Homeಮುಖಪುಟದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ಈ ವಿಮಾನ, ಲಾರ್ಜ್ ಏರ್ಕ್ರಾಫ್ಟ್ ಇನ್ಫ್ರಾರೆಡ್ ಕೌಂಟರ್ ಮೆಶರ್ಸ್ ಎಂಬ ಅತ್ಯಾಧುನಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಹಾಗೂ ಸ್ವಯಂ ರಕ್ಷಣಾ ಸೂಟ್‌ಗಳನ್ನು ಒಳಗೊಂಡಿದೆ.

- Advertisement -
- Advertisement -

ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ಇಂದು ಅಮೆರಿಕಾದಿಂದ ದೆಹಲಿಗೆ ಬಂದಿಳಿದಿದೆ.

ಏರ್‌ಕ್ರಾಪ್ಟ್‌ ಚಿಹ್ನೆ ಎಂದೇ ಗುರುತಿಸಿರುವ ಈ ಏರ್‌ ಇಂಡಿಯಾ ಒನ್ ವಿಮಾನ ಅಮೆರಿಕದ ಟೆಕ್ಸಾಸ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ವಿಮಾನ ತಯಾರಕ ಕಂಪನಿ ಬೋಯಿಂಗ್​​ ಕಳೆದ ಆಗಸ್ಟ್​ನಲ್ಲೇ ಏರ್​ ಇಂಡಿಯಾಗೆ ವಿಮಾನವನ್ನ ಹಸ್ತಾಂತರಿಸಬೇಕಿತ್ತು.ಆದರೆ ತಾಂತ್ರಿಕ ಕಾರಣ, ಕೊರೊನಾ ಲಾಕ್‌ಡೌನ್ ಕಾರಣದಿಂದ ವಿಮಾನದ ಆಗಮನ ತಡವಾಗಿದೆ. ಗಣ್ಯವ್ಯಕ್ತಿಗಳು ಪ್ರಯಾಣಿಸಲು ವಿಶೇಷವಾಗಿ ನಿರ್ಮಿಸಲಾದ ಇಂಥದ್ದೇ ಮತ್ತೊಂದು ಬಿ 777 ವಿಮಾನವೂ ಮುಂದಿನ ದಿನಗಳಲ್ಲಿ ಭಾರತಕ್ಕೆ ಬರಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಪ್ರಸ್ತುತ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗಳು  ಏರ್​ ಇಂಡಿಯಾದ ಬಿ747 ವಿಮಾನವನ್ನ ಪ್ರಯಾಣಕ್ಕಾಗಿ ಬಳಸುತ್ತಿದ್ದು, ಇದನ್ನ ಏರ್​ ಇಂಡಿಯಾ ಪೈಲಟ್​ಗಳೇ ಚಾಲನೆ ಮಾಡುತ್ತಾರೆ. ಆದರೆ ಹೊಸದಾಗಿ ಆಗಮಿಸಿರುವ ವಿಶೇಷ ವಿಮಾನವನ್ನ ಏರ್​ ಇಂಡಿಯಾ ಪೈಲಟ್​ಗಳ ಬದಲಾಗಿ ಭಾರತೀಯ ವಾಯುಸೇನೆಯ ಪೈಲಟ್​​ಗಳು ಚಾಲನೆ ಮಾಡಲಿದ್ದಾರೆ.

ಈ ವಿಮಾನ, ಲಾರ್ಜ್ ಏರ್ಕ್ರಾಫ್ಟ್ ಇನ್ಫ್ರಾರೆಡ್ ಕೌಂಟರ್ ಮೆಶರ್ಸ್ ಎಂಬ ಅತ್ಯಾಧುನಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಹಾಗೂ ಸ್ವಯಂ ರಕ್ಷಣಾ ಸೂಟ್‌ಗಳನ್ನು ಒಳಗೊಂಡಿದೆ. ಹೊಸ ವಿಮಾನವು ಇಂಧನ ತುಂಬಲು ನಡುವೆ ಎಲ್ಲೂ ಇಳಿಯದೆ 17 ಗಂಟೆಗಳ ಕಾಲ ನಿರಂತರವಾಗಿ ಹಾರಬಲ್ಲದು.

ಈ ಎರಡೂ ವಿಮಾನಗಳು ವಿವಿಐಪಿಗಳು ಸಂಚರಿಸುವ ಸುಸಜ್ಜಿತ ವಿಮಾನಗಳನ್ನಾಗಿಸಿ ಮಾರ್ಪಡಿಸುವ ಮುನ್ನ 2018 ರಲ್ಲಿ ಏರ್ ಇಂಡಿಯಾದ ವಾಣಿಜ್ಯ ವಿಭಾಗದಲ್ಲಿದ್ದವು. ಈ ಎರಡು ವಿಮಾನಗಳ ಬೆಲೆ ₹ 8600 ಕೋಟಿ.

ವಿಮಾನದಲ್ಲಿ ಅಳವಡಿಸಲಾಗಿರುವ ಸುಧಾರಿತ ಸಂವಹನ ವ್ಯವಸ್ಥೆಯಿಂದಾಗಿ, ಪ್ರಧಾನಿ ಅಥವಾ ರಾಷ್ಟ್ರಪತಿಗಳು ಹ್ಯಾಕ್ ಆಗುವ ಚಿಂತೆ ಇಲ್ಲದೆ ಸಿಬ್ಬಂದಿಯೊಂದಿಗೆ ವಿಡಿಯೋ ಅಥವಾ ಆಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...