Homeಮುಖಪುಟಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು.

- Advertisement -
- Advertisement -

ಉತ್ತರ ಕನ್ನಡದ ಹಲವೆಡೆ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತು ಇವತ್ತಿಗೂ ಅಚ್ಚಳಿಯದೇ ಉಳಿದಿದೆ! ಜಿಲ್ಲೆಗೆ ಹಲವು ಬಾರಿ ಗಾಂಧೀಜಿ ಬಂದುಹೋಗಿದ್ದಾರೆ. ಗಾಂಧೀಜಿ ಉತ್ತರ ಕನ್ನಡಕ್ಕೆ ಆಗಮಿಸುತ್ತಿದ್ದುದು ಸ್ವಾತಂತ್ರ್ಯ ಚಳವಳಿ ಜಾಗೃತಿಗೆಂಬುದು ಸಾಮಾನ್ಯ ಅಭಿಪ್ರಾಯ. ಆದರೆ ಗಾಂಧೀ ಹೊರಟರೆಂದರೆ ಬರೀ ಸ್ವರಾಜ್ಯ ಕನಸಷ್ಟೇ ಅಲ್ಲ, ಸಾಮಾಜಿಕ ಮತ್ತು ಜೀವಪರ ತುಡಿತವೂ ಇರುತ್ತಿತ್ತು. ಉಪ್ಪು ತಯಾರಿಕೆ ಮತ್ತು ಮಾರಾಟವನ್ನು ಬ್ರಿಟಿ‍‍‍ಷ್ ಸರ್ಕಾರ ನಿಷೇಧಿಸಿದಾಗ ಗಾಂಧೀಜಿ ಆದಿಯಾಗಿ ಹಿರಿಯ ರಾಷ್ಟ್ರೀಯ ನೇತಾರರು ತಿರುಗಿ ಬಿದ್ದಿದ್ದರು. ಅಸಹಕಾರ ಚಳುವಳಿಯೊಂದೇ ಈ ಸಮಸ್ಯೆ ಪರಿಹಾರಕ್ಕೆ ತಾರಕ ತಂತ್ರವೆಂಬ ತೀರ್ಮಾನಕ್ಕೆ ಬಂದಿದ್ದರು. 20-2-1930ರಂದು ಬಳ್ಳಾರಿಯಲ್ಲಿ ಸಭೆ ಸೇರಿದ್ದ ಪ್ರದೇಶ್ ಕಾಂಗ್ರೆಸ್ ಸಮಿತಿ ಉತ್ತರ ಕನ್ನಡದ ಅಂಕೋಲಾ ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹಕ್ಕೆ ಸರಿಯಾದ ಸ್ಥಳವೆಂದು ನಿರ್ಧರಿಸಿತ್ತು.

ಪೊಲೀಸರ ಅಡೆತಡೆಯನ್ನೆಲ್ಲ ಕಡೆಗಣಿಸಿ ಏಪ್ರಿಲ್ 13ರಂದು ಭರ್ಜರಿ ಮೆರವಣಿಗೆಯೊಂದಿಗೆ ಅಂಕೋಲೆಯ ಜನಸಾಗರ ಕಡಲ ಕಿನಾರೆಯತ್ತ ಹೊರಟಿತ್ತು! ಅಲ್ಲಿ ಬ್ರಿಟಿಷ್ ಸರ್ಕಾರದ ಕಾನೂನು ಧಿಕ್ಕರಿಸಿ ಉಪ್ಪು ತಯಾರಿಕೆ, ಮಾರಾಟ ಮಾಡಲಾಯಿತು. ಅಂಕೋಲೆಯ ಹಳ್ಳಿಹಳ್ಳಿಯಲ್ಲಿ ಚಳವಳಿ ಭುಗಿಲೆದ್ದಿತು! ಅಸಹಕಾರ ಚಳವಳಿ, ಕರಬಂಧಿ ಚಳವಳಿ ಮತ್ತು ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲೆ ನಿರ್ಣಾಯಕ ಪಾತ್ರ ವಹಿಸಿತ್ತು. ಹೋರಾಟಗಾರ ರೈತರು ತಮ್ಮ ಭೂಮಿ ಕಳಕೊಳ್ಳಬೇಕಾಗಿ ಬಂತು; ಆದರೂ ಅಂಜದೆ ಅಳುಕದೆ ಪೊಲೀಸರ ಲಾಠಿಗೆ ಎದೆಗೊಟ್ಟು ನಿಂತರು! ಗುಜರಾತಿನ ಬಾರ್ಡೋಲಿಯಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ ಮಾದರಿಯಲ್ಲೇ ಅಂಕೋಲೆಯಲ್ಲೂ ಚಳುವಳಿ ಆಗಿತ್ತು. ಅಂಕೋಲೆಗೆ ಕರ್ನಾಟಕದ ಬಾರ್ಡೋಲಿಯೆಂದು ಹೆಸರು ಬಂದಿದ್ದೇ ಈ ಯಶಸ್ವೀ ಕರನಿರಾಕರಣೆ, ಉಪ್ಪಿನ ಸತ್ಯಾಗ್ರಹದಿಂದ! ಈ ಹೊತ್ತಲ್ಲಿ ಅಂಕೋಲೆಗೆ ಬಂದಿದ್ದ ಗಾಂಧೀಜಿ ಸ್ಪೂರ್ತಿಯ ಚಿಲುಮೆಯಾಗಿದ್ದರು.

