Homeಮುಖಪುಟಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು.

- Advertisement -
- Advertisement -

ಉತ್ತರ ಕನ್ನಡದ ಹಲವೆಡೆ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತು ಇವತ್ತಿಗೂ ಅಚ್ಚಳಿಯದೇ ಉಳಿದಿದೆ! ಜಿಲ್ಲೆಗೆ ಹಲವು ಬಾರಿ ಗಾಂಧೀಜಿ ಬಂದುಹೋಗಿದ್ದಾರೆ. ಗಾಂಧೀಜಿ ಉತ್ತರ ಕನ್ನಡಕ್ಕೆ ಆಗಮಿಸುತ್ತಿದ್ದುದು ಸ್ವಾತಂತ್ರ್ಯ ಚಳವಳಿ ಜಾಗೃತಿಗೆಂಬುದು ಸಾಮಾನ್ಯ ಅಭಿಪ್ರಾಯ. ಆದರೆ ಗಾಂಧೀ ಹೊರಟರೆಂದರೆ ಬರೀ ಸ್ವರಾಜ್ಯ ಕನಸಷ್ಟೇ ಅಲ್ಲ, ಸಾಮಾಜಿಕ ಮತ್ತು ಜೀವಪರ ತುಡಿತವೂ ಇರುತ್ತಿತ್ತು. ಉಪ್ಪು ತಯಾರಿಕೆ ಮತ್ತು ಮಾರಾಟವನ್ನು ಬ್ರಿಟಿ‍‍‍ಷ್ ಸರ್ಕಾರ ನಿಷೇಧಿಸಿದಾಗ ಗಾಂಧೀಜಿ ಆದಿಯಾಗಿ ಹಿರಿಯ ರಾಷ್ಟ್ರೀಯ ನೇತಾರರು ತಿರುಗಿ ಬಿದ್ದಿದ್ದರು. ಅಸಹಕಾರ ಚಳುವಳಿಯೊಂದೇ ಈ ಸಮಸ್ಯೆ ಪರಿಹಾರಕ್ಕೆ ತಾರಕ ತಂತ್ರವೆಂಬ ತೀರ್ಮಾನಕ್ಕೆ ಬಂದಿದ್ದರು. 20-2-1930ರಂದು ಬಳ್ಳಾರಿಯಲ್ಲಿ ಸಭೆ ಸೇರಿದ್ದ ಪ್ರದೇಶ್ ಕಾಂಗ್ರೆಸ್ ಸಮಿತಿ ಉತ್ತರ ಕನ್ನಡದ ಅಂಕೋಲಾ ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹಕ್ಕೆ ಸರಿಯಾದ ಸ್ಥಳವೆಂದು ನಿರ್ಧರಿಸಿತ್ತು.

ಪೊಲೀಸರ ಅಡೆತಡೆಯನ್ನೆಲ್ಲ ಕಡೆಗಣಿಸಿ ಏಪ್ರಿಲ್ 13ರಂದು ಭರ್ಜರಿ ಮೆರವಣಿಗೆಯೊಂದಿಗೆ ಅಂಕೋಲೆಯ ಜನಸಾಗರ ಕಡಲ ಕಿನಾರೆಯತ್ತ ಹೊರಟಿತ್ತು! ಅಲ್ಲಿ ಬ್ರಿಟಿಷ್ ಸರ್ಕಾರದ ಕಾನೂನು ಧಿಕ್ಕರಿಸಿ ಉಪ್ಪು ತಯಾರಿಕೆ, ಮಾರಾಟ ಮಾಡಲಾಯಿತು. ಅಂಕೋಲೆಯ ಹಳ್ಳಿಹಳ್ಳಿಯಲ್ಲಿ ಚಳವಳಿ ಭುಗಿಲೆದ್ದಿತು! ಅಸಹಕಾರ ಚಳವಳಿ, ಕರಬಂಧಿ ಚಳವಳಿ ಮತ್ತು ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲೆ ನಿರ್ಣಾಯಕ ಪಾತ್ರ ವಹಿಸಿತ್ತು. ಹೋರಾಟಗಾರ ರೈತರು ತಮ್ಮ ಭೂಮಿ ಕಳಕೊಳ್ಳಬೇಕಾಗಿ ಬಂತು; ಆದರೂ ಅಂಜದೆ ಅಳುಕದೆ ಪೊಲೀಸರ ಲಾಠಿಗೆ ಎದೆಗೊಟ್ಟು ನಿಂತರು! ಗುಜರಾತಿನ ಬಾರ್ಡೋಲಿಯಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ ಮಾದರಿಯಲ್ಲೇ ಅಂಕೋಲೆಯಲ್ಲೂ ಚಳುವಳಿ ಆಗಿತ್ತು. ಅಂಕೋಲೆಗೆ ಕರ್ನಾಟಕದ ಬಾರ್ಡೋಲಿಯೆಂದು ಹೆಸರು ಬಂದಿದ್ದೇ ಈ ಯಶಸ್ವೀ ಕರನಿರಾಕರಣೆ, ಉಪ್ಪಿನ ಸತ್ಯಾಗ್ರಹದಿಂದ! ಈ ಹೊತ್ತಲ್ಲಿ ಅಂಕೋಲೆಗೆ ಬಂದಿದ್ದ ಗಾಂಧೀಜಿ ಸ್ಪೂರ್ತಿಯ ಚಿಲುಮೆಯಾಗಿದ್ದರು.

