Homeಚಳವಳಿರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಪ್ರಕರಣದಲ್ಲಿಇನ್ನು ಜಾಮೀನು ಸಿಗದ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

- Advertisement -
- Advertisement -

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್‌ಗೆ ಎನ್‌ಐಎ ನ್ಯಾಯಾಲಯ ಜಾಮೀನು ನೀಡಿದೆ. ಕಳೆದ ವರ್ಷ ಅಸ್ಸಾಂನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ನಂತರ ನಿಷೇಧಿತ ಸಿಪಿಐ (ಮಾವೋವಾದಿ)ಯೊಂದಿಗಿನ ಸಂಪರ್ಕವಿದೆ ಎಂದು ಆರೋಪಿಸಿ ದೇಶದ್ರೋಹದ ಆರೋಪದ ಮೇಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಎನ್‌ಐಎ ಗೊಗೋಯ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಗೊಗೋಯ್‌ರವರ ಭಾಷಣವು ಭಾವನಾತ್ಮಕವಾಗಿತ್ತು ಆದರೆ ಅದು ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು ಮೇಲ್ನೋಟಕ್ಕೆ ಹೇಳಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

30,000 ರೂಪಾಯಿ ಶ್ಯೂರಿಟಿ, ಸಾಕ್ಷ್ಯಗಳನ್ನು ಹಾಳು ಮಾಡದಿರುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದು ಮುಂತಾದ ಷರತ್ತುಗಳ ಮೇಲೆ ಎನ್ಐಎ ವಿಶೇಷ ನ್ಯಾಯಾಧೀಶ ಪ್ರಂಜಲ್ ದಾಸ್ ಜಾಮೀನು ನೀಡಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಎನ್ಐಎ ಪ್ರಕರಣದಲ್ಲಿಇನ್ನೂ ಜಾಮೀನು ಸಿಗದೆ ಇರುವ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

“ಚಾಬುವಾದಲ್ಲಿ ದಾಖಲಾದ ಎನ್‌ಐಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಗೊಗೊಯ್‌ಗೆ ಜಾಮೀನು ನೀಡಿದೆ. ಆದರೆ ಈ ವರ್ಷದ ಆಗಸ್ಟ್‌ನಲ್ಲಿ ಚಾಂದಮರಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಆ ಪ್ರಕರಣದ ಜಾಮೀನು ಅರ್ಜಿ ಅಕ್ಟೋಬರ್ 13 ರಂದು ವಿಚಾರಣೆಗೆ ಬರಲಿದೆ ”ಎಂದು ಗೊಗೋಯ್ ಪರ ವಕೀಲ ಸಂತನು ಬರ್ತಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

ಸಿಎಎ ವಿರೋಧಿ ಹೋರಾಟದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ನಾಯಕ ಗೊಗೋಯ್ ಅವರನ್ನು ಕಳೆದ ವರ್ಷ ಡಿಸೆಂಬರ್ 12 ರಂದು ಜೊರ್‌ಹಾಟ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಎನ್ಐಎಗೆ ಹಸ್ತಾಂತರಿಸಲಾಯಿತು ಮತ್ತು ಎನ್‌ಐಎ ನ್ಯಾಯಾಲಯವು ಡಿಸೆಂಬರ್ 17 ರಂದು 10 ದಿನಗಳ ಕಸ್ಟಡಿಗೆ ನೀಡಿದ್ದು. ಅದೇ ದಿನ ವಿಚಾರಣೆಗಾಗಿ ಅವರನ್ನು ನವದೆಹಲಿಗೆ ಕರೆದೊಯ್ಯಲಾಗಿತ್ತು.

ಗೊಗೊಯ್ ಅವರನ್ನು ಡಿಸೆಂಬರ್ 25 ರಂದು ಮತ್ತೆ ಗುವಾಹಟಿಗೆ ಕರೆತರಲಾಗಿತ್ತು ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಅಸ್ಸಾಂ ಪೊಲೀಸರು ಸಲ್ಲಿಸಿದ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುವಾಹಟಿ ಹೈಕೋರ್ಟ್ ಜುಲೈನಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಮುಂದಿನ ವರ್ಷದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಶೀಘ್ರದಲ್ಲೇ ಹೊಸ ಪ್ರಾದೇಶಿಕ ಪಕ್ಷ ಪ್ರಾರಂಭಿಸಲಿದ್ದು, ಅದರ ಸಂಸ್ಥಾಪಕ ಅಖಿಲ್ ಗೊಗೊಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿತ್ತು.

“ನಾವು ರಾಜಕೀಯ ಪಕ್ಷವನ್ನು ರಚಿಸುತ್ತೇವೆ. ಗೊಗೊಯ್ ಜೈಲಿನಿಂದ ಹೊರಬಂದ ನಂತರ ಪಕ್ಷದ ಹೆಸರು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಇತರ ವಿವರಗಳನ್ನು ಪ್ರಕಟಿಸಲಾಗುವುದು. ಗೊಗೊಯ್ ಸಿಎಂ ಅಭ್ಯರ್ಥಿಯಾಗಲಿದ್ದಾರೆ” ಎಂದು ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಡಿ ಸೈಕಿಯಾ ಹೇಳಿದ್ದರು


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...