Homeಮುಖಪುಟಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು.

- Advertisement -
- Advertisement -

ಉತ್ತರ ಕನ್ನಡದ ಹಲವೆಡೆ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತು ಇವತ್ತಿಗೂ ಅಚ್ಚಳಿಯದೇ ಉಳಿದಿದೆ! ಜಿಲ್ಲೆಗೆ ಹಲವು ಬಾರಿ ಗಾಂಧೀಜಿ ಬಂದುಹೋಗಿದ್ದಾರೆ. ಗಾಂಧೀಜಿ ಉತ್ತರ ಕನ್ನಡಕ್ಕೆ ಆಗಮಿಸುತ್ತಿದ್ದುದು ಸ್ವಾತಂತ್ರ್ಯ ಚಳವಳಿ ಜಾಗೃತಿಗೆಂಬುದು ಸಾಮಾನ್ಯ ಅಭಿಪ್ರಾಯ. ಆದರೆ ಗಾಂಧೀ ಹೊರಟರೆಂದರೆ ಬರೀ ಸ್ವರಾಜ್ಯ ಕನಸಷ್ಟೇ ಅಲ್ಲ, ಸಾಮಾಜಿಕ ಮತ್ತು ಜೀವಪರ ತುಡಿತವೂ ಇರುತ್ತಿತ್ತು. ಉಪ್ಪು ತಯಾರಿಕೆ ಮತ್ತು ಮಾರಾಟವನ್ನು ಬ್ರಿಟಿ‍‍‍ಷ್ ಸರ್ಕಾರ ನಿಷೇಧಿಸಿದಾಗ ಗಾಂಧೀಜಿ ಆದಿಯಾಗಿ ಹಿರಿಯ ರಾಷ್ಟ್ರೀಯ ನೇತಾರರು ತಿರುಗಿ ಬಿದ್ದಿದ್ದರು. ಅಸಹಕಾರ ಚಳುವಳಿಯೊಂದೇ ಈ ಸಮಸ್ಯೆ ಪರಿಹಾರಕ್ಕೆ ತಾರಕ ತಂತ್ರವೆಂಬ ತೀರ್ಮಾನಕ್ಕೆ ಬಂದಿದ್ದರು. 20-2-1930ರಂದು ಬಳ್ಳಾರಿಯಲ್ಲಿ ಸಭೆ ಸೇರಿದ್ದ ಪ್ರದೇಶ್ ಕಾಂಗ್ರೆಸ್ ಸಮಿತಿ ಉತ್ತರ ಕನ್ನಡದ ಅಂಕೋಲಾ ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹಕ್ಕೆ ಸರಿಯಾದ ಸ್ಥಳವೆಂದು ನಿರ್ಧರಿಸಿತ್ತು.

ಪೊಲೀಸರ ಅಡೆತಡೆಯನ್ನೆಲ್ಲ ಕಡೆಗಣಿಸಿ ಏಪ್ರಿಲ್ 13ರಂದು ಭರ್ಜರಿ ಮೆರವಣಿಗೆಯೊಂದಿಗೆ ಅಂಕೋಲೆಯ ಜನಸಾಗರ ಕಡಲ ಕಿನಾರೆಯತ್ತ ಹೊರಟಿತ್ತು! ಅಲ್ಲಿ ಬ್ರಿಟಿಷ್ ಸರ್ಕಾರದ ಕಾನೂನು ಧಿಕ್ಕರಿಸಿ ಉಪ್ಪು ತಯಾರಿಕೆ, ಮಾರಾಟ ಮಾಡಲಾಯಿತು. ಅಂಕೋಲೆಯ ಹಳ್ಳಿಹಳ್ಳಿಯಲ್ಲಿ ಚಳವಳಿ ಭುಗಿಲೆದ್ದಿತು! ಅಸಹಕಾರ ಚಳವಳಿ, ಕರಬಂಧಿ ಚಳವಳಿ ಮತ್ತು ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲೆ ನಿರ್ಣಾಯಕ ಪಾತ್ರ ವಹಿಸಿತ್ತು. ಹೋರಾಟಗಾರ ರೈತರು ತಮ್ಮ ಭೂಮಿ ಕಳಕೊಳ್ಳಬೇಕಾಗಿ ಬಂತು; ಆದರೂ ಅಂಜದೆ ಅಳುಕದೆ ಪೊಲೀಸರ ಲಾಠಿಗೆ ಎದೆಗೊಟ್ಟು ನಿಂತರು! ಗುಜರಾತಿನ ಬಾರ್ಡೋಲಿಯಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ ಮಾದರಿಯಲ್ಲೇ ಅಂಕೋಲೆಯಲ್ಲೂ ಚಳುವಳಿ ಆಗಿತ್ತು. ಅಂಕೋಲೆಗೆ ಕರ್ನಾಟಕದ ಬಾರ್ಡೋಲಿಯೆಂದು ಹೆಸರು ಬಂದಿದ್ದೇ ಈ ಯಶಸ್ವೀ ಕರನಿರಾಕರಣೆ, ಉಪ್ಪಿನ ಸತ್ಯಾಗ್ರಹದಿಂದ! ಈ ಹೊತ್ತಲ್ಲಿ ಅಂಕೋಲೆಗೆ ಬಂದಿದ್ದ ಗಾಂಧೀಜಿ ಸ್ಪೂರ್ತಿಯ ಚಿಲುಮೆಯಾಗಿದ್ದರು.

