Homeಮುಖಪುಟಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು.

- Advertisement -
- Advertisement -

ಉತ್ತರ ಕನ್ನಡದ ಹಲವೆಡೆ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತು ಇವತ್ತಿಗೂ ಅಚ್ಚಳಿಯದೇ ಉಳಿದಿದೆ! ಜಿಲ್ಲೆಗೆ ಹಲವು ಬಾರಿ ಗಾಂಧೀಜಿ ಬಂದುಹೋಗಿದ್ದಾರೆ. ಗಾಂಧೀಜಿ ಉತ್ತರ ಕನ್ನಡಕ್ಕೆ ಆಗಮಿಸುತ್ತಿದ್ದುದು ಸ್ವಾತಂತ್ರ್ಯ ಚಳವಳಿ ಜಾಗೃತಿಗೆಂಬುದು ಸಾಮಾನ್ಯ ಅಭಿಪ್ರಾಯ. ಆದರೆ ಗಾಂಧೀ ಹೊರಟರೆಂದರೆ ಬರೀ ಸ್ವರಾಜ್ಯ ಕನಸಷ್ಟೇ ಅಲ್ಲ, ಸಾಮಾಜಿಕ ಮತ್ತು ಜೀವಪರ ತುಡಿತವೂ ಇರುತ್ತಿತ್ತು. ಉಪ್ಪು ತಯಾರಿಕೆ ಮತ್ತು ಮಾರಾಟವನ್ನು ಬ್ರಿಟಿ‍‍‍ಷ್ ಸರ್ಕಾರ ನಿಷೇಧಿಸಿದಾಗ ಗಾಂಧೀಜಿ ಆದಿಯಾಗಿ ಹಿರಿಯ ರಾಷ್ಟ್ರೀಯ ನೇತಾರರು ತಿರುಗಿ ಬಿದ್ದಿದ್ದರು. ಅಸಹಕಾರ ಚಳುವಳಿಯೊಂದೇ ಈ ಸಮಸ್ಯೆ ಪರಿಹಾರಕ್ಕೆ ತಾರಕ ತಂತ್ರವೆಂಬ ತೀರ್ಮಾನಕ್ಕೆ ಬಂದಿದ್ದರು. 20-2-1930ರಂದು ಬಳ್ಳಾರಿಯಲ್ಲಿ ಸಭೆ ಸೇರಿದ್ದ ಪ್ರದೇಶ್ ಕಾಂಗ್ರೆಸ್ ಸಮಿತಿ ಉತ್ತರ ಕನ್ನಡದ ಅಂಕೋಲಾ ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹಕ್ಕೆ ಸರಿಯಾದ ಸ್ಥಳವೆಂದು ನಿರ್ಧರಿಸಿತ್ತು.

ಪೊಲೀಸರ ಅಡೆತಡೆಯನ್ನೆಲ್ಲ ಕಡೆಗಣಿಸಿ ಏಪ್ರಿಲ್ 13ರಂದು ಭರ್ಜರಿ ಮೆರವಣಿಗೆಯೊಂದಿಗೆ ಅಂಕೋಲೆಯ ಜನಸಾಗರ ಕಡಲ ಕಿನಾರೆಯತ್ತ ಹೊರಟಿತ್ತು! ಅಲ್ಲಿ ಬ್ರಿಟಿಷ್ ಸರ್ಕಾರದ ಕಾನೂನು ಧಿಕ್ಕರಿಸಿ ಉಪ್ಪು ತಯಾರಿಕೆ, ಮಾರಾಟ ಮಾಡಲಾಯಿತು. ಅಂಕೋಲೆಯ ಹಳ್ಳಿಹಳ್ಳಿಯಲ್ಲಿ ಚಳವಳಿ ಭುಗಿಲೆದ್ದಿತು! ಅಸಹಕಾರ ಚಳವಳಿ, ಕರಬಂಧಿ ಚಳವಳಿ ಮತ್ತು ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲೆ ನಿರ್ಣಾಯಕ ಪಾತ್ರ ವಹಿಸಿತ್ತು. ಹೋರಾಟಗಾರ ರೈತರು ತಮ್ಮ ಭೂಮಿ ಕಳಕೊಳ್ಳಬೇಕಾಗಿ ಬಂತು; ಆದರೂ ಅಂಜದೆ ಅಳುಕದೆ ಪೊಲೀಸರ ಲಾಠಿಗೆ ಎದೆಗೊಟ್ಟು ನಿಂತರು! ಗುಜರಾತಿನ ಬಾರ್ಡೋಲಿಯಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ ಮಾದರಿಯಲ್ಲೇ ಅಂಕೋಲೆಯಲ್ಲೂ ಚಳುವಳಿ ಆಗಿತ್ತು. ಅಂಕೋಲೆಗೆ ಕರ್ನಾಟಕದ ಬಾರ್ಡೋಲಿಯೆಂದು ಹೆಸರು ಬಂದಿದ್ದೇ ಈ ಯಶಸ್ವೀ ಕರನಿರಾಕರಣೆ, ಉಪ್ಪಿನ ಸತ್ಯಾಗ್ರಹದಿಂದ! ಈ ಹೊತ್ತಲ್ಲಿ ಅಂಕೋಲೆಗೆ ಬಂದಿದ್ದ ಗಾಂಧೀಜಿ ಸ್ಪೂರ್ತಿಯ ಚಿಲುಮೆಯಾಗಿದ್ದರು.

