Homeಅಂಕಣಗಳುಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ 'ಪಾಲಿಸಿ'ಯೇ ಕಾರಣ....

ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ಪುಲ್ವಾಮಾ ಹತ್ಯಾಕಾಂಡ ಸಂಭವಿಸಲು ಮೂಲ ಕಾರಣ ಕಾಶ್ಮೀರದಲ್ಲಿ ಈ 5 ವರ್ಷಗಳಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಉಲ್ಬಣವಾಗಿರುವುದು. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಕಾಶ್ಮೀರ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ಮಾರ್ಗ ಎಂಬ ಅದರ ಧೋರಣೆಯಿಂದಾಗಿ ಕಾಶೀರದಲ್ಲಿ ಇಂದು ಜನಜೀವನವೂ ಕಷ್ಟವಾಗಿದೆ.
ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಗೆಚ್ಚಿದೆ.

ಸೈನಿಕರ ಹತ್ಯೆ: ಶೇ. 93ರಷ್ಟು ಹೆಚ್ಚಳ!

ಮೋದಿ ಅವಧಿಯಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿಗಳು

ಕಳೆದ ಐದು ವರ್ಷಗಳ (2014-18) ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮೋದಿಯ ‘ಬಲಿಷ್ಠ ಸರ್ಕಾರ’ದ ಅವಧಿಯಲ್ಲಿ ಅಲ್ಲಿ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ. ಉಗ್ರ ದಾಳಿಯ ಪ್ರಕರಣಗಳು ಶೇ. 173ರಷ್ಟು ಹೆಚ್ಚಿವೆ. ಆದರೆ ಇವತ್ತು ಪುಲ್ವಾಮಾದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಜೆಪಿಗರು ಮತ್ತು ಸೋಷಿಯಲ್ ಮೀಡಿಯಾದ ‘ಭಕ್ತರ’ ಕಣ್ಣಿಗೆ ದಿನವೂ ಕಾಶ್ಮೀರದಲ್ಲಿ ಹುತಾತ್ಮರಾಗುತ್ತಲೇ ಇರುವ ಒಬ್ಬಿಬ್ಬರು ಸೈನಿಕರ ಬಗ್ಗೆ ಎಂದೂ ತಲೆ ಕೆಡಿಸಿಕೊಂಡಿಲ್ಲ. ಈಗ ಚುನಾವಣೆ ಹತ್ತಿರ ಬಂದಿರುವುದರಿಂದ, ಪುಲ್ವಾಮಾ ಘಟನೆಯನ್ನು ಮುಂದು ಮಾಡಿ, ಕಾಶ್ಮೀರ ಸಮಸ್ಯೆಗೆ ಬಿಜೆಪಿ ಮಾತ್ರ, ಅದರಲ್ಲೂ ಮೋದಿ ಮಾತ್ರ ಉತ್ತರ ನೀಡಬಲ್ಲರು ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಇದೇ ಮೋದಿಯ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರು ಮತ್ತು ನಾಗರಿಕರ ಹತ್ಯೆ ಸಂಖ್ಯೆ ಏರುತ್ತಲೇ ಬಂದಿದೆ.

ಇದೇ ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಸರ್ಕಾರವೇ ನೀಡಿದ ಮಾಹಿತಿ-ಅಂಕಿಸಂಖ್ಯೆಯ ಪ್ರಕಾರ, 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಅಂದರೆ ತಿಂಗಳಿಗೆ ಸರಾಸರಿ 28 ಕೃತ್ಯಗಳು! ಆಗ ಮೋದಿಗೆ ಮತ್ತು ಅವರ ಭಕ್ತರಿಗೆ ಕಾಶ್ಮೀರ ನೆನಪೇ ಆಗಲಿಲ್ಲ! ಅಲ್ಲಿ ಮಿಲಿಟರಿಯನ್ನು ಇನ್ನಷ್ಟು ಹೆಚ್ಚಿಸಿ ಪರಿಸ್ಥಿತಿಯನ್ನು ಕೇಂದ್ರ ಇನ್ನಷ್ಟು ಹದಗೆಡಿಸಿತು.

ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಹತರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ

2018ರಲ್ಲಂತೂ ಅಲ್ಲಿ ಪ್ರತಿ ತಿಂಗಳು ಸರಾಸರಿ 15 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಸೈನಿಕರು ಹುತಾತ್ಮರಾಗುತ್ತಲೇ ಇದ್ದಾರೆ. ನಾಗರಿಕರೂ ಬಲಿಯಾಗುತ್ತಿದ್ದಾರೆ. ಭಯೋತ್ಪಾದಕರ ದಾಳಿ ಮತ್ತು ಸೇನೆಯ ಅಟ್ಟಹಾಸ ಎರಡರ ನಡುವೆ ಸಿಕ್ಕಿರುವ ಅಲ್ಲಿಯ ಸಾಮಾನ್ಯ ನಾಗರಿಕರ ಬಗ್ಗೆ ವೇಷಭಕ್ತರು ಎಂದೂ ಯೋಚಿಸಲೇ ಇಲ್ಲವಲ್ಲ? ಮೋದಿ ಅವಧಿಯಲ್ಲಿ ಭಯೋತ್ಪಾದನಾ ಕೃತ್ಯ ಮತ್ತು ಸೇನೆಯ ಕ್ರಮಗಳಿಂದ ಪ್ರತಿವರ್ಷವೂ ನೂರಾರು ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ಈ ಅಮಾಯಕರ ಸಾವುಗಳ ಬಗ್ಗೆ ಸಂತಾಪ ಇರದವನಿಗೆ ಮೊನ್ನೆ ಹುತಾತ್ಮರಾದ ಸೈನಿಕರ ಬಗ್ಗೆ ಸಂತಾಪ ಮಿಡಿಯುವ ಯಾವ ಹಕ್ಕೂ ಇಲ್ಲ. ಅಷ್ಟಕ್ಕೂ ಈಗ ಸೈನಿಕರ ಹೆಸರಲ್ಲಿ ಇವರೆಲ್ಲ ಮೊಸಳೆ ಕಣ್ಣೀರು ಹಾಕುತ್ತಲೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟವರು. ಮೋದಿ ಅವಧಿಯಲ್ಲಿ (2014-18) ಕಾಶ್ಮೀರದಲ್ಲಿ ಒಟ್ಟು 339 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಂದರೆ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ.
ಹಾಗಾದರೆ ಈ ಅವಧಿಯಲ್ಲಿ ಮೋದಿ ಏನೂ ಕ್ರಮ ಕೈಗೊಳ್ಳಲಿಲ್ಲವೇಕೆ? ರಾಜಕೀಯ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ದಾರಿ ಎಂದು ಹೊರಟಾಗ ಇಂಥದ್ದೆಲ್ಲ ಸಂಭವಿಸುತ್ತದೆ ಎಂಬುದು ಜಗತ್ತಿನ ಹಲವಾರು ಕಡೆ ಪ್ರೂವ್ ಆಗಿದೆ. ಹಾಗಿದ್ದೂ ಇವತ್ತು ಮತ್ತೆ ಮಿಲಿಟರಿ ಕ್ರಮ ಮಾತ್ರದಿಂದಲೇ ಪರಿಹಾರ ಎಂಬಂತೆ ಕೆಲವು ಮೂರ್ಖ ಆ್ಯಂಕರ್‌ಗಳು, ಸಾವಿರಾರು ನೆಟ್ಟಿಗರು ಅರಚುತ್ತಿದ್ದಾರೆ. ಇವರೆಲ್ಲರಿಗೆ ದೇಶಭಕ್ತಿ ಎಂದರೇನೇ ಕೊಲ್ಲುವ ಆಟ, ಆದರೆ ತಾವು ಮಾತ್ರ ಸೇಫ್ ಆಗಿರಬೇಕು.