photo courtesy : Banglore Mirror

ಕರನಿರಾಕರಣೆ ಚಳವಳಿಯು ಕರಾವಳಿ ದಾಟಿ ಮಲೆನಾಡಿಗೂ ವ್ಯಾಪಿಸಿತ್ತು. ಗಾಂಧೀಜಿ ಕುಮಟಾ-ಶಿರಸಿ-ಸಿದ್ದಾಪುರಕ್ಕೂ ಹೋಗಿ ಹೋರಾಟ ಹುರಿಗೊಳ್ಳುವಂತೆ ಮಾಡಿದ್ದರು. 1934ರಲ್ಲಿ ಸಿದ್ದಾಪುರಕ್ಕೆ ಬಂದಿದ್ದ ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರ್ತಿ ಮಹಾದೇವಿತಾಯಿಯವರ ಮನೆಗೂ ಭೇಟಿ ಕೊಟ್ಟಿದ್ದರು. ಈ ಮಹಾದೇವಿತಾಯಿ ಸಿದ್ದಾಪುರದ ಪ್ರತಿಷ್ಠಿತ “ದೊಡ್ಮನೆ ಹೆಗಡೆ” ಕುಟುಂಬದವರು; ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ದೊಡ್ಡಪ್ಪನ ಮಗಳು. ಒಂದು ಮೂಲದ ಪ್ರಕಾರ ಮಹಾದೇವಿ ಬಾಲವಿಧವೆ; ಆಕೆಗೆ ಕೇಶಮುಂಡನ ಮಾಡಲಾಗಿತ್ತು. ಆಕೆಗಾಗುತ್ತಿದ್ದ ಹಿಂಸೆಯ ಸುದ್ದಿ ತಿಳಿದಿದ್ದ ಗಾಂಧೀಜಿ ಇದೊಂದು ಹೇಯ-ಬರ್ಬರ ದೌರ್ಜನ್ಯವೆಂದು ಹೇಳಿದ್ದರು; ಇಲ್ಲಾಕೆಗೆ ನೆಮ್ಮದಿಯಿಂದಿರಲು ಸಾಧ್ಯವಾಗದಿದ್ದರೆ ತಮ್ಮ ಆಶ್ರಮಕ್ಕೆ ಕರೆದೊಯ್ಯುವುದಾಗಿ ಹೇಳಿದರು. ಮಹಾದೇವಿಯೂ ಒಪ್ಪಿ ಗಾಂಧಿ ಆಶ್ರಮ ಸೇರಿಕೊಳ್ಳುತ್ತಾರೆ. ಅಕ್ಕನ ಉತ್ತರ ಭಾರತದ ಸಂಪರ್ಕ ಬಳಸಿಕೊಂಡು ರಾಮಕೃಷ್ಣ ಹೆಗಡೆ ಬನಾರಸ್ ವಿಶ್ವವಿದ್ಯಾಲಯ ಸೇರಿಕೊಳ್ಳುತ್ತಾರೆ. ಅಲ್ಲಿ ಹಿಂದಿ-ಇಂಗ್ಲಿಷ್‌ನಲ್ಲಿ ಪಾರಂಗತರಾದ ಹೆಗಡೆ ಆ ಭಾಷಾ ಚಾಕಚಾಕ್ಯತೆಯಿಂದಲೇ ರಾಷ್ಟ್ರ ನಾಯಕರ ಸಾಲಿನಲ್ಲಿ ಮಿಂಚಲು ಅವಕಾಶವೂ ಆಯಿತು!