photo courtesy : Banglore Mirror

ಕರನಿರಾಕರಣೆ ಚಳವಳಿಯು ಕರಾವಳಿ ದಾಟಿ ಮಲೆನಾಡಿಗೂ ವ್ಯಾಪಿಸಿತ್ತು. ಗಾಂಧೀಜಿ ಕುಮಟಾ-ಶಿರಸಿ-ಸಿದ್ದಾಪುರಕ್ಕೂ ಹೋಗಿ ಹೋರಾಟ ಹುರಿಗೊಳ್ಳುವಂತೆ ಮಾಡಿದ್ದರು. 1934ರಲ್ಲಿ ಸಿದ್ದಾಪುರಕ್ಕೆ ಬಂದಿದ್ದ ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರ್ತಿ ಮಹಾದೇವಿತಾಯಿಯವರ ಮನೆಗೂ ಭೇಟಿ ಕೊಟ್ಟಿದ್ದರು. ಈ ಮಹಾದೇವಿತಾಯಿ ಸಿದ್ದಾಪುರದ ಪ್ರತಿಷ್ಠಿತ “ದೊಡ್ಮನೆ ಹೆಗಡೆ” ಕುಟುಂಬದವರು; ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ದೊಡ್ಡಪ್ಪನ ಮಗಳು. ಒಂದು ಮೂಲದ ಪ್ರಕಾರ ಮಹಾದೇವಿ ಬಾಲವಿಧವೆ; ಆಕೆಗೆ ಕೇಶಮುಂಡನ ಮಾಡಲಾಗಿತ್ತು. ಆಕೆಗಾಗುತ್ತಿದ್ದ ಹಿಂಸೆಯ ಸುದ್ದಿ ತಿಳಿದಿದ್ದ ಗಾಂಧೀಜಿ ಇದೊಂದು ಹೇಯ-ಬರ್ಬರ ದೌರ್ಜನ್ಯವೆಂದು ಹೇಳಿದ್ದರು; ಇಲ್ಲಾಕೆಗೆ ನೆಮ್ಮದಿಯಿಂದಿರಲು ಸಾಧ್ಯವಾಗದಿದ್ದರೆ ತಮ್ಮ ಆಶ್ರಮಕ್ಕೆ ಕರೆದೊಯ್ಯುವುದಾಗಿ ಹೇಳಿದರು. ಮಹಾದೇವಿಯೂ ಒಪ್ಪಿ ಗಾಂಧಿ ಆಶ್ರಮ ಸೇರಿಕೊಳ್ಳುತ್ತಾರೆ. ಅಕ್ಕನ ಉತ್ತರ ಭಾರತದ ಸಂಪರ್ಕ ಬಳಸಿಕೊಂಡು ರಾಮಕೃಷ್ಣ ಹೆಗಡೆ ಬನಾರಸ್ ವಿಶ್ವವಿದ್ಯಾಲಯ ಸೇರಿಕೊಳ್ಳುತ್ತಾರೆ. ಅಲ್ಲಿ ಹಿಂದಿ-ಇಂಗ್ಲಿಷ್‌ನಲ್ಲಿ ಪಾರಂಗತರಾದ ಹೆಗಡೆ ಆ ಭಾಷಾ ಚಾಕಚಾಕ್ಯತೆಯಿಂದಲೇ ರಾಷ್ಟ್ರ ನಾಯಕರ ಸಾಲಿನಲ್ಲಿ ಮಿಂಚಲು ಅವಕಾಶವೂ ಆಯಿತು!

ಇದೇ ಸಿದ್ದಾಪುರ ಹುಡದೀಬೈಲ್‍ನಲ್ಲಿ 1934ರ ಮಾರ್ಚ್‍ನಲ್ಲಿ ಗಾಂಧೀಯವರ ಭಾಷಣ ಕಾರ್ಯಕ್ರಮವಿತ್ತು. ದೊಡ್ಡ ಜನಸ್ತೋಮವೇ ನೆರೆದಿತ್ತು! ಸಿದ್ದಾಪುರದ ಮುಖಂಡರು ‘ದೇವಿ ಶಿವಪ್ಪ ಹಸ್ಲರ್’ ಎಂಬ ದಲಿತ ಮಹಿಳೆಯನ್ನು ವಾದ್ಯದೊಂದಿಗೆ ವೇದಿಕೆಗೆ ಕರೆತರುತ್ತಾರೆ. ಶಂಕರ ಗುಲ್ವಾಡಿ ಎಂಬುವರು ದೇವಿಯನ್ನು ಗಾಂಧೀಜಿಗೆ ಪರಿಚಯಿಸುತ್ತಾರೆ. ಸ್ವಾತಂತ್ರ್ಯ ಚಳವಳಿಗೆ ತನ್ನದೇ ರೀತಿಯಲ್ಲಿ ಅರ್ಪಿಸಿಕೊಂಡಿದ್ದ ಆಕೆಯ ಉದಾತ್ತತೆ-ಪ್ರಾಮಾಣಿಕತೆ ಕೇಳಿ ಗಾಂಧೀಜಿ ಕಣ್ಣಲ್ಲಿ ನೀರು ಬರುತ್ತದೆ!! “ದೇವಿಯಂಥ ಪುಣ್ಯಾತ್ಮರು ಈ ಧರೆಯಲ್ಲಿರುವುದರಿಂದಲೇ ಜಗತ್ತು ನಡೆದಿದೆ” ಎಂದವರು ಉದ್ಘರಿಸುತ್ತಾರೆ!! ಗಾಂಧೀಜಿ ಕೈಯಿಂದ ಆಕೆಗೆ ಸನ್ಮಾನವೂ ಆಗುತ್ತದೆ.