photo courtesy : Banglore Mirror

ಕರನಿರಾಕರಣೆ ಚಳವಳಿಯು ಕರಾವಳಿ ದಾಟಿ ಮಲೆನಾಡಿಗೂ ವ್ಯಾಪಿಸಿತ್ತು. ಗಾಂಧೀಜಿ ಕುಮಟಾ-ಶಿರಸಿ-ಸಿದ್ದಾಪುರಕ್ಕೂ ಹೋಗಿ ಹೋರಾಟ ಹುರಿಗೊಳ್ಳುವಂತೆ ಮಾಡಿದ್ದರು. 1934ರಲ್ಲಿ ಸಿದ್ದಾಪುರಕ್ಕೆ ಬಂದಿದ್ದ ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರ್ತಿ ಮಹಾದೇವಿತಾಯಿಯವರ ಮನೆಗೂ ಭೇಟಿ ಕೊಟ್ಟಿದ್ದರು. ಈ ಮಹಾದೇವಿತಾಯಿ ಸಿದ್ದಾಪುರದ ಪ್ರತಿಷ್ಠಿತ “ದೊಡ್ಮನೆ ಹೆಗಡೆ” ಕುಟುಂಬದವರು; ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ದೊಡ್ಡಪ್ಪನ ಮಗಳು. ಒಂದು ಮೂಲದ ಪ್ರಕಾರ ಮಹಾದೇವಿ ಬಾಲವಿಧವೆ; ಆಕೆಗೆ ಕೇಶಮುಂಡನ ಮಾಡಲಾಗಿತ್ತು. ಆಕೆಗಾಗುತ್ತಿದ್ದ ಹಿಂಸೆಯ ಸುದ್ದಿ ತಿಳಿದಿದ್ದ ಗಾಂಧೀಜಿ ಇದೊಂದು ಹೇಯ-ಬರ್ಬರ ದೌರ್ಜನ್ಯವೆಂದು ಹೇಳಿದ್ದರು; ಇಲ್ಲಾಕೆಗೆ ನೆಮ್ಮದಿಯಿಂದಿರಲು ಸಾಧ್ಯವಾಗದಿದ್ದರೆ ತಮ್ಮ ಆಶ್ರಮಕ್ಕೆ ಕರೆದೊಯ್ಯುವುದಾಗಿ ಹೇಳಿದರು. ಮಹಾದೇವಿಯೂ ಒಪ್ಪಿ ಗಾಂಧಿ ಆಶ್ರಮ ಸೇರಿಕೊಳ್ಳುತ್ತಾರೆ. ಅಕ್ಕನ ಉತ್ತರ ಭಾರತದ ಸಂಪರ್ಕ ಬಳಸಿಕೊಂಡು ರಾಮಕೃಷ್ಣ ಹೆಗಡೆ ಬನಾರಸ್ ವಿಶ್ವವಿದ್ಯಾಲಯ ಸೇರಿಕೊಳ್ಳುತ್ತಾರೆ. ಅಲ್ಲಿ ಹಿಂದಿ-ಇಂಗ್ಲಿಷ್‌ನಲ್ಲಿ ಪಾರಂಗತರಾದ ಹೆಗಡೆ ಆ ಭಾಷಾ ಚಾಕಚಾಕ್ಯತೆಯಿಂದಲೇ ರಾಷ್ಟ್ರ ನಾಯಕರ ಸಾಲಿನಲ್ಲಿ ಮಿಂಚಲು ಅವಕಾಶವೂ ಆಯಿತು!