ಇದೇ ಸಿದ್ದಾಪುರ ಹುಡದೀಬೈಲ್‍ನಲ್ಲಿ 1934ರ ಮಾರ್ಚ್‍ನಲ್ಲಿ ಗಾಂಧೀಯವರ ಭಾಷಣ ಕಾರ್ಯಕ್ರಮವಿತ್ತು. ದೊಡ್ಡ ಜನಸ್ತೋಮವೇ ನೆರೆದಿತ್ತು! ಸಿದ್ದಾಪುರದ ಮುಖಂಡರು ‘ದೇವಿ ಶಿವಪ್ಪ ಹಸ್ಲರ್’ ಎಂಬ ದಲಿತ ಮಹಿಳೆಯನ್ನು ವಾದ್ಯದೊಂದಿಗೆ ವೇದಿಕೆಗೆ ಕರೆತರುತ್ತಾರೆ. ಶಂಕರ ಗುಲ್ವಾಡಿ ಎಂಬುವರು ದೇವಿಯನ್ನು ಗಾಂಧೀಜಿಗೆ ಪರಿಚಯಿಸುತ್ತಾರೆ. ಸ್ವಾತಂತ್ರ್ಯ ಚಳವಳಿಗೆ ತನ್ನದೇ ರೀತಿಯಲ್ಲಿ ಅರ್ಪಿಸಿಕೊಂಡಿದ್ದ ಆಕೆಯ ಉದಾತ್ತತೆ-ಪ್ರಾಮಾಣಿಕತೆ ಕೇಳಿ ಗಾಂಧೀಜಿ ಕಣ್ಣಲ್ಲಿ ನೀರು ಬರುತ್ತದೆ!! “ದೇವಿಯಂಥ ಪುಣ್ಯಾತ್ಮರು ಈ ಧರೆಯಲ್ಲಿರುವುದರಿಂದಲೇ ಜಗತ್ತು ನಡೆದಿದೆ” ಎಂದವರು ಉದ್ಘರಿಸುತ್ತಾರೆ!! ಗಾಂಧೀಜಿ ಕೈಯಿಂದ ಆಕೆಗೆ ಸನ್ಮಾನವೂ ಆಗುತ್ತದೆ.

