Homeಮುಖಪುಟದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ಈ ವಿಮಾನ, ಲಾರ್ಜ್ ಏರ್ಕ್ರಾಫ್ಟ್ ಇನ್ಫ್ರಾರೆಡ್ ಕೌಂಟರ್ ಮೆಶರ್ಸ್ ಎಂಬ ಅತ್ಯಾಧುನಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಹಾಗೂ ಸ್ವಯಂ ರಕ್ಷಣಾ ಸೂಟ್‌ಗಳನ್ನು ಒಳಗೊಂಡಿದೆ.

- Advertisement -
- Advertisement -

ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ಇಂದು ಅಮೆರಿಕಾದಿಂದ ದೆಹಲಿಗೆ ಬಂದಿಳಿದಿದೆ.

ಏರ್‌ಕ್ರಾಪ್ಟ್‌ ಚಿಹ್ನೆ ಎಂದೇ ಗುರುತಿಸಿರುವ ಈ ಏರ್‌ ಇಂಡಿಯಾ ಒನ್ ವಿಮಾನ ಅಮೆರಿಕದ ಟೆಕ್ಸಾಸ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ವಿಮಾನ ತಯಾರಕ ಕಂಪನಿ ಬೋಯಿಂಗ್​​ ಕಳೆದ ಆಗಸ್ಟ್​ನಲ್ಲೇ ಏರ್​ ಇಂಡಿಯಾಗೆ ವಿಮಾನವನ್ನ ಹಸ್ತಾಂತರಿಸಬೇಕಿತ್ತು.ಆದರೆ ತಾಂತ್ರಿಕ ಕಾರಣ, ಕೊರೊನಾ ಲಾಕ್‌ಡೌನ್ ಕಾರಣದಿಂದ ವಿಮಾನದ ಆಗಮನ ತಡವಾಗಿದೆ. ಗಣ್ಯವ್ಯಕ್ತಿಗಳು ಪ್ರಯಾಣಿಸಲು ವಿಶೇಷವಾಗಿ ನಿರ್ಮಿಸಲಾದ ಇಂಥದ್ದೇ ಮತ್ತೊಂದು ಬಿ 777 ವಿಮಾನವೂ ಮುಂದಿನ ದಿನಗಳಲ್ಲಿ ಭಾರತಕ್ಕೆ ಬರಲಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಪ್ರಸ್ತುತ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗಳು  ಏರ್​ ಇಂಡಿಯಾದ ಬಿ747 ವಿಮಾನವನ್ನ ಪ್ರಯಾಣಕ್ಕಾಗಿ ಬಳಸುತ್ತಿದ್ದು, ಇದನ್ನ ಏರ್​ ಇಂಡಿಯಾ ಪೈಲಟ್​ಗಳೇ ಚಾಲನೆ ಮಾಡುತ್ತಾರೆ. ಆದರೆ ಹೊಸದಾಗಿ ಆಗಮಿಸಿರುವ ವಿಶೇಷ ವಿಮಾನವನ್ನ ಏರ್​ ಇಂಡಿಯಾ ಪೈಲಟ್​ಗಳ ಬದಲಾಗಿ ಭಾರತೀಯ ವಾಯುಸೇನೆಯ ಪೈಲಟ್​​ಗಳು ಚಾಲನೆ ಮಾಡಲಿದ್ದಾರೆ.

ಈ ವಿಮಾನ, ಲಾರ್ಜ್ ಏರ್ಕ್ರಾಫ್ಟ್ ಇನ್ಫ್ರಾರೆಡ್ ಕೌಂಟರ್ ಮೆಶರ್ಸ್ ಎಂಬ ಅತ್ಯಾಧುನಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಹಾಗೂ ಸ್ವಯಂ ರಕ್ಷಣಾ ಸೂಟ್‌ಗಳನ್ನು ಒಳಗೊಂಡಿದೆ. ಹೊಸ ವಿಮಾನವು ಇಂಧನ ತುಂಬಲು ನಡುವೆ ಎಲ್ಲೂ ಇಳಿಯದೆ 17 ಗಂಟೆಗಳ ಕಾಲ ನಿರಂತರವಾಗಿ ಹಾರಬಲ್ಲದು.

ಈ ಎರಡೂ ವಿಮಾನಗಳು ವಿವಿಐಪಿಗಳು ಸಂಚರಿಸುವ ಸುಸಜ್ಜಿತ ವಿಮಾನಗಳನ್ನಾಗಿಸಿ ಮಾರ್ಪಡಿಸುವ ಮುನ್ನ 2018 ರಲ್ಲಿ ಏರ್ ಇಂಡಿಯಾದ ವಾಣಿಜ್ಯ ವಿಭಾಗದಲ್ಲಿದ್ದವು. ಈ ಎರಡು ವಿಮಾನಗಳ ಬೆಲೆ ₹ 8600 ಕೋಟಿ.

ವಿಮಾನದಲ್ಲಿ ಅಳವಡಿಸಲಾಗಿರುವ ಸುಧಾರಿತ ಸಂವಹನ ವ್ಯವಸ್ಥೆಯಿಂದಾಗಿ, ಪ್ರಧಾನಿ ಅಥವಾ ರಾಷ್ಟ್ರಪತಿಗಳು ಹ್ಯಾಕ್ ಆಗುವ ಚಿಂತೆ ಇಲ್ಲದೆ ಸಿಬ್ಬಂದಿಯೊಂದಿಗೆ ವಿಡಿಯೋ ಅಥವಾ ಆಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...