ಉಗ್ರರ ನುಸುಳುವಿಕೆಯಲ್ಲೂ ಹೆಚ್ಚಳ

2016-18 ಅವಧಿಯಲ್ಲಿ ಹೆಚ್ಚಿರುವ ಉಗ್ರರ ನುಸುಳುವಿಕೆ ಪ್ರಮಾಣ

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಇದೇ ನರೇಂದ್ರ ಮೋದಿಯವರು ಭಯೋತ್ಪಾದನಾ ಕೃತ್ಯ ಖಂಡಿಸುತ್ತ, “ದೇಶದ ಪ್ರಧಾನಿ ಏನು ಮಾಡುತ್ತಿದ್ದಾರೆ? ಅವರ ಬಳಿ ಬಿಎಸ್‌ಎಫ್ ಇದೆ, ಸಿಆರ್‌ಪಿಎಫ್ ಇದೆ….ಹೀಗಿರುವಾಗ ಉಗ್ರು ಗಡಿ ದಾಟಿ ನುಸುಳಿ ಬರಲು ಹೇಗೆ ಸಾಧ್ಯವಾಯಿತು” ಎಂದೆಲ್ಲ ಧೀರೋದ್ಧಾತ ಭಾಷಣ ಮಾಡುತ್ತಿದ್ದರು. ಈಗ ಲೋಕಸಭೆ ಮತ್ತು ರಾಜ್ಯಸಭೆಗೆ ಗೃಹ ಇಲಾಖೆಯೇ ನೀಡಿದ ಅಂಕಿಅಂಶಗಳ ಪ್ರಕಾರ ಉಗ್ರ ನುಸುಳುವಿಕೆ ಈಗ ಹಿಂದೆಂದಿಗಿಂತ ಹೆಚ್ಚಾಗಿದೆ. ಪುಲ್ವಾಮಾ ದುರಂತ ನಡೆಯುವ ವಾರ ಮೊದಲಷ್ಟೇ ಈ ಅಂಕಿಅಂಶಗಳು ಹೊರಬಿದ್ದಿವೆ. ಹಾಗಾದರೆ 5 ವರ್ಷ ಈ 56 ಇಂಚಿನ ಮೋದಿ ಏನು ಮಾಡುತ್ತಿದ್ದರು? ಗೃಹ ಇಲಾಖೆಯ ಮಾಹಿತಿ ಪ್ರಕಾರ, 2016-18ರ ಅವಧಿಯಲ್ಲಿ 400ಕ್ಕೂ ಹೆಚ್ಚು ಭಯೋತ್ಪಾದಕರು ಪಾಕಿಸ್ತಾನದಿಂದ ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಶಂಖೆಗಳಿವೆ. ಅಂದರೆ ಈ ಮೂರು ವರ್ಷದ ಅವಧಿಯಲ್ಲಿ ತಿಂಗಳಿಗೆ ಸರಾಸರಿ 11 ಉಗ್ರರು ಕಾಶ್ಮೀರದೊಳಕ್ಕೆ ನುಸುಳುತ್ತಿದ್ದಾರೆ. ರಕ್ಷಣಾ ಸಚಿವರನ್ನು ಡಮ್ಮಿ ಮಾಡಿ, ವಿದೇಶಾಂಗ ಸಚಿವಾಲಯವನ್ನು ಮೂಕಪ್ರೇಕ್ಷಕನಂತೆ ಕೂಡಿಸಿ, ಎಲ್ಲವನ್ನೂ ಪ್ರಧಾನಿ ಕಾರ್ಯಾಲಯವೇ ನಿಯಂತ್ರಿಸಲು ಹೋದದ್ದರ ಫಲವಿದು. ಇದರ ಪರಿಣಾಮವಾಗಿ ನಮ್ಮ ಸೈನಿಕರು ಜೀವ ಕಳೆದುಕೊಳ್ಳುತ್ತಲೇ ಇದ್ದಾರೆ. ದಿನವೂ ಹುತಾತ್ಮರಾಗುವ ಸೈನಿಕರ ಬಗ್ಗೆ ಎಂದೂ ಸಂತಾಪ ವ್ಯಕ್ತಪಡಿಸಿದವರು ಈಗ ಚುನಾವಣೆ ಹತ್ತಿರ ಬಂದ ಪರಿಣಾಮವಾಗಿ ಸೈನಿಕರ ಪರವಾಗಿ ಶೋಕಿಸುವ ನಾಟಕ ಆಡುತ್ತಿದ್ದಾರೆ.
ನೋಟು ಅಮಾನ್ಯೀ ನಂತರ ಉಗ್ರರ ಬೆನ್ನೆಲುಬು ಮುರಿಯಲಾಗಿದೆ ಎಂದು ಆಗಾಗ ಪ್ರಧಾನಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಸುಳ್ಳನ್ನು ಹೇಳುತ್ತಲೇ ಬಂದಿದ್ದಾರೆ. ಸರ್ಕಾರವೇ ಹೇಳಿದ ಪ್ರಕಾರ, 2018 ಜೂನ್ ತಿಂಗಳು ಒಂದರಲ್ಲೇ 38 ಉಗ್ರರು ಕಾಶ್ಮೀರದೊಳಕ್ಕೆ ನುಸುಳಿದ್ದಾರೆ ಎಂಬ ಸಂಶಯ ಇದೆ. ಇದೆಲ್ಲ ಗೊತ್ತಿದ್ದೂ ಕ್ರಮ ಕೈಗೊಳ್ಳದ ಮೋದಿ ಮತ್ತು ಅವರ ಸರ್ಕಾರವೇ ಈಗ ಪುಲ್ವಾಮಾ ಸಾವುಗಳಿಗೆ ನೇರ ಕಾರಣವಾಗಿದೆ.

Stratergical, policy ವಿಷಯವನ್ನು ಕೇವಲ ಮಿಲಿಟರಿ ನೆಲೆಯಲ್ಲಿ ಯೋಚಿಸುವ ಹುಂಬತನಕ್ಕೆ ಬಡ ಕುಟುಂಬಗಳಿಂದ ನಮ್ಮ ಸೈನಿಕರು ಪ್ರಾಣ ತೆರುತ್ತಿದ್ದಾರೆ. ಅರ್ನಾಬ್‌ಗಳು, ರಂಗ-ಇತ್ಯಾದಿಗಳು ಯುದ್ಧ ಎಂದು ಅರಚುತ್ತಿದ್ದರೆ, ಜಾಲತಾಣಗಳಲ್ಲಿ ಇತಿಹಾಸದ ಅರಿವೇ ಇಲ್ಲದವರು ಬಿಜೆಪಿಗೆ ಲಾಭ ಆಗುವಂತೆ ತಮ್ಮ ನಕಲಿ ದೇಶಪ್ರೇಮವನ್ನು ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...