ಈ ಪ್ರಾಮಾಣಿಕತೆಯ ಬಗ್ಗೆ ಒಂದು ಕತೆಯೂ ಇದೆ: ಕರ ನಿರಾಕರಣೆ ಚಳವಳಿಯಲ್ಲಿ ಭಾಗವಹಿಸಿದವರನ್ನು ಬಂಧಿಸುವುದು ಕ್ರೂರವಾಗಿ ದಂಡಿಸುವುದು ಬ್ರಿಟಿಷರ “ನೀತಿ”ಯಾಗಿದ್ದ ಕಾಲವದು. ಸಿದ್ದಾಪುರದ ಕೆಳಗಿನ ಮನೆ ನಾಗೇಶ ಹೆಗಡೆ ತನ್ನನ್ನು ಪೊಲೀಸರು ಬಂಧಿಸುತ್ತಾರೆಂದು ಖಾತ್ರಿಯಾದಾಗ ಮನೆಯಲ್ಲಿದ್ದ ಬಂಗಾರವನ್ನೆಲ್ಲ ಒಂದು ತಪ್ಪಲಿಯಲ್ಲಿ ಹಾಕಿ ಕಿರಿಯ ಮಗನಿಗೆ ಕೊಡುತ್ತಾರೆ. ಆತ ಆ ತಪ್ಪಲಿಯನ್ನು ತೋಟದಲ್ಲಿ ಹುಗಿದಿಡುತ್ತಾನೆ. ಅದು ದೇವಿಗೆ ಗೊತ್ತಿರುತ್ತದೆ. ಕೆಲವು ದಿನಗಳಲ್ಲಿ ಆತನೂ ಜೈಲು ಪಾಲಾಗುತ್ತಾನೆ. ಒಂದು ದಿನ ಜೋರು ಮಳೆಯಲ್ಲಿ ಆ ತಪ್ಪಲಿ ತೇಲಿ ಬರುವುದು ಕಂಡ ದೇವಿ ಅದನ್ನು ಜೋಪಾನವಾಗಿ ಇಡುತ್ತಾಳೆ. ಪರಮ ಕುಡುಕನಾದ ಗಂಡ ಪೀಡಿಸಿದರೂ, ಪೊಲೀಸರು ಸತಾಯಿಸಿದರೂ ದೇವಿ ಆ ಬಂಗಾರ ಮಾತ್ರ ಕೊಡುವುದಿಲ್ಲ. ನಾಗೇಶ್ ಹೆಗಡೆ ಬಿಡುಗಡೆ ಆಗುವುದನ್ನೇ ಕಾಯುತ್ತಿದ್ದ ದೇವಿ ಅಂದೇ ನಡುರಾತ್ರಿ ಆತನ ಮನೆಗ್ಹೋಗಿ ಬಂಗಾರದ ತಪ್ಪಲಿ ಒಪ್ಪಿಸುತ್ತಾಳೆ. ನಾಗೇಶ್ ಹೆಗಡೆ ಒಂದು ಬಂಗಾರದ ಸರ ಆಕೆಗೆ ಕೊಡಲು ಮುಂದಾದಾಗ ಒಲ್ಲೆ ಅಂತಾಳೆ!! ಈ ಬಂಗಾರ ತನ್ನಲ್ಲಿರುವ ತನಕ ತಾನೆಂದು ದಿನವೂ ಸರಿಯಾಗಿ ನಿದ್ದೆ ಮಾಡಿಲ್ಲ; ಈ ಚಿನ್ನ ಸಂರಕ್ಷಣೆಯಲ್ಲೇ ಗಂಡನನ್ನೂ ಕಳಕೊಂಡೆ ಎನ್ನುತ್ತ ಮನೆಯೆಡೆ ಹೆಜ್ಜೆ ಹಾಕುತ್ತಾಳೆ.

photo courtesy : Kamat Potpouri

ಗಾಂಧೀಜಿ ಶಿರಸಿಗೆ ಹಲವು ಬಾರಿ ಬಂದುಹೋಗಿದ್ದಾರೆ. ಆದರೆ ದಾಖಲೆಯಲ್ಲಿರುವುದು ಕೆಲವು ಸಂದರ್ಭಗಳಷ್ಟೇ. 1934 ಮಾರ್ಚ್ 1ರಂದು ಶಿರಸಿಯ ಬಿಡಕಿಬೈಲ್‍ನಲ್ಲಿ ಗಾಂಧೀಜಿಯವರ ಸಾರ್ವಜನಿಕ ಸಭೆ ಏರ್ಪಾಡಾಗಿತ್ತು. ಸಭೆಯ ನಂತರ ಆ ಬಯಲಲ್ಲೇ ಹೋರಾಟಗಾರರ ಜತೆ ಗಾಂಧೀಜಿ ಸಂವಾದ ನಡೆಸುತ್ತಾರೆ. ಇದಾದ ಬಳಿಕ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ಎಸ್.ಎನ್ ಕೇಶವೈನ್ ದೇವಾಲಯಕ್ಕೆ ಹೋಗೋಣ ಎನ್ನುತ್ತಾರೆ. “ನಾನು ಬರಬೇಕೆಂದಿದ್ದರೆ ದೇವಾಲಯದಲ್ಲಿ ನಡೆಯುವ ಕೋಣಬಲಿ ನಿಲ್ಲಿಸಬೇಕು; ಜಾತಿ ಭೇದವಿಲ್ಲದೆ ಎಲ್ಲರಿಗೂ ಪ್ರವೇಶ ಕಲ್ಪಿಸಬೇಕು” ಎಂದು ಗಾಂಧಿ ಹಠ ಹಿಡಿಯುತ್ತಾರೆ. ಇದಕ್ಕೆ ದೇವಾಲಯದ ಆಡಳಿತ ಮಂಡಳಿ ಒಪ್ಪಿದ ನಂತರವೇ ದರ್ಶನಕ್ಕೆ ಹೋಗುತ್ತಾರೆ. ಅಂದಿನಿಂದ ಶಿರಸಿ ಜಾತ್ರೆ ಹೊತ್ತಲ್ಲಿ ನಡೆಯುತ್ತಿದ್ದ ಪ್ರಾಣಿ ವಧೆ ನಿಷೇಧಿಸಲಾಗಿದೆ. ಆದರೂ ಸಿರಿಂಜ್‍ನಿಂದ ಕೋಣನ ರಕ್ತ ತೆಗೆದು “ಬ್ರಾಹ್ಮಣ ದೇವಿಗೆ” ಅರ್ಪಣೆ ಮಾಡಿ ಆಕೆ ಚಮಗಾರ (ದಲಿತ) ಯುವಕನ ಮೋಹಿಸಿ ಮೋಸಹೋದೆನೆಂದು ಜಿದ್ದಿಗೆ ಬಿದ್ದ “ಪುರಾಣ” ಬೇಡವೆಂದರೂ ನೆನಪಾಗುವಂತೆ ಮಾಡಲಾಗುತ್ತಿದೆ.…

