Homeಅಂಕಣಗಳುಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ 'ಪಾಲಿಸಿ'ಯೇ ಕಾರಣ....

ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ಪುಲ್ವಾಮಾ ಹತ್ಯಾಕಾಂಡ ಸಂಭವಿಸಲು ಮೂಲ ಕಾರಣ ಕಾಶ್ಮೀರದಲ್ಲಿ ಈ 5 ವರ್ಷಗಳಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಉಲ್ಬಣವಾಗಿರುವುದು. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಕಾಶ್ಮೀರ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ಮಾರ್ಗ ಎಂಬ ಅದರ ಧೋರಣೆಯಿಂದಾಗಿ ಕಾಶೀರದಲ್ಲಿ ಇಂದು ಜನಜೀವನವೂ ಕಷ್ಟವಾಗಿದೆ.
ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಗೆಚ್ಚಿದೆ.

ಸೈನಿಕರ ಹತ್ಯೆ: ಶೇ. 93ರಷ್ಟು ಹೆಚ್ಚಳ!

ಮೋದಿ ಅವಧಿಯಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿಗಳು

ಕಳೆದ ಐದು ವರ್ಷಗಳ (2014-18) ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮೋದಿಯ ‘ಬಲಿಷ್ಠ ಸರ್ಕಾರ’ದ ಅವಧಿಯಲ್ಲಿ ಅಲ್ಲಿ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ. ಉಗ್ರ ದಾಳಿಯ ಪ್ರಕರಣಗಳು ಶೇ. 173ರಷ್ಟು ಹೆಚ್ಚಿವೆ. ಆದರೆ ಇವತ್ತು ಪುಲ್ವಾಮಾದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಜೆಪಿಗರು ಮತ್ತು ಸೋಷಿಯಲ್ ಮೀಡಿಯಾದ ‘ಭಕ್ತರ’ ಕಣ್ಣಿಗೆ ದಿನವೂ ಕಾಶ್ಮೀರದಲ್ಲಿ ಹುತಾತ್ಮರಾಗುತ್ತಲೇ ಇರುವ ಒಬ್ಬಿಬ್ಬರು ಸೈನಿಕರ ಬಗ್ಗೆ ಎಂದೂ ತಲೆ ಕೆಡಿಸಿಕೊಂಡಿಲ್ಲ. ಈಗ ಚುನಾವಣೆ ಹತ್ತಿರ ಬಂದಿರುವುದರಿಂದ, ಪುಲ್ವಾಮಾ ಘಟನೆಯನ್ನು ಮುಂದು ಮಾಡಿ, ಕಾಶ್ಮೀರ ಸಮಸ್ಯೆಗೆ ಬಿಜೆಪಿ ಮಾತ್ರ, ಅದರಲ್ಲೂ ಮೋದಿ ಮಾತ್ರ ಉತ್ತರ ನೀಡಬಲ್ಲರು ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಇದೇ ಮೋದಿಯ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರು ಮತ್ತು ನಾಗರಿಕರ ಹತ್ಯೆ ಸಂಖ್ಯೆ ಏರುತ್ತಲೇ ಬಂದಿದೆ.

ಇದೇ ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಸರ್ಕಾರವೇ ನೀಡಿದ ಮಾಹಿತಿ-ಅಂಕಿಸಂಖ್ಯೆಯ ಪ್ರಕಾರ, 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಅಂದರೆ ತಿಂಗಳಿಗೆ ಸರಾಸರಿ 28 ಕೃತ್ಯಗಳು! ಆಗ ಮೋದಿಗೆ ಮತ್ತು ಅವರ ಭಕ್ತರಿಗೆ ಕಾಶ್ಮೀರ ನೆನಪೇ ಆಗಲಿಲ್ಲ! ಅಲ್ಲಿ ಮಿಲಿಟರಿಯನ್ನು ಇನ್ನಷ್ಟು ಹೆಚ್ಚಿಸಿ ಪರಿಸ್ಥಿತಿಯನ್ನು ಕೇಂದ್ರ ಇನ್ನಷ್ಟು ಹದಗೆಡಿಸಿತು.

ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಹತರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ

2018ರಲ್ಲಂತೂ ಅಲ್ಲಿ ಪ್ರತಿ ತಿಂಗಳು ಸರಾಸರಿ 15 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಸೈನಿಕರು ಹುತಾತ್ಮರಾಗುತ್ತಲೇ ಇದ್ದಾರೆ. ನಾಗರಿಕರೂ ಬಲಿಯಾಗುತ್ತಿದ್ದಾರೆ. ಭಯೋತ್ಪಾದಕರ ದಾಳಿ ಮತ್ತು ಸೇನೆಯ ಅಟ್ಟಹಾಸ ಎರಡರ ನಡುವೆ ಸಿಕ್ಕಿರುವ ಅಲ್ಲಿಯ ಸಾಮಾನ್ಯ ನಾಗರಿಕರ ಬಗ್ಗೆ ವೇಷಭಕ್ತರು ಎಂದೂ ಯೋಚಿಸಲೇ ಇಲ್ಲವಲ್ಲ? ಮೋದಿ ಅವಧಿಯಲ್ಲಿ ಭಯೋತ್ಪಾದನಾ ಕೃತ್ಯ ಮತ್ತು ಸೇನೆಯ ಕ್ರಮಗಳಿಂದ ಪ್ರತಿವರ್ಷವೂ ನೂರಾರು ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ಈ ಅಮಾಯಕರ ಸಾವುಗಳ ಬಗ್ಗೆ ಸಂತಾಪ ಇರದವನಿಗೆ ಮೊನ್ನೆ ಹುತಾತ್ಮರಾದ ಸೈನಿಕರ ಬಗ್ಗೆ ಸಂತಾಪ ಮಿಡಿಯುವ ಯಾವ ಹಕ್ಕೂ ಇಲ್ಲ. ಅಷ್ಟಕ್ಕೂ ಈಗ ಸೈನಿಕರ ಹೆಸರಲ್ಲಿ ಇವರೆಲ್ಲ ಮೊಸಳೆ ಕಣ್ಣೀರು ಹಾಕುತ್ತಲೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟವರು. ಮೋದಿ ಅವಧಿಯಲ್ಲಿ (2014-18) ಕಾಶ್ಮೀರದಲ್ಲಿ ಒಟ್ಟು 339 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಂದರೆ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ.
ಹಾಗಾದರೆ ಈ ಅವಧಿಯಲ್ಲಿ ಮೋದಿ ಏನೂ ಕ್ರಮ ಕೈಗೊಳ್ಳಲಿಲ್ಲವೇಕೆ? ರಾಜಕೀಯ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ದಾರಿ ಎಂದು ಹೊರಟಾಗ ಇಂಥದ್ದೆಲ್ಲ ಸಂಭವಿಸುತ್ತದೆ ಎಂಬುದು ಜಗತ್ತಿನ ಹಲವಾರು ಕಡೆ ಪ್ರೂವ್ ಆಗಿದೆ. ಹಾಗಿದ್ದೂ ಇವತ್ತು ಮತ್ತೆ ಮಿಲಿಟರಿ ಕ್ರಮ ಮಾತ್ರದಿಂದಲೇ ಪರಿಹಾರ ಎಂಬಂತೆ ಕೆಲವು ಮೂರ್ಖ ಆ್ಯಂಕರ್‌ಗಳು, ಸಾವಿರಾರು ನೆಟ್ಟಿಗರು ಅರಚುತ್ತಿದ್ದಾರೆ. ಇವರೆಲ್ಲರಿಗೆ ದೇಶಭಕ್ತಿ ಎಂದರೇನೇ ಕೊಲ್ಲುವ ಆಟ, ಆದರೆ ತಾವು ಮಾತ್ರ ಸೇಫ್ ಆಗಿರಬೇಕು.

ಉಗ್ರರ ನುಸುಳುವಿಕೆಯಲ್ಲೂ ಹೆಚ್ಚಳ

2016-18 ಅವಧಿಯಲ್ಲಿ ಹೆಚ್ಚಿರುವ ಉಗ್ರರ ನುಸುಳುವಿಕೆ ಪ್ರಮಾಣ

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಇದೇ ನರೇಂದ್ರ ಮೋದಿಯವರು ಭಯೋತ್ಪಾದನಾ ಕೃತ್ಯ ಖಂಡಿಸುತ್ತ, “ದೇಶದ ಪ್ರಧಾನಿ ಏನು ಮಾಡುತ್ತಿದ್ದಾರೆ? ಅವರ ಬಳಿ ಬಿಎಸ್‌ಎಫ್ ಇದೆ, ಸಿಆರ್‌ಪಿಎಫ್ ಇದೆ….ಹೀಗಿರುವಾಗ ಉಗ್ರು ಗಡಿ ದಾಟಿ ನುಸುಳಿ ಬರಲು ಹೇಗೆ ಸಾಧ್ಯವಾಯಿತು” ಎಂದೆಲ್ಲ ಧೀರೋದ್ಧಾತ ಭಾಷಣ ಮಾಡುತ್ತಿದ್ದರು. ಈಗ ಲೋಕಸಭೆ ಮತ್ತು ರಾಜ್ಯಸಭೆಗೆ ಗೃಹ ಇಲಾಖೆಯೇ ನೀಡಿದ ಅಂಕಿಅಂಶಗಳ ಪ್ರಕಾರ ಉಗ್ರ ನುಸುಳುವಿಕೆ ಈಗ ಹಿಂದೆಂದಿಗಿಂತ ಹೆಚ್ಚಾಗಿದೆ. ಪುಲ್ವಾಮಾ ದುರಂತ ನಡೆಯುವ ವಾರ ಮೊದಲಷ್ಟೇ ಈ ಅಂಕಿಅಂಶಗಳು ಹೊರಬಿದ್ದಿವೆ. ಹಾಗಾದರೆ 5 ವರ್ಷ ಈ 56 ಇಂಚಿನ ಮೋದಿ ಏನು ಮಾಡುತ್ತಿದ್ದರು? ಗೃಹ ಇಲಾಖೆಯ ಮಾಹಿತಿ ಪ್ರಕಾರ, 2016-18ರ ಅವಧಿಯಲ್ಲಿ 400ಕ್ಕೂ ಹೆಚ್ಚು ಭಯೋತ್ಪಾದಕರು ಪಾಕಿಸ್ತಾನದಿಂದ ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಶಂಖೆಗಳಿವೆ. ಅಂದರೆ ಈ ಮೂರು ವರ್ಷದ ಅವಧಿಯಲ್ಲಿ ತಿಂಗಳಿಗೆ ಸರಾಸರಿ 11 ಉಗ್ರರು ಕಾಶ್ಮೀರದೊಳಕ್ಕೆ ನುಸುಳುತ್ತಿದ್ದಾರೆ. ರಕ್ಷಣಾ ಸಚಿವರನ್ನು ಡಮ್ಮಿ ಮಾಡಿ, ವಿದೇಶಾಂಗ ಸಚಿವಾಲಯವನ್ನು ಮೂಕಪ್ರೇಕ್ಷಕನಂತೆ ಕೂಡಿಸಿ, ಎಲ್ಲವನ್ನೂ ಪ್ರಧಾನಿ ಕಾರ್ಯಾಲಯವೇ ನಿಯಂತ್ರಿಸಲು ಹೋದದ್ದರ ಫಲವಿದು. ಇದರ ಪರಿಣಾಮವಾಗಿ ನಮ್ಮ ಸೈನಿಕರು ಜೀವ ಕಳೆದುಕೊಳ್ಳುತ್ತಲೇ ಇದ್ದಾರೆ. ದಿನವೂ ಹುತಾತ್ಮರಾಗುವ ಸೈನಿಕರ ಬಗ್ಗೆ ಎಂದೂ ಸಂತಾಪ ವ್ಯಕ್ತಪಡಿಸಿದವರು ಈಗ ಚುನಾವಣೆ ಹತ್ತಿರ ಬಂದ ಪರಿಣಾಮವಾಗಿ ಸೈನಿಕರ ಪರವಾಗಿ ಶೋಕಿಸುವ ನಾಟಕ ಆಡುತ್ತಿದ್ದಾರೆ.
ನೋಟು ಅಮಾನ್ಯೀ ನಂತರ ಉಗ್ರರ ಬೆನ್ನೆಲುಬು ಮುರಿಯಲಾಗಿದೆ ಎಂದು ಆಗಾಗ ಪ್ರಧಾನಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಸುಳ್ಳನ್ನು ಹೇಳುತ್ತಲೇ ಬಂದಿದ್ದಾರೆ. ಸರ್ಕಾರವೇ ಹೇಳಿದ ಪ್ರಕಾರ, 2018 ಜೂನ್ ತಿಂಗಳು ಒಂದರಲ್ಲೇ 38 ಉಗ್ರರು ಕಾಶ್ಮೀರದೊಳಕ್ಕೆ ನುಸುಳಿದ್ದಾರೆ ಎಂಬ ಸಂಶಯ ಇದೆ. ಇದೆಲ್ಲ ಗೊತ್ತಿದ್ದೂ ಕ್ರಮ ಕೈಗೊಳ್ಳದ ಮೋದಿ ಮತ್ತು ಅವರ ಸರ್ಕಾರವೇ ಈಗ ಪುಲ್ವಾಮಾ ಸಾವುಗಳಿಗೆ ನೇರ ಕಾರಣವಾಗಿದೆ.

Stratergical, policy ವಿಷಯವನ್ನು ಕೇವಲ ಮಿಲಿಟರಿ ನೆಲೆಯಲ್ಲಿ ಯೋಚಿಸುವ ಹುಂಬತನಕ್ಕೆ ಬಡ ಕುಟುಂಬಗಳಿಂದ ನಮ್ಮ ಸೈನಿಕರು ಪ್ರಾಣ ತೆರುತ್ತಿದ್ದಾರೆ. ಅರ್ನಾಬ್‌ಗಳು, ರಂಗ-ಇತ್ಯಾದಿಗಳು ಯುದ್ಧ ಎಂದು ಅರಚುತ್ತಿದ್ದರೆ, ಜಾಲತಾಣಗಳಲ್ಲಿ ಇತಿಹಾಸದ ಅರಿವೇ ಇಲ್ಲದವರು ಬಿಜೆಪಿಗೆ ಲಾಭ ಆಗುವಂತೆ ತಮ್ಮ ನಕಲಿ ದೇಶಪ್ರೇಮವನ್ನು ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...