ಈ ಪ್ರಾಮಾಣಿಕತೆಯ ಬಗ್ಗೆ ಒಂದು ಕತೆಯೂ ಇದೆ: ಕರ ನಿರಾಕರಣೆ ಚಳವಳಿಯಲ್ಲಿ ಭಾಗವಹಿಸಿದವರನ್ನು ಬಂಧಿಸುವುದು ಕ್ರೂರವಾಗಿ ದಂಡಿಸುವುದು ಬ್ರಿಟಿಷರ “ನೀತಿ”ಯಾಗಿದ್ದ ಕಾಲವದು. ಸಿದ್ದಾಪುರದ ಕೆಳಗಿನ ಮನೆ ನಾಗೇಶ ಹೆಗಡೆ ತನ್ನನ್ನು ಪೊಲೀಸರು ಬಂಧಿಸುತ್ತಾರೆಂದು ಖಾತ್ರಿಯಾದಾಗ ಮನೆಯಲ್ಲಿದ್ದ ಬಂಗಾರವನ್ನೆಲ್ಲ ಒಂದು ತಪ್ಪಲಿಯಲ್ಲಿ ಹಾಕಿ ಕಿರಿಯ ಮಗನಿಗೆ ಕೊಡುತ್ತಾರೆ. ಆತ ಆ ತಪ್ಪಲಿಯನ್ನು ತೋಟದಲ್ಲಿ ಹುಗಿದಿಡುತ್ತಾನೆ. ಅದು ದೇವಿಗೆ ಗೊತ್ತಿರುತ್ತದೆ. ಕೆಲವು ದಿನಗಳಲ್ಲಿ ಆತನೂ ಜೈಲು ಪಾಲಾಗುತ್ತಾನೆ. ಒಂದು ದಿನ ಜೋರು ಮಳೆಯಲ್ಲಿ ಆ ತಪ್ಪಲಿ ತೇಲಿ ಬರುವುದು ಕಂಡ ದೇವಿ ಅದನ್ನು ಜೋಪಾನವಾಗಿ ಇಡುತ್ತಾಳೆ. ಪರಮ ಕುಡುಕನಾದ ಗಂಡ ಪೀಡಿಸಿದರೂ, ಪೊಲೀಸರು ಸತಾಯಿಸಿದರೂ ದೇವಿ ಆ ಬಂಗಾರ ಮಾತ್ರ ಕೊಡುವುದಿಲ್ಲ. ನಾಗೇಶ್ ಹೆಗಡೆ ಬಿಡುಗಡೆ ಆಗುವುದನ್ನೇ ಕಾಯುತ್ತಿದ್ದ ದೇವಿ ಅಂದೇ ನಡುರಾತ್ರಿ ಆತನ ಮನೆಗ್ಹೋಗಿ ಬಂಗಾರದ ತಪ್ಪಲಿ ಒಪ್ಪಿಸುತ್ತಾಳೆ. ನಾಗೇಶ್ ಹೆಗಡೆ ಒಂದು ಬಂಗಾರದ ಸರ ಆಕೆಗೆ ಕೊಡಲು ಮುಂದಾದಾಗ ಒಲ್ಲೆ ಅಂತಾಳೆ!! ಈ ಬಂಗಾರ ತನ್ನಲ್ಲಿರುವ ತನಕ ತಾನೆಂದು ದಿನವೂ ಸರಿಯಾಗಿ ನಿದ್ದೆ ಮಾಡಿಲ್ಲ; ಈ ಚಿನ್ನ ಸಂರಕ್ಷಣೆಯಲ್ಲೇ ಗಂಡನನ್ನೂ ಕಳಕೊಂಡೆ ಎನ್ನುತ್ತ ಮನೆಯೆಡೆ ಹೆಜ್ಜೆ ಹಾಕುತ್ತಾಳೆ.

photo courtesy : Kamat Potpouri

ಗಾಂಧೀಜಿ ಶಿರಸಿಗೆ ಹಲವು ಬಾರಿ ಬಂದುಹೋಗಿದ್ದಾರೆ. ಆದರೆ ದಾಖಲೆಯಲ್ಲಿರುವುದು ಕೆಲವು ಸಂದರ್ಭಗಳಷ್ಟೇ. 1934 ಮಾರ್ಚ್ 1ರಂದು ಶಿರಸಿಯ ಬಿಡಕಿಬೈಲ್‍ನಲ್ಲಿ ಗಾಂಧೀಜಿಯವರ ಸಾರ್ವಜನಿಕ ಸಭೆ ಏರ್ಪಾಡಾಗಿತ್ತು. ಸಭೆಯ ನಂತರ ಆ ಬಯಲಲ್ಲೇ ಹೋರಾಟಗಾರರ ಜತೆ ಗಾಂಧೀಜಿ ಸಂವಾದ ನಡೆಸುತ್ತಾರೆ. ಇದಾದ ಬಳಿಕ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ಎಸ್.ಎನ್ ಕೇಶವೈನ್ ದೇವಾಲಯಕ್ಕೆ ಹೋಗೋಣ ಎನ್ನುತ್ತಾರೆ. “ನಾನು ಬರಬೇಕೆಂದಿದ್ದರೆ ದೇವಾಲಯದಲ್ಲಿ ನಡೆಯುವ ಕೋಣಬಲಿ ನಿಲ್ಲಿಸಬೇಕು; ಜಾತಿ ಭೇದವಿಲ್ಲದೆ ಎಲ್ಲರಿಗೂ ಪ್ರವೇಶ ಕಲ್ಪಿಸಬೇಕು” ಎಂದು ಗಾಂಧಿ ಹಠ ಹಿಡಿಯುತ್ತಾರೆ. ಇದಕ್ಕೆ ದೇವಾಲಯದ ಆಡಳಿತ ಮಂಡಳಿ ಒಪ್ಪಿದ ನಂತರವೇ ದರ್ಶನಕ್ಕೆ ಹೋಗುತ್ತಾರೆ. ಅಂದಿನಿಂದ ಶಿರಸಿ ಜಾತ್ರೆ ಹೊತ್ತಲ್ಲಿ ನಡೆಯುತ್ತಿದ್ದ ಪ್ರಾಣಿ ವಧೆ ನಿಷೇಧಿಸಲಾಗಿದೆ. ಆದರೂ ಸಿರಿಂಜ್‍ನಿಂದ ಕೋಣನ ರಕ್ತ ತೆಗೆದು “ಬ್ರಾಹ್ಮಣ ದೇವಿಗೆ” ಅರ್ಪಣೆ ಮಾಡಿ ಆಕೆ ಚಮಗಾರ (ದಲಿತ) ಯುವಕನ ಮೋಹಿಸಿ ಮೋಸಹೋದೆನೆಂದು ಜಿದ್ದಿಗೆ ಬಿದ್ದ “ಪುರಾಣ” ಬೇಡವೆಂದರೂ ನೆನಪಾಗುವಂತೆ ಮಾಡಲಾಗುತ್ತಿದೆ.…