27 ಫೆಬ್ರುವರಿ 1934 ರಂದು ಗಾಂಧೀಜಿ ಕಡಲನಗರಿ ಕಾರವಾರಕ್ಕೆ ಬಂದಿದ್ದರು. ಮರುದಿನ ಗಾಂಧೀಜಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುವುದಿತ್ತು. ಅಂದು ಅವರು ಕಾರವಾರಾಕ್ಕೆ ಸ್ವಾತಂತ್ರ್ಯ ಸಂಗ್ರಾಮದ ಸಂದೇಶ ಸಾರಲು ಬಂದಿದ್ದರೆಂಬುದು ಸಾಮಾನ್ಯ ಅಭಿಪ್ರಾಯ. ವಾಸ್ತವವೆಂದರೆ, ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು. ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಕಾರವಾರದ ಸುಬ್ಬರಾವ್ ಹಳದೀಪುರ್ಕರ್ ಸಹೋದರ ಕೃಷ್ಣರಾವ್ ಆಸ್ಥೆಯಿಂದ ಗಾಂಧಿಜೀಯವರನ್ನು ಕರೆಸಿದ್ದರು.

ಕುಂದಾಪುರದಿಂದ ‘ದಯಾವತಿ’ ಎಂಬ ಬೋಟ್‍ನಲ್ಲಿ ಕಾರವಾರ ತಲುಪಿದ್ದ ಗಾಂಧೀಜಿ ಹಳದಿಪುರ್ಕರ್ ಮನೆಯಲ್ಲೇ ವಾಸ್ತವ್ಯ ಮಾಡಿದ್ದರು. ಮರುದಿನದ ಸಭೆಗಾಗಿ ರಾತ್ರಿ ಸಮಾಲೋಚನೆ ನಡೆಸಿದ್ದರು. ಗೀತಾಂಜಲಿ ಟಾಕೀಸ್ ಹಿಂದಿನ ಬಯಲಲ್ಲಿ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧ ಮಾಡಲಾಗಿತ್ತು. ಅಲ್ಲಿ ಗಾಂಧೀಜಿಗೆ ಶ್ರೀಗಂಧದ ಪೆಟ್ಟಿಗೆ ಮತ್ತು ಬೆಳ್ಳಿ ಡಬ್ಬಿಯಲ್ಲಿ “ಮಾನಪತ್ರ” ಅರ್ಪಿಸಲಾಗಿತ್ತು. ಕಾಣಿಕೆ ಪಡೆಯಲು ನಯವಾಗಿ ನಿರಾಕರಿಸಿದ ಗಾಂಧೀಜಿ ಅದನ್ನು ಅದೇ ಸಭೆಯಲ್ಲಿ ಹರಾಜು ಹಾಕಿದ್ದರು. ಉತ್ತರ ಕನ್ನಡಕ್ಕೆ ಗಾಂಧೀಜಿಯವರ ಚಿಂತನೆಗಳ ಜತೆಜತೆಗೇ ಒಡನಾಟವೂ ಸಿಕ್ಕಿದ್ದು ವಿಶೇಷವಾಗಿದೆ!

  • ಶುದ್ದೋಧನ

ಇದನ್ನೂ ಓದಿ: ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...