Homeಮುಖಪುಟಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಅಕ್ಟೋಬರ್ 03 ರಂದು ಗಾಜಿಯಾಬಾದ್‌ ನಗರದಾದ್ಯಂತ ಪೌರಕಾರ್ಮಿಕರು ಸ್ವಚ್ಛತಾ ಕೆಲಸ ತ್ಯಜಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಲ್ಮಿಕಿ ಸಮಾಜದ ಅನಿಲ್ ಕಲ್ಯಾಣಿ ತಿಳಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಜರುಗಿದ 19 ವರ್ಷದ ದಲಿತ ಹೆಣ್ಣುಮಗಳ ಮೇಲಿನ ಅತ್ಯಾಚಾರ, ಕೊಲೆ ಮತ್ತು ಶವವನ್ನು ಆಕೆಯ ಕುಟುಂಬದವರಿಗೆ ನೀಡದೇ ಪೊಲೀಸರೇ ಸುಟ್ಟುಹಾಕಿದ ದುರ್ಘಟನೆಗೆ ರಾಷ್ಟ್ರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಗಾಜಿಯಾಬಾದ್ ವಕೀಲರು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಒತ್ತಾಯಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಮಿತಿ ಮೀರಿವೆ. ಇವುಗಳನ್ನು ನಿಯಂತ್ರಿಸಿ ಮಹಿಳೆಯರಿಗೆ ರಕ್ಷಣೆ ನೀಡಲು ಮುಖ್ಯಮಂತ್ರಿ ಆದಿತ್ಯನಾಥ್ ವಿಫಲರಾಗಿದ್ದಾರೆ. ಬದಲಿಗೆ ಸರ್ಕಾರ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದು ಇದು ಇನ್ನಷ್ಟು ಅತ್ಯಾಚಾರಗಳಿಗೆ ಕಾರಣವಾಗುತ್ತಿದೆ. ಹಾಗಾಗಿ ಕೂಡಲೇ ಆದಿತ್ಯನಾಥ್‌ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿ ರಾಷ್ಟ್ರಪತಿ ಆಡಳಿತ ಜಾರಿಯಾಗಬೇಕು” ಎಂದು ವಕೀಲರು ಒತ್ತಾಯಿಸಿದ್ದಾರೆ.

ಆದಿವಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಗಾಜಿಯಾಬಾದ್‌ನ ಸಿವಿಲ್ ಕೋರ್ಟ್ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿದ ವಕೀಲರು, ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಸಿಎಂ ಆದಿತ್ಯನಾಥ್ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ವಕೀಲರು, ಆದಿತ್ಯನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ ಏರುತ್ತಿರುವ ಮಹಿಳೆಯರ ಮೇಲಿನ ಅಪರಾಧ ತಡೆಯಲು ಆದಿತ್ಯನಾಥ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.

ವಕೀಲರ ತಂಡದ ನಹರ್ ಸಿಂಗ್ ಯಾದವ್ ಮಾತನಾಡಿ “ರಾಜ್ಯದಲ್ಲಿ ಅಪರಾಧಗಳನ್ನು, ಮಹಿಳೆಯರ ಮೇಲಿನ ಹಿಂಸೆಯನ್ನು ತಡೆಯುವಲ್ಲಿ ಸಿಎಂ ಆದಿತ್ಯನಾಥ್ ಸಂಪೂರ್ಣ ವಿಫಲರಾಗಿದ್ದಾರೆ. ಪ್ರಸ್ತುತ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಪೊಲೀಸರು ಸಾಕ್ಷಿಗಳನ್ನು ಮುಚ್ಚಿಹಾಕಲು ಯುವತಿಯ ಮೃತದೇಹವನ್ನು ನೀಡದೇ ಸುಟ್ಟುಹಾಕಿದ್ದಾರೆ. ನಮಗೆ ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಉಳಿದಿಲ್ಲ. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಯಾಗಬೇಕೆಂದು” ಒತ್ತಾಯಿಸಿದ್ದಾರೆ.

Photo Courtesty: Deccan Herald

ಈಗಿನಿಂದಲೇ ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ ರಕ್ಷಣೆ ನೀಡಬೇಕು. 2 ಕೋಟಿ ರೂ ಪರಿಹಾರ, ಸರ್ಕಾರಿ ಉದ್ಯೋಗ ಮತ್ತು ದೆಹಲಿಯಲ್ಲಿ ಮನೆ ನೀಡಬೇಕು. ನಿಷ್ಪಕ್ಷಪಾತ ತನಿಖೆಗಾಗಿ ಬೇರೆ ರಾಜ್ಯದ ತ್ವರಿತ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ವಕೀಲರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಲ್ಮಿಕಿ ಸಮಾಜದ ಕಾರ್ಯಕರ್ತರು ಗಾಜಿಯಾಬಾದ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಸ್ತೆಗಳನ್ನು ನಿರ್ಭಂಧಿಸಿದ್ದಾರೆ. ಸಿಎಂ ಆದಿತ್ಯಾನಾಥ್‌ರವರ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ಕುಟುಂಬದ ಒಪ್ಪಿಗೆಯಿಲ್ಲದೇ ಶವವನ್ನು ಸುಟ್ಟು ಹಾಕಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.  ಅಕ್ಟೋಬರ್ 03 ರಂದು ಗಾಜಿಯಾಬಾದ್‌ ನಗರದಾದ್ಯಂತ ಪೌರಕಾರ್ಮಿಕರು ಸ್ವಚ್ಛತಾ ಕೆಲಸ ತ್ಯಜಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಲ್ಮಿಕಿ ಸಮಾಜದ ಅನಿಲ್ ಕಲ್ಯಾಣಿ ತಿಳಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್: ತೀವ್ರಗೊಂಡ ಆಕ್ರೋಶ, ಪ್ರತಿಭಟನೆ ಹತ್ತಿಕ್ಕಲು ಇಂಡಿಯಾ ಗೇಟ್ ಬಳಿ ನಿಷೇದಾಜ್ಞೆ ಹೇರಿದ ದೆಹಲಿ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...