Homeಚಳವಳಿರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಪ್ರಕರಣದಲ್ಲಿಇನ್ನು ಜಾಮೀನು ಸಿಗದ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

- Advertisement -
- Advertisement -

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್‌ಗೆ ಎನ್‌ಐಎ ನ್ಯಾಯಾಲಯ ಜಾಮೀನು ನೀಡಿದೆ. ಕಳೆದ ವರ್ಷ ಅಸ್ಸಾಂನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ನಂತರ ನಿಷೇಧಿತ ಸಿಪಿಐ (ಮಾವೋವಾದಿ)ಯೊಂದಿಗಿನ ಸಂಪರ್ಕವಿದೆ ಎಂದು ಆರೋಪಿಸಿ ದೇಶದ್ರೋಹದ ಆರೋಪದ ಮೇಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಎನ್‌ಐಎ ಗೊಗೋಯ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಗೊಗೋಯ್‌ರವರ ಭಾಷಣವು ಭಾವನಾತ್ಮಕವಾಗಿತ್ತು ಆದರೆ ಅದು ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು ಮೇಲ್ನೋಟಕ್ಕೆ ಹೇಳಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

30,000 ರೂಪಾಯಿ ಶ್ಯೂರಿಟಿ, ಸಾಕ್ಷ್ಯಗಳನ್ನು ಹಾಳು ಮಾಡದಿರುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದು ಮುಂತಾದ ಷರತ್ತುಗಳ ಮೇಲೆ ಎನ್ಐಎ ವಿಶೇಷ ನ್ಯಾಯಾಧೀಶ ಪ್ರಂಜಲ್ ದಾಸ್ ಜಾಮೀನು ನೀಡಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಎನ್ಐಎ ಪ್ರಕರಣದಲ್ಲಿಇನ್ನೂ ಜಾಮೀನು ಸಿಗದೆ ಇರುವ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

“ಚಾಬುವಾದಲ್ಲಿ ದಾಖಲಾದ ಎನ್‌ಐಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಗೊಗೊಯ್‌ಗೆ ಜಾಮೀನು ನೀಡಿದೆ. ಆದರೆ ಈ ವರ್ಷದ ಆಗಸ್ಟ್‌ನಲ್ಲಿ ಚಾಂದಮರಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಆ ಪ್ರಕರಣದ ಜಾಮೀನು ಅರ್ಜಿ ಅಕ್ಟೋಬರ್ 13 ರಂದು ವಿಚಾರಣೆಗೆ ಬರಲಿದೆ ”ಎಂದು ಗೊಗೋಯ್ ಪರ ವಕೀಲ ಸಂತನು ಬರ್ತಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

ಸಿಎಎ ವಿರೋಧಿ ಹೋರಾಟದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ನಾಯಕ ಗೊಗೋಯ್ ಅವರನ್ನು ಕಳೆದ ವರ್ಷ ಡಿಸೆಂಬರ್ 12 ರಂದು ಜೊರ್‌ಹಾಟ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಎನ್ಐಎಗೆ ಹಸ್ತಾಂತರಿಸಲಾಯಿತು ಮತ್ತು ಎನ್‌ಐಎ ನ್ಯಾಯಾಲಯವು ಡಿಸೆಂಬರ್ 17 ರಂದು 10 ದಿನಗಳ ಕಸ್ಟಡಿಗೆ ನೀಡಿದ್ದು. ಅದೇ ದಿನ ವಿಚಾರಣೆಗಾಗಿ ಅವರನ್ನು ನವದೆಹಲಿಗೆ ಕರೆದೊಯ್ಯಲಾಗಿತ್ತು.

ಗೊಗೊಯ್ ಅವರನ್ನು ಡಿಸೆಂಬರ್ 25 ರಂದು ಮತ್ತೆ ಗುವಾಹಟಿಗೆ ಕರೆತರಲಾಗಿತ್ತು ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಅಸ್ಸಾಂ ಪೊಲೀಸರು ಸಲ್ಲಿಸಿದ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುವಾಹಟಿ ಹೈಕೋರ್ಟ್ ಜುಲೈನಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಮುಂದಿನ ವರ್ಷದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಶೀಘ್ರದಲ್ಲೇ ಹೊಸ ಪ್ರಾದೇಶಿಕ ಪಕ್ಷ ಪ್ರಾರಂಭಿಸಲಿದ್ದು, ಅದರ ಸಂಸ್ಥಾಪಕ ಅಖಿಲ್ ಗೊಗೊಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿತ್ತು.

“ನಾವು ರಾಜಕೀಯ ಪಕ್ಷವನ್ನು ರಚಿಸುತ್ತೇವೆ. ಗೊಗೊಯ್ ಜೈಲಿನಿಂದ ಹೊರಬಂದ ನಂತರ ಪಕ್ಷದ ಹೆಸರು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಇತರ ವಿವರಗಳನ್ನು ಪ್ರಕಟಿಸಲಾಗುವುದು. ಗೊಗೊಯ್ ಸಿಎಂ ಅಭ್ಯರ್ಥಿಯಾಗಲಿದ್ದಾರೆ” ಎಂದು ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಡಿ ಸೈಕಿಯಾ ಹೇಳಿದ್ದರು


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...