27 ಫೆಬ್ರುವರಿ 1934 ರಂದು ಗಾಂಧೀಜಿ ಕಡಲನಗರಿ ಕಾರವಾರಕ್ಕೆ ಬಂದಿದ್ದರು. ಮರುದಿನ ಗಾಂಧೀಜಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುವುದಿತ್ತು. ಅಂದು ಅವರು ಕಾರವಾರಾಕ್ಕೆ ಸ್ವಾತಂತ್ರ್ಯ ಸಂಗ್ರಾಮದ ಸಂದೇಶ ಸಾರಲು ಬಂದಿದ್ದರೆಂಬುದು ಸಾಮಾನ್ಯ ಅಭಿಪ್ರಾಯ. ವಾಸ್ತವವೆಂದರೆ, ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು. ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಕಾರವಾರದ ಸುಬ್ಬರಾವ್ ಹಳದೀಪುರ್ಕರ್ ಸಹೋದರ ಕೃಷ್ಣರಾವ್ ಆಸ್ಥೆಯಿಂದ ಗಾಂಧಿಜೀಯವರನ್ನು ಕರೆಸಿದ್ದರು.

ಕುಂದಾಪುರದಿಂದ ‘ದಯಾವತಿ’ ಎಂಬ ಬೋಟ್‍ನಲ್ಲಿ ಕಾರವಾರ ತಲುಪಿದ್ದ ಗಾಂಧೀಜಿ ಹಳದಿಪುರ್ಕರ್ ಮನೆಯಲ್ಲೇ ವಾಸ್ತವ್ಯ ಮಾಡಿದ್ದರು. ಮರುದಿನದ ಸಭೆಗಾಗಿ ರಾತ್ರಿ ಸಮಾಲೋಚನೆ ನಡೆಸಿದ್ದರು. ಗೀತಾಂಜಲಿ ಟಾಕೀಸ್ ಹಿಂದಿನ ಬಯಲಲ್ಲಿ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧ ಮಾಡಲಾಗಿತ್ತು. ಅಲ್ಲಿ ಗಾಂಧೀಜಿಗೆ ಶ್ರೀಗಂಧದ ಪೆಟ್ಟಿಗೆ ಮತ್ತು ಬೆಳ್ಳಿ ಡಬ್ಬಿಯಲ್ಲಿ “ಮಾನಪತ್ರ” ಅರ್ಪಿಸಲಾಗಿತ್ತು. ಕಾಣಿಕೆ ಪಡೆಯಲು ನಯವಾಗಿ ನಿರಾಕರಿಸಿದ ಗಾಂಧೀಜಿ ಅದನ್ನು ಅದೇ ಸಭೆಯಲ್ಲಿ ಹರಾಜು ಹಾಕಿದ್ದರು. ಉತ್ತರ ಕನ್ನಡಕ್ಕೆ ಗಾಂಧೀಜಿಯವರ ಚಿಂತನೆಗಳ ಜತೆಜತೆಗೇ ಒಡನಾಟವೂ ಸಿಕ್ಕಿದ್ದು ವಿಶೇಷವಾಗಿದೆ!

  • ಶುದ್ದೋಧನ

ಇದನ್ನೂ ಓದಿ: ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...