Homeಚಳವಳಿರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ರೈತ ಹೋರಾಟಗಾರ ಅಖಿಲ್ ಗೊಗೋಯ್‌ಗೆ ಎನ್‌ಐಎ ಕೋರ್ಟ್ ಜಾಮೀನು

ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಪ್ರಕರಣದಲ್ಲಿಇನ್ನು ಜಾಮೀನು ಸಿಗದ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

- Advertisement -
- Advertisement -

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್‌ಗೆ ಎನ್‌ಐಎ ನ್ಯಾಯಾಲಯ ಜಾಮೀನು ನೀಡಿದೆ. ಕಳೆದ ವರ್ಷ ಅಸ್ಸಾಂನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ನಂತರ ನಿಷೇಧಿತ ಸಿಪಿಐ (ಮಾವೋವಾದಿ)ಯೊಂದಿಗಿನ ಸಂಪರ್ಕವಿದೆ ