆದರೆ ಇಲ್ಲಿಯವರೆಗೂ ಇದು ಅನುಷ್ಠಾನಗೊಂಡಿಲ್ಲ. ಇಷ್ಟೇ ಅಲ್ಲದೇ, ಕನಿಷ್ಟ ವೇತನ ವೇತನ ಬಾಕಿ 9 ಕೋಟಿ, ಪಿಎಫ್ ವಂಚನೆಗೆ ಸಂಬಂಧಿಸಿದಂತೆ 3 ಕೋಟಿ, ತುಟ್ಟಿ ಭತ್ಯೆಯ ಬಾಕಿ 2 ಕೋಟಿ, 868 ಮಹಿಳಾ ಪೌರ ಕಾರ್ಮಿಕರಿಗೆ ನೀಡಬೇಕಾದ ವೈದ್ಯಕೀಯ ಬೋನಸ್ ಹಣ 21.70 ಲಕ್ಷ ಸೇರಿದಂತೆ ಸುಮಾರು 14 ಕೋಟಿಯ 21 ಲಕ್ಷದ 70ಸಾವಿರ ರೂ.ಗಳು ಮಹಾನಗರ ಪಾಲಿಕೆಯಿಂದ ಬಾಕಿ ಹಣ ಬರಬೇಕಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಬಿದ್ದಿದ್ದರೂ ಸಹ ನಮಗೆ ಇನ್ನೂ ಹಣ ಪಾವತಿಯಾಗಿಲ್ಲ” ಎಂದು ನೋವು ತೋಡಿಕೊಂಡರು.

ಪೌರ ಕಾರ್ಮಿಕರ ಪ್ರತಿಭಟನೆಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

“ಕಸ ತುಂಬಿಕೊಂಡು ಹೋಗುವ ಆಟೋ ಟಿಪ್ಪರ್ ವಾಹನ ಚಾಲಕರು, ತಮಗೆ 3 ತಿಂಗಳಿನಿಂದ ಬರಬೇಕಾಗಿರುವ ಸಂಬಳ ನೀಡಲು ಒತ್ತಾಯಿಸಿದ್ದಕ್ಕಾಗಿ, ಮಹಾನಗರ ಪಾಲಿಕೆಯ ಆಯುಕ್ತರು ಯಾವುದೇ ನೋಟೀಸ್ ನೀಡದೇ, 51 ಜನ ಚಾಲಕರನ್ನು ಕಾನೂನುಬಾಹಿರವಾಗಿ ಕೆಲಸದಿಂದ ತೆಗೆದಿದ್ದಾರೆ. ಪೌರ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಾರದು, ಸಂಬಳ ಬಾಕಿ ಉಳಿಸಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳೇ ಆದೇಶ ಹೊರಡಿಸಿದ್ದರೂ ಪಾಲಿಕೆಯು ಇಂತಹ ಕೃತ್ಯವೆಸಗಿದೆ. ಪಾಲಿಕೆಯ ಆಯುಕ್ತರು ಮತ್ತು ಗುತ್ತಿಗೆದಾರರಾದ ಆದರ್ಶ್‌ ಎಂಟರ್‌ಪ್ರೈಸಸ್ ಸೇರಿಕೊಂಡು, 1948ರ ಕನಿಷ್ಠ ವೇತನ ಕಾಯ್ದೆಯ ಉಲ್ಲಂಘನೆ, 1936ರ ವೇತನ ಪಾವತಿ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ, ಈ ಗುತ್ತಿಗೆ ದಾರರು ಪರವಾನಗಿಯೇ ಇಲ್ಲದೇ ಕಳೆದ 16 ವರ್ಷಗಳಿಂದ ಪಾಲಿಕೆಯ ಟೆಂಡರ್ ಪಡೆದುಕೊಳ್ಳುತ್ತಿದ್ದು, 1970ರ ಕಾಂಟ್ರಾಕ್ಟ್ ಲೇಬರ್ ಕಾಯ್ದೆಯನ್ನೂ ಉಲ್ಲಂಘಿಸಿದ್ದಾರೆ. ಈ ಕಾನೂನಬಾಹಿರ ಗುತ್ತಿಗೆದಾರರಿಗೆ 14.60 ಕೋಟಿ ಮೌಲ್ಯದ 146 ವಾಹನಗಳನ್ನ ನಿತ್ಯ ನಿರ್ವಹಣೆಗೆ ನೀಡಲಾಗಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಕೊರೊನಾ ನಡುವೆಯೂ ಕೆಲಸ: ಮಾಸ್ಕ್ ಕೊಡದ ಪಾಲಿಕೆ – ಆತಂಕದಲ್ಲಿ ಪೌರಕಾರ್ಮಿಕರು

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರಕಾರ್ಮಿಕರು ಕಳೆದ 8 ದಿನಗಳಿಂದ ಅಹೋರಾತ್ರಿ ಅನಿರ್ಧಿಷ್ಟಾವದಿ ಪ್ರತಿಭಟನೆಯನ್ನು ಮಾಡುತ್ತಿದ್ದು, ಇದುವರೆಗೂ ಸಹ ಯಾವುದೇ ಜನಪ್ರತಿನಿಧಿಗಳು ಇವರನ್ನು ಭೇಟಿಯಾಗಿ ಇವರ ಸಮಸ್ಯೆಗಳನ್ನು ಆಲಿಸಿರುವುದಿಲ್ಲ. ಆದರೂ ಕೆಲವು ಪೌರ ಕಾರ್ಮಿಕರು ತಮ್ಮ ಕೆಲಸವನ್ನು ಮುಗಿಸಿಕೊಂಡು ನಂತರ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮ ಕರ್ತವ್ಯನಿಷ್ಠೆಯನ್ನು ಮೆರೆದಿದ್ದಾರೆ ಎಂದರು.

ಇದನ್ನೂ ಓದಿ:ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…


ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...