ಇದೇ ಸಿದ್ದಾಪುರ ಹುಡದೀಬೈಲ್‍ನಲ್ಲಿ 1934ರ ಮಾರ್ಚ್‍ನಲ್ಲಿ ಗಾಂಧೀಯವರ ಭಾಷಣ ಕಾರ್ಯಕ್ರಮವಿತ್ತು. ದೊಡ್ಡ ಜನಸ್ತೋಮವೇ ನೆರೆದಿತ್ತು! ಸಿದ್ದಾಪುರದ ಮುಖಂಡರು ‘ದೇವಿ ಶಿವಪ್ಪ ಹಸ್ಲರ್’ ಎಂಬ ದಲಿತ ಮಹಿಳೆಯನ್ನು ವಾದ್ಯದೊಂದಿಗೆ ವೇದಿಕೆಗೆ ಕರೆತರುತ್ತಾರೆ. ಶಂಕರ ಗುಲ್ವಾಡಿ ಎಂಬುವರು ದೇವಿಯನ್ನು ಗಾಂಧೀಜಿಗೆ ಪರಿಚಯಿಸುತ್ತಾರೆ. ಸ್ವಾತಂತ್ರ್ಯ ಚಳವಳಿಗೆ ತನ್ನದೇ ರೀತಿಯಲ್ಲಿ ಅರ್ಪಿಸಿಕೊಂಡಿದ್ದ ಆಕೆಯ ಉದಾತ್ತತೆ-ಪ್ರಾಮಾಣಿಕತೆ ಕೇಳಿ ಗಾಂಧೀಜಿ ಕಣ್ಣಲ್ಲಿ ನೀರು ಬರುತ್ತದೆ!! “ದೇವಿಯಂಥ ಪುಣ್ಯಾತ್ಮರು ಈ ಧರೆಯಲ್ಲಿರುವುದರಿಂದಲೇ ಜಗತ್ತು ನಡೆದಿದೆ” ಎಂದವರು ಉದ್ಘರಿಸುತ್ತಾರೆ!! ಗಾಂಧೀಜಿ ಕೈಯಿಂದ ಆಕೆಗೆ ಸನ್ಮಾನವೂ ಆಗುತ್ತದೆ.

