Homeಕರ್ನಾಟಕಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‌ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಇನ್ನೊಂದು ಟ್ವೀಟ್‌ನಲ್ಲಿ ’ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ’ ಎಂದು ಹೇಳಿದ್ದಾರೆ.

’ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‌ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಂಬಂಧ ಕಾಂಗ್ರೆಸ್ ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದಿತ್ತು. ಜೆಡಿಎಸ್ ಹೆಸರು ಪ್ರಸ್ತಾಪ ಮಾಡಿದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ:  ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...