photo courtesy : Banglore Mirror

ಕರನಿರಾಕರಣೆ ಚಳವಳಿಯು ಕರಾವಳಿ ದಾಟಿ ಮಲೆನಾಡಿಗೂ ವ್ಯಾಪಿಸಿತ್ತು. ಗಾಂಧೀಜಿ ಕುಮಟಾ-ಶಿರಸಿ-ಸಿದ್ದಾಪುರಕ್ಕೂ ಹೋಗಿ ಹೋರಾಟ ಹುರಿಗೊಳ್ಳುವಂತೆ ಮಾಡಿದ್ದರು. 1934ರಲ್ಲಿ ಸಿದ್ದಾಪುರಕ್ಕೆ ಬಂದಿದ್ದ ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರ್ತಿ ಮಹಾದೇವಿತಾಯಿಯವರ ಮನೆಗೂ ಭೇಟಿ ಕೊಟ್ಟಿದ್ದರು. ಈ ಮಹಾದೇವಿತಾಯಿ ಸಿದ್ದಾಪುರದ ಪ್ರತಿಷ್ಠಿತ “ದೊಡ್ಮನೆ ಹೆಗಡೆ” ಕುಟುಂಬದವರು; ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ದೊಡ್ಡಪ್ಪನ ಮಗಳು. ಒಂದು ಮೂಲದ ಪ್ರಕಾರ ಮಹಾದೇವಿ ಬಾಲವಿಧವೆ; ಆಕೆಗೆ ಕೇಶಮುಂಡನ ಮಾಡಲಾಗಿತ್ತು. ಆಕೆಗಾಗುತ್ತಿದ್ದ ಹಿಂಸೆಯ ಸುದ್ದಿ ತಿಳಿದಿದ್ದ ಗಾಂಧೀಜಿ ಇದೊಂದು ಹೇಯ-ಬರ್ಬರ ದೌರ್ಜನ್ಯವೆಂದು ಹೇಳಿದ್ದರು; ಇಲ್ಲಾಕೆಗೆ ನೆಮ್ಮದಿಯಿಂದಿರಲು ಸಾಧ್ಯವಾಗದಿದ್ದರೆ ತಮ್ಮ ಆಶ್ರಮಕ್ಕೆ ಕರೆದೊಯ್ಯುವುದಾಗಿ ಹೇಳಿದರು. ಮಹಾದೇವಿಯೂ ಒಪ್ಪಿ ಗಾಂಧಿ ಆಶ್ರಮ ಸೇರಿಕೊಳ್ಳುತ್ತಾರೆ. ಅಕ್ಕನ ಉತ್ತರ ಭಾರತದ ಸಂಪರ್ಕ ಬಳಸಿಕೊಂಡು ರಾಮಕೃಷ್ಣ ಹೆಗಡೆ ಬನಾರಸ್ ವಿಶ್ವವಿದ್ಯಾಲಯ ಸೇರಿಕೊಳ್ಳುತ್ತಾರೆ. ಅಲ್ಲಿ ಹಿಂದಿ-ಇಂಗ್ಲಿಷ್‌ನಲ್ಲಿ ಪಾರಂಗತರಾದ ಹೆಗಡೆ ಆ ಭಾಷಾ ಚಾಕಚಾಕ್ಯತೆಯಿಂದಲೇ ರಾಷ್ಟ್ರ ನಾಯಕರ ಸಾಲಿನಲ್ಲಿ ಮಿಂಚಲು ಅವಕಾಶವೂ ಆಯಿತು!

ಇದೇ ಸಿದ್ದಾಪುರ ಹುಡದೀಬೈಲ್‍ನಲ್ಲಿ 1934ರ ಮಾರ್ಚ್‍ನಲ್ಲಿ ಗಾಂಧೀಯವರ ಭಾಷಣ ಕಾರ್ಯಕ್ರಮವಿತ್ತು. ದೊಡ್ಡ ಜನಸ್ತೋಮವೇ ನೆರೆದಿತ್ತು! ಸಿದ್ದಾಪುರದ ಮುಖಂಡರು ‘ದೇವಿ ಶಿವಪ್ಪ ಹಸ್ಲರ್’ ಎಂಬ ದಲಿತ ಮಹಿಳೆಯನ್ನು ವಾದ್ಯದೊಂದಿಗೆ ವೇದಿಕೆಗೆ ಕರೆತರುತ್ತಾರೆ. ಶಂಕರ ಗುಲ್ವಾಡಿ ಎಂಬುವರು ದೇವಿಯನ್ನು ಗಾಂಧೀಜಿಗೆ ಪರಿಚಯಿಸುತ್ತಾರೆ. ಸ್ವಾತಂತ್ರ್ಯ ಚಳವಳಿಗೆ ತನ್ನದೇ ರೀತಿಯಲ್ಲಿ ಅರ್ಪಿಸಿಕೊಂಡಿದ್ದ ಆಕೆಯ ಉದಾತ್ತತೆ-ಪ್ರಾಮಾಣಿಕತೆ ಕೇಳಿ ಗಾಂಧೀಜಿ ಕಣ್ಣಲ್ಲಿ ನೀರು ಬರುತ್ತದೆ!! “ದೇವಿಯಂಥ ಪುಣ್ಯಾತ್ಮರು ಈ ಧರೆಯಲ್ಲಿರುವುದರಿಂದಲೇ ಜಗತ್ತು ನಡೆದಿದೆ” ಎಂದವರು ಉದ್ಘರಿಸುತ್ತಾರೆ!! ಗಾಂಧೀಜಿ ಕೈಯಿಂದ ಆಕೆಗೆ ಸನ್ಮಾನವೂ ಆಗುತ್ತದೆ.

ಈ ಪ್ರಾಮಾಣಿಕತೆಯ ಬಗ್ಗೆ ಒಂದು ಕತೆಯೂ ಇದೆ: ಕರ ನಿರಾಕರಣೆ ಚಳವಳಿಯಲ್ಲಿ ಭಾಗವಹಿಸಿದವರನ್ನು ಬಂಧಿಸುವುದು ಕ್ರೂರವಾಗಿ ದಂಡಿಸುವುದು ಬ್ರಿಟಿಷರ “ನೀತಿ”ಯಾಗಿದ್ದ ಕಾಲವದು. ಸಿದ್ದಾಪುರದ ಕೆಳಗಿನ ಮನೆ ನಾಗೇಶ ಹೆಗಡೆ ತನ್ನನ್ನು ಪೊಲೀಸರು ಬಂಧಿಸುತ್ತಾರೆಂದು ಖಾತ್ರಿಯಾದಾಗ ಮನೆಯಲ್ಲಿದ್ದ ಬಂಗಾರವನ್ನೆಲ್ಲ ಒಂದು ತಪ್ಪಲಿಯಲ್ಲಿ ಹಾಕಿ ಕಿರಿಯ ಮಗನಿಗೆ ಕೊಡುತ್ತಾರೆ. ಆತ ಆ ತಪ್ಪಲಿಯನ್ನು ತೋಟದಲ್ಲಿ ಹುಗಿದಿಡುತ್ತಾನೆ. ಅದು ದೇವಿಗೆ ಗೊತ್ತಿರುತ್ತದೆ. ಕೆಲವು ದಿನಗಳಲ್ಲಿ ಆತನೂ ಜೈಲು ಪಾಲಾಗುತ್ತಾನೆ. ಒಂದು ದಿನ ಜೋರು ಮಳೆಯಲ್ಲಿ ಆ ತಪ್ಪಲಿ ತೇಲಿ ಬರುವುದು ಕಂಡ ದೇವಿ ಅದನ್ನು ಜೋಪಾನವಾಗಿ ಇಡುತ್ತಾಳೆ. ಪರಮ ಕುಡುಕನಾದ ಗಂಡ ಪೀಡಿಸಿದರೂ, ಪೊಲೀಸರು ಸತಾಯಿಸಿದರೂ ದೇವಿ ಆ ಬಂಗಾರ ಮಾತ್ರ ಕೊಡುವುದಿಲ್ಲ. ನಾಗೇಶ್ ಹೆಗಡೆ ಬಿಡುಗಡೆ ಆಗುವುದನ್ನೇ ಕಾಯುತ್ತಿದ್ದ ದೇವಿ ಅಂದೇ ನಡುರಾತ್ರಿ ಆತನ ಮನೆಗ್ಹೋಗಿ ಬಂಗಾರದ ತಪ್ಪಲಿ ಒಪ್ಪಿಸುತ್ತಾಳೆ. ನಾಗೇಶ್ ಹೆಗಡೆ ಒಂದು ಬಂಗಾರದ ಸರ ಆಕೆಗೆ ಕೊಡಲು ಮುಂದಾದಾಗ ಒಲ್ಲೆ ಅಂತಾಳೆ!! ಈ ಬಂಗಾರ ತನ್ನಲ್ಲಿರುವ ತನಕ ತಾನೆಂದು ದಿನವೂ ಸರಿಯಾಗಿ ನಿದ್ದೆ ಮಾಡಿಲ್ಲ; ಈ ಚಿನ್ನ ಸಂರಕ್ಷಣೆಯಲ್ಲೇ ಗಂಡನನ್ನೂ ಕಳಕೊಂಡೆ ಎನ್ನುತ್ತ ಮನೆಯೆಡೆ ಹೆಜ್ಜೆ ಹಾಕುತ್ತಾಳೆ.

photo courtesy : Kamat Potpouri

ಗಾಂಧೀಜಿ ಶಿರಸಿಗೆ ಹಲವು ಬಾರಿ ಬಂದುಹೋಗಿದ್ದಾರೆ. ಆದರೆ ದಾಖಲೆಯಲ್ಲಿರುವುದು ಕೆಲವು ಸಂದರ್ಭಗಳಷ್ಟೇ. 1934 ಮಾರ್ಚ್ 1ರಂದು ಶಿರಸಿಯ ಬಿಡಕಿಬೈಲ್‍ನಲ್ಲಿ ಗಾಂಧೀಜಿಯವರ ಸಾರ್ವಜನಿಕ ಸಭೆ ಏರ್ಪಾಡಾಗಿತ್ತು. ಸಭೆಯ ನಂತರ ಆ ಬಯಲಲ್ಲೇ ಹೋರಾಟಗಾರರ ಜತೆ ಗಾಂಧೀಜಿ ಸಂವಾದ ನಡೆಸುತ್ತಾರೆ. ಇದಾದ ಬಳಿಕ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ಎಸ್.ಎನ್ ಕೇಶವೈನ್ ದೇವಾಲಯಕ್ಕೆ ಹೋಗೋಣ ಎನ್ನುತ್ತಾರೆ. “ನಾನು ಬರಬೇಕೆಂದಿದ್ದರೆ ದೇವಾಲಯದಲ್ಲಿ ನಡೆಯುವ ಕೋಣಬಲಿ ನಿಲ್ಲಿಸಬೇಕು; ಜಾತಿ ಭೇದವಿಲ್ಲದೆ ಎಲ್ಲರಿಗೂ ಪ್ರವೇಶ ಕಲ್ಪಿಸಬೇಕು” ಎಂದು ಗಾಂಧಿ ಹಠ ಹಿಡಿಯುತ್ತಾರೆ. ಇದಕ್ಕೆ ದೇವಾಲಯದ ಆಡಳಿತ ಮಂಡಳಿ ಒಪ್ಪಿದ ನಂತರವೇ ದರ್ಶನಕ್ಕೆ ಹೋಗುತ್ತಾರೆ. ಅಂದಿನಿಂದ ಶಿರಸಿ ಜಾತ್ರೆ ಹೊತ್ತಲ್ಲಿ ನಡೆಯುತ್ತಿದ್ದ ಪ್ರಾಣಿ ವಧೆ ನಿಷೇಧಿಸಲಾಗಿದೆ. ಆದರೂ ಸಿರಿಂಜ್‍ನಿಂದ ಕೋಣನ ರಕ್ತ ತೆಗೆದು “ಬ್ರಾಹ್ಮಣ ದೇವಿಗೆ” ಅರ್ಪಣೆ ಮಾಡಿ ಆಕೆ ಚಮಗಾರ (ದಲಿತ) ಯುವಕನ ಮೋಹಿಸಿ ಮೋಸಹೋದೆನೆಂದು ಜಿದ್ದಿಗೆ ಬಿದ್ದ “ಪುರಾಣ” ಬೇಡವೆಂದರೂ ನೆನಪಾಗುವಂತೆ ಮಾಡಲಾಗುತ್ತಿದೆ.…

27 ಫೆಬ್ರುವರಿ 1934 ರಂದು ಗಾಂಧೀಜಿ ಕಡಲನಗರಿ ಕಾರವಾರಕ್ಕೆ ಬಂದಿದ್ದರು. ಮರುದಿನ ಗಾಂಧೀಜಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುವುದಿತ್ತು. ಅಂದು ಅವರು ಕಾರವಾರಾಕ್ಕೆ ಸ್ವಾತಂತ್ರ್ಯ ಸಂಗ್ರಾಮದ ಸಂದೇಶ ಸಾರಲು ಬಂದಿದ್ದರೆಂಬುದು ಸಾಮಾನ್ಯ ಅಭಿಪ್ರಾಯ. ವಾಸ್ತವವೆಂದರೆ, ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು. ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಕಾರವಾರದ ಸುಬ್ಬರಾವ್ ಹಳದೀಪುರ್ಕರ್ ಸಹೋದರ ಕೃಷ್ಣರಾವ್ ಆಸ್ಥೆಯಿಂದ ಗಾಂಧಿಜೀಯವರನ್ನು ಕರೆಸಿದ್ದರು.

ಕುಂದಾಪುರದಿಂದ ‘ದಯಾವತಿ’ ಎಂಬ ಬೋಟ್‍ನಲ್ಲಿ ಕಾರವಾರ ತಲುಪಿದ್ದ ಗಾಂಧೀಜಿ ಹಳದಿಪುರ್ಕರ್ ಮನೆಯಲ್ಲೇ ವಾಸ್ತವ್ಯ ಮಾಡಿದ್ದರು. ಮರುದಿನದ ಸಭೆಗಾಗಿ ರಾತ್ರಿ ಸಮಾಲೋಚನೆ ನಡೆಸಿದ್ದರು. ಗೀತಾಂಜಲಿ ಟಾಕೀಸ್ ಹಿಂದಿನ ಬಯಲಲ್ಲಿ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧ ಮಾಡಲಾಗಿತ್ತು. ಅಲ್ಲಿ ಗಾಂಧೀಜಿಗೆ ಶ್ರೀಗಂಧದ ಪೆಟ್ಟಿಗೆ ಮತ್ತು ಬೆಳ್ಳಿ ಡಬ್ಬಿಯಲ್ಲಿ “ಮಾನಪತ್ರ” ಅರ್ಪಿಸಲಾಗಿತ್ತು. ಕಾಣಿಕೆ ಪಡೆಯಲು ನಯವಾಗಿ ನಿರಾಕರಿಸಿದ ಗಾಂಧೀಜಿ ಅದನ್ನು ಅದೇ ಸಭೆಯಲ್ಲಿ ಹರಾಜು ಹಾಕಿದ್ದರು. ಉತ್ತರ ಕನ್ನಡಕ್ಕೆ ಗಾಂಧೀಜಿಯವರ ಚಿಂತನೆಗಳ ಜತೆಜತೆಗೇ ಒಡನಾಟವೂ ಸಿಕ್ಕಿದ್ದು ವಿಶೇಷವಾಗಿದೆ!

  • ಶುದ್ದೋಧನ

ಇದನ್ನೂ ಓದಿ: ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...