ಈ ಪ್ರಾಮಾಣಿಕತೆಯ ಬಗ್ಗೆ ಒಂದು ಕತೆಯೂ ಇದೆ: ಕರ ನಿರಾಕರಣೆ ಚಳವಳಿಯಲ್ಲಿ ಭಾಗವಹಿಸಿದವರನ್ನು ಬಂಧಿಸುವುದು ಕ್ರೂರವಾಗಿ ದಂಡಿಸುವುದು ಬ್ರಿಟಿಷರ “ನೀತಿ”ಯಾಗಿದ್ದ ಕಾಲವದು. ಸಿದ್ದಾಪುರದ ಕೆಳಗಿನ ಮನೆ ನಾಗೇಶ ಹೆಗಡೆ ತನ್ನನ್ನು ಪೊಲೀಸರು ಬಂಧಿಸುತ್ತಾರೆಂದು ಖಾತ್ರಿಯಾದಾಗ ಮನೆಯಲ್ಲಿದ್ದ ಬಂಗಾರವನ್ನೆಲ್ಲ ಒಂದು ತಪ್ಪಲಿಯಲ್ಲಿ ಹಾಕಿ ಕಿರಿಯ ಮಗನಿಗೆ ಕೊಡುತ್ತಾರೆ. ಆತ ಆ ತಪ್ಪಲಿಯನ್ನು ತೋಟದಲ್ಲಿ ಹುಗಿದಿಡುತ್ತಾನೆ. ಅದು ದೇವಿಗೆ ಗೊತ್ತಿರುತ್ತದೆ. ಕೆಲವು ದಿನಗಳಲ್ಲಿ ಆತನೂ ಜೈಲು ಪಾಲಾಗುತ್ತಾನೆ. ಒಂದು ದಿನ ಜೋರು ಮಳೆಯಲ್ಲಿ ಆ ತಪ್ಪಲಿ ತೇಲಿ ಬರುವುದು ಕಂಡ ದೇವಿ ಅದನ್ನು ಜೋಪಾನವಾಗಿ ಇಡುತ್ತಾಳೆ. ಪರಮ ಕುಡುಕನಾದ ಗಂಡ ಪೀಡಿಸಿದರೂ, ಪೊಲೀಸರು ಸತಾಯಿಸಿದರೂ ದೇವಿ ಆ ಬಂಗಾರ ಮಾತ್ರ ಕೊಡುವುದಿಲ್ಲ. ನಾಗೇಶ್ ಹೆಗಡೆ ಬಿಡುಗಡೆ ಆಗುವುದನ್ನೇ ಕಾಯುತ್ತಿದ್ದ ದೇವಿ ಅಂದೇ ನಡುರಾತ್ರಿ ಆತನ ಮನೆಗ್ಹೋಗಿ ಬಂಗಾರದ ತಪ್ಪಲಿ ಒಪ್ಪಿಸುತ್ತಾಳೆ. ನಾಗೇಶ್ ಹೆಗಡೆ ಒಂದು ಬಂಗಾರದ ಸರ ಆಕೆಗೆ ಕೊಡಲು ಮುಂದಾದಾಗ ಒಲ್ಲೆ ಅಂತಾಳೆ!! ಈ ಬಂಗಾರ ತನ್ನಲ್ಲಿರುವ ತನಕ ತಾನೆಂದು ದಿನವೂ ಸರಿಯಾಗಿ ನಿದ್ದೆ ಮಾಡಿಲ್ಲ; ಈ ಚಿನ್ನ ಸಂರಕ್ಷಣೆಯಲ್ಲೇ ಗಂಡನನ್ನೂ ಕಳಕೊಂಡೆ ಎನ್ನುತ್ತ ಮನೆಯೆಡೆ ಹೆಜ್ಜೆ ಹಾಕುತ್ತಾಳೆ.

photo courtesy : Kamat Potpouri

ಗಾಂಧೀಜಿ ಶಿರಸಿಗೆ ಹಲವು ಬಾರಿ ಬಂದುಹೋಗಿದ್ದಾರೆ. ಆದರೆ ದಾಖಲೆಯಲ್ಲಿರುವುದು ಕೆಲವು ಸಂದರ್ಭಗಳಷ್ಟೇ. 1934 ಮಾರ್ಚ್ 1ರಂದು ಶಿರಸಿಯ ಬಿಡಕಿಬೈಲ್‍ನಲ್ಲಿ ಗಾಂಧೀಜಿಯವರ ಸಾರ್ವಜನಿಕ ಸಭೆ ಏರ್ಪಾಡಾಗಿತ್ತು. ಸಭೆಯ ನಂತರ ಆ ಬಯಲಲ್ಲೇ ಹೋರಾಟಗಾರರ ಜತೆ ಗಾಂಧೀಜಿ ಸಂವಾದ ನಡೆಸುತ್ತಾರೆ. ಇದಾದ ಬಳಿಕ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ಎಸ್.ಎನ್ ಕೇಶವೈನ್ ದೇವಾಲಯಕ್ಕೆ ಹೋಗೋಣ ಎನ್ನುತ್ತಾರೆ. “ನಾನು ಬರಬೇಕೆಂದಿದ್ದರೆ ದೇವಾಲಯದಲ್ಲಿ ನಡೆಯುವ ಕೋಣಬಲಿ ನಿಲ್ಲಿಸಬೇಕು; ಜಾತಿ ಭೇದವಿಲ್ಲದೆ ಎಲ್ಲರಿಗೂ ಪ್ರವೇಶ ಕಲ್ಪಿಸಬೇಕು” ಎಂದು ಗಾಂಧಿ ಹಠ ಹಿಡಿಯುತ್ತಾರೆ. ಇದಕ್ಕೆ ದೇವಾಲಯದ ಆಡಳಿತ ಮಂಡಳಿ ಒಪ್ಪಿದ ನಂತರವೇ ದರ್ಶನಕ್ಕೆ ಹೋಗುತ್ತಾರೆ. ಅಂದಿನಿಂದ ಶಿರಸಿ ಜಾತ್ರೆ ಹೊತ್ತಲ್ಲಿ ನಡೆಯುತ್ತಿದ್ದ ಪ್ರಾಣಿ ವಧೆ ನಿಷೇಧಿಸಲಾಗಿದೆ. ಆದರೂ ಸಿರಿಂಜ್‍ನಿಂದ ಕೋಣನ ರಕ್ತ ತೆಗೆದು “ಬ್ರಾಹ್ಮಣ ದೇವಿಗೆ” ಅರ್ಪಣೆ ಮಾಡಿ ಆಕೆ ಚಮಗಾರ (ದಲಿತ) ಯುವಕನ ಮೋಹಿಸಿ ಮೋಸಹೋದೆನೆಂದು ಜಿದ್ದಿಗೆ ಬಿದ್ದ “ಪುರಾಣ” ಬೇಡವೆಂದರೂ ನೆನಪಾಗುವಂತೆ ಮಾಡಲಾಗುತ್ತಿದೆ.…

27 ಫೆಬ್ರುವರಿ 1934 ರಂದು ಗಾಂಧೀಜಿ ಕಡಲನಗರಿ ಕಾರವಾರಕ್ಕೆ ಬಂದಿದ್ದರು. ಮರುದಿನ ಗಾಂಧೀಜಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುವುದಿತ್ತು. ಅಂದು ಅವರು ಕಾರವಾರಾಕ್ಕೆ ಸ್ವಾತಂತ್ರ್ಯ ಸಂಗ್ರಾಮದ ಸಂದೇಶ ಸಾರಲು ಬಂದಿದ್ದರೆಂಬುದು ಸಾಮಾನ್ಯ ಅಭಿಪ್ರಾಯ. ವಾಸ್ತವವೆಂದರೆ, ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು. ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಕಾರವಾರದ ಸುಬ್ಬರಾವ್ ಹಳದೀಪುರ್ಕರ್ ಸಹೋದರ ಕೃಷ್ಣರಾವ್ ಆಸ್ಥೆಯಿಂದ ಗಾಂಧಿಜೀಯವರನ್ನು ಕರೆಸಿದ್ದರು.

ಕುಂದಾಪುರದಿಂದ ‘ದಯಾವತಿ’ ಎಂಬ ಬೋಟ್‍ನಲ್ಲಿ ಕಾರವಾರ ತಲುಪಿದ್ದ ಗಾಂಧೀಜಿ ಹಳದಿಪುರ್ಕರ್ ಮನೆಯಲ್ಲೇ ವಾಸ್ತವ್ಯ ಮಾಡಿದ್ದರು. ಮರುದಿನದ ಸಭೆಗಾಗಿ ರಾತ್ರಿ ಸಮಾಲೋಚನೆ ನಡೆಸಿದ್ದರು. ಗೀತಾಂಜಲಿ ಟಾಕೀಸ್ ಹಿಂದಿನ ಬಯಲಲ್ಲಿ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧ ಮಾಡಲಾಗಿತ್ತು. ಅಲ್ಲಿ ಗಾಂಧೀಜಿಗೆ ಶ್ರೀಗಂಧದ ಪೆಟ್ಟಿಗೆ ಮತ್ತು ಬೆಳ್ಳಿ ಡಬ್ಬಿಯಲ್ಲಿ “ಮಾನಪತ್ರ” ಅರ್ಪಿಸಲಾಗಿತ್ತು. ಕಾಣಿಕೆ ಪಡೆಯಲು ನಯವಾಗಿ ನಿರಾಕರಿಸಿದ ಗಾಂಧೀಜಿ ಅದನ್ನು ಅದೇ ಸಭೆಯಲ್ಲಿ ಹರಾಜು ಹಾಕಿದ್ದರು. ಉತ್ತರ ಕನ್ನಡಕ್ಕೆ ಗಾಂಧೀಜಿಯವರ ಚಿಂತನೆಗಳ ಜತೆಜತೆಗೇ ಒಡನಾಟವೂ ಸಿಕ್ಕಿದ್ದು ವಿಶೇಷವಾಗಿದೆ!

  • ಶುದ್ದೋಧನ

ಇದನ್ನೂ ಓದಿ: ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...