Homeಅಂಕಣಗಳುಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ 'ಪಾಲಿಸಿ'ಯೇ ಕಾರಣ....

ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ಪುಲ್ವಾಮಾ ಹತ್ಯಾಕಾಂಡ ಸಂಭವಿಸಲು ಮೂಲ ಕಾರಣ ಕಾಶ್ಮೀರದಲ್ಲಿ ಈ 5 ವರ್ಷಗಳಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಉಲ್ಬಣವಾಗಿರುವುದು. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಕಾಶ್ಮೀರ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ಮಾರ್ಗ ಎಂಬ ಅದರ ಧೋರಣೆಯಿಂದಾಗಿ ಕಾಶೀರದಲ್ಲಿ ಇಂದು ಜನಜೀವನವೂ ಕಷ್ಟವಾಗಿದೆ.
ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಗೆಚ್ಚಿದೆ.

ಸೈನಿಕರ ಹತ್ಯೆ: ಶೇ. 93ರಷ್ಟು ಹೆಚ್ಚಳ!

ಮೋದಿ ಅವಧಿಯಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿಗಳು

ಕಳೆದ ಐದು ವರ್ಷಗಳ (2014-18) ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮೋದಿಯ ‘ಬಲಿಷ್ಠ ಸರ್ಕಾರ’ದ ಅವಧಿಯಲ್ಲಿ ಅಲ್ಲಿ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ. ಉಗ್ರ ದಾಳಿಯ ಪ್ರಕರಣಗಳು ಶೇ. 173ರಷ್ಟು ಹೆಚ್ಚಿವೆ. ಆದರೆ ಇವತ್ತು ಪುಲ್ವಾಮಾದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಜೆಪಿಗರು ಮತ್ತು ಸೋಷಿಯಲ್ ಮೀಡಿಯಾದ ‘ಭಕ್ತರ’ ಕಣ್ಣಿಗೆ ದಿನವೂ ಕಾಶ್ಮೀರದಲ್ಲಿ ಹುತಾತ್ಮರಾಗುತ್ತಲೇ ಇರುವ ಒಬ್ಬಿಬ್ಬರು ಸೈನಿಕರ ಬಗ್ಗೆ ಎಂದೂ ತಲೆ ಕೆಡಿಸಿಕೊಂಡಿಲ್ಲ. ಈಗ ಚುನಾವಣೆ ಹತ್ತಿರ ಬಂದಿರುವುದರಿಂದ, ಪುಲ್ವಾಮಾ ಘಟನೆಯನ್ನು ಮುಂದು ಮಾಡಿ, ಕಾಶ್ಮೀರ ಸಮಸ್ಯೆಗೆ ಬಿಜೆಪಿ ಮಾತ್ರ, ಅದರಲ್ಲೂ ಮೋದಿ ಮಾತ್ರ ಉತ್ತರ ನೀಡಬಲ್ಲರು ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಇದೇ ಮೋದಿಯ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರು ಮತ್ತು ನಾಗರಿಕರ ಹತ್ಯೆ ಸಂಖ್ಯೆ ಏರುತ್ತಲೇ ಬಂದಿದೆ.

ಇದೇ ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಸರ್ಕಾರವೇ ನೀಡಿದ ಮಾಹಿತಿ-ಅಂಕಿಸಂಖ್ಯೆಯ ಪ್ರಕಾರ, 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಅಂದರೆ ತಿಂಗಳಿಗೆ ಸರಾಸರಿ 28 ಕೃತ್ಯಗಳು! ಆಗ ಮೋದಿಗೆ ಮತ್ತು ಅವರ ಭಕ್ತರಿಗೆ ಕಾಶ್ಮೀರ ನೆನಪೇ ಆಗಲಿಲ್ಲ! ಅಲ್ಲಿ ಮಿಲಿಟರಿಯನ್ನು ಇನ್ನಷ್ಟು ಹೆಚ್ಚಿಸಿ ಪರಿಸ್ಥಿತಿಯನ್ನು ಕೇಂದ್ರ ಇನ್ನಷ್ಟು ಹದಗೆಡಿಸಿತು.

ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಹತರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ

2018ರಲ್ಲಂತೂ ಅಲ್ಲಿ ಪ್ರತಿ ತಿಂಗಳು ಸರಾಸರಿ 15 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಸೈನಿಕರು ಹುತಾತ್ಮರಾಗುತ್ತಲೇ ಇದ್ದಾರೆ. ನಾಗರಿಕರೂ ಬಲಿಯಾಗುತ್ತಿದ್ದಾರೆ. ಭಯೋತ್ಪಾದಕರ ದಾಳಿ ಮತ್ತು ಸೇನೆಯ ಅಟ್ಟಹಾಸ ಎರಡರ ನಡುವೆ ಸಿಕ್ಕಿರುವ ಅಲ್ಲಿಯ ಸಾಮಾನ್ಯ ನಾಗರಿಕರ ಬಗ್ಗೆ ವೇಷಭಕ್ತರು ಎಂದೂ ಯೋಚಿಸಲೇ ಇಲ್ಲವಲ್ಲ? ಮೋದಿ ಅವಧಿಯಲ್ಲಿ ಭಯೋತ್ಪಾದನಾ ಕೃತ್ಯ ಮತ್ತು ಸೇನೆಯ ಕ್ರಮಗಳಿಂದ ಪ್ರತಿವರ್ಷವೂ ನೂರಾರು ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ಈ ಅಮಾಯಕರ ಸಾವುಗಳ ಬಗ್ಗೆ ಸಂತಾಪ ಇರದವನಿಗೆ ಮೊನ್ನೆ ಹುತಾತ್ಮರಾದ ಸೈನಿಕರ ಬಗ್ಗೆ ಸಂತಾಪ ಮಿಡಿಯುವ ಯಾವ ಹಕ್ಕೂ ಇಲ್ಲ. ಅಷ್ಟಕ್ಕೂ ಈಗ ಸೈನಿಕರ ಹೆಸರಲ್ಲಿ ಇವರೆಲ್ಲ ಮೊಸಳೆ ಕಣ್ಣೀರು ಹಾಕುತ್ತಲೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟವರು. ಮೋದಿ ಅವಧಿಯಲ್ಲಿ (2014-18) ಕಾಶ್ಮೀರದಲ್ಲಿ ಒಟ್ಟು 339 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಂದರೆ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ.
ಹಾಗಾದರೆ ಈ ಅವಧಿಯಲ್ಲಿ ಮೋದಿ ಏನೂ ಕ್ರಮ ಕೈಗೊಳ್ಳಲಿಲ್ಲವೇಕೆ? ರಾಜಕೀಯ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ದಾರಿ ಎಂದು ಹೊರಟಾಗ ಇಂಥದ್ದೆಲ್ಲ ಸಂಭವಿಸುತ್ತದೆ ಎಂಬುದು ಜಗತ್ತಿನ ಹಲವಾರು ಕಡೆ ಪ್ರೂವ್ ಆಗಿದೆ. ಹಾಗಿದ್ದೂ ಇವತ್ತು ಮತ್ತೆ ಮಿಲಿಟರಿ ಕ್ರಮ ಮಾತ್ರದಿಂದಲೇ ಪರಿಹಾರ ಎಂಬಂತೆ ಕೆಲವು ಮೂರ್ಖ ಆ್ಯಂಕರ್‌ಗಳು, ಸಾವಿರಾರು ನೆಟ್ಟಿಗರು ಅರಚುತ್ತಿದ್ದಾರೆ. ಇವರೆಲ್ಲರಿಗೆ ದೇಶಭಕ್ತಿ ಎಂದರೇನೇ ಕೊಲ್ಲುವ ಆಟ, ಆದರೆ ತಾವು ಮಾತ್ರ ಸೇಫ್ ಆಗಿರಬೇಕು.

ಉಗ್ರರ ನುಸುಳುವಿಕೆಯಲ್ಲೂ ಹೆಚ್ಚಳ

2016-18 ಅವಧಿಯಲ್ಲಿ ಹೆಚ್ಚಿರುವ ಉಗ್ರರ ನುಸುಳುವಿಕೆ ಪ್ರಮಾಣ

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಇದೇ ನರೇಂದ್ರ ಮೋದಿಯವರು ಭಯೋತ್ಪಾದನಾ ಕೃತ್ಯ ಖಂಡಿಸುತ್ತ, “ದೇಶದ ಪ್ರಧಾನಿ ಏನು ಮಾಡುತ್ತಿದ್ದಾರೆ? ಅವರ ಬಳಿ ಬಿಎಸ್‌ಎಫ್ ಇದೆ, ಸಿಆರ್‌ಪಿಎಫ್ ಇದೆ….ಹೀಗಿರುವಾಗ ಉಗ್ರು ಗಡಿ ದಾಟಿ ನುಸುಳಿ ಬರಲು ಹೇಗೆ ಸಾಧ್ಯವಾಯಿತು” ಎಂದೆಲ್ಲ ಧೀರೋದ್ಧಾತ ಭಾಷಣ ಮಾಡುತ್ತಿದ್ದರು. ಈಗ ಲೋಕಸಭೆ ಮತ್ತು ರಾಜ್ಯಸಭೆಗೆ ಗೃಹ ಇಲಾಖೆಯೇ ನೀಡಿದ ಅಂಕಿಅಂಶಗಳ ಪ್ರಕಾರ ಉಗ್ರ ನುಸುಳುವಿಕೆ ಈಗ ಹಿಂದೆಂದಿಗಿಂತ ಹೆಚ್ಚಾಗಿದೆ. ಪುಲ್ವಾಮಾ ದುರಂತ ನಡೆಯುವ ವಾರ ಮೊದಲಷ್ಟೇ ಈ ಅಂಕಿಅಂಶಗಳು ಹೊರಬಿದ್ದಿವೆ. ಹಾಗಾದರೆ 5 ವರ್ಷ ಈ 56 ಇಂಚಿನ ಮೋದಿ ಏನು ಮಾಡುತ್ತಿದ್ದರು? ಗೃಹ ಇಲಾಖೆಯ ಮಾಹಿತಿ ಪ್ರಕಾರ, 2016-18ರ ಅವಧಿಯಲ್ಲಿ 400ಕ್ಕೂ ಹೆಚ್ಚು ಭಯೋತ್ಪಾದಕರು ಪಾಕಿಸ್ತಾನದಿಂದ ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಶಂಖೆಗಳಿವೆ. ಅಂದರೆ ಈ ಮೂರು ವರ್ಷದ ಅವಧಿಯಲ್ಲಿ ತಿಂಗಳಿಗೆ ಸರಾಸರಿ 11 ಉಗ್ರರು ಕಾಶ್ಮೀರದೊಳಕ್ಕೆ ನುಸುಳುತ್ತಿದ್ದಾರೆ. ರಕ್ಷಣಾ ಸಚಿವರನ್ನು ಡಮ್ಮಿ ಮಾಡಿ, ವಿದೇಶಾಂಗ ಸಚಿವಾಲಯವನ್ನು ಮೂಕಪ್ರೇಕ್ಷಕನಂತೆ ಕೂಡಿಸಿ, ಎಲ್ಲವನ್ನೂ ಪ್ರಧಾನಿ ಕಾರ್ಯಾಲಯವೇ ನಿಯಂತ್ರಿಸಲು ಹೋದದ್ದರ ಫಲವಿದು. ಇದರ ಪರಿಣಾಮವಾಗಿ ನಮ್ಮ ಸೈನಿಕರು ಜೀವ ಕಳೆದುಕೊಳ್ಳುತ್ತಲೇ ಇದ್ದಾರೆ. ದಿನವೂ ಹುತಾತ್ಮರಾಗುವ ಸೈನಿಕರ ಬಗ್ಗೆ ಎಂದೂ ಸಂತಾಪ ವ್ಯಕ್ತಪಡಿಸಿದವರು ಈಗ ಚುನಾವಣೆ ಹತ್ತಿರ ಬಂದ ಪರಿಣಾಮವಾಗಿ ಸೈನಿಕರ ಪರವಾಗಿ ಶೋಕಿಸುವ ನಾಟಕ ಆಡುತ್ತಿದ್ದಾರೆ.
ನೋಟು ಅಮಾನ್ಯೀ ನಂತರ ಉಗ್ರರ ಬೆನ್ನೆಲುಬು ಮುರಿಯಲಾಗಿದೆ ಎಂದು ಆಗಾಗ ಪ್ರಧಾನಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಸುಳ್ಳನ್ನು ಹೇಳುತ್ತಲೇ ಬಂದಿದ್ದಾರೆ. ಸರ್ಕಾರವೇ ಹೇಳಿದ ಪ್ರಕಾರ, 2018 ಜೂನ್ ತಿಂಗಳು ಒಂದರಲ್ಲೇ 38 ಉಗ್ರರು ಕಾಶ್ಮೀರದೊಳಕ್ಕೆ ನುಸುಳಿದ್ದಾರೆ ಎಂಬ ಸಂಶಯ ಇದೆ. ಇದೆಲ್ಲ ಗೊತ್ತಿದ್ದೂ ಕ್ರಮ ಕೈಗೊಳ್ಳದ ಮೋದಿ ಮತ್ತು ಅವರ ಸರ್ಕಾರವೇ ಈಗ ಪುಲ್ವಾಮಾ ಸಾವುಗಳಿಗೆ ನೇರ ಕಾರಣವಾಗಿದೆ.

Stratergical, policy ವಿಷಯವನ್ನು ಕೇವಲ ಮಿಲಿಟರಿ ನೆಲೆಯಲ್ಲಿ ಯೋಚಿಸುವ ಹುಂಬತನಕ್ಕೆ ಬಡ ಕುಟುಂಬಗಳಿಂದ ನಮ್ಮ ಸೈನಿಕರು ಪ್ರಾಣ ತೆರುತ್ತಿದ್ದಾರೆ. ಅರ್ನಾಬ್‌ಗಳು, ರಂಗ-ಇತ್ಯಾದಿಗಳು ಯುದ್ಧ ಎಂದು ಅರಚುತ್ತಿದ್ದರೆ, ಜಾಲತಾಣಗಳಲ್ಲಿ ಇತಿಹಾಸದ ಅರಿವೇ ಇಲ್ಲದವರು ಬಿಜೆಪಿಗೆ ಲಾಭ ಆಗುವಂತೆ ತಮ್ಮ ನಕಲಿ ದೇಶಪ್ರೇಮವನ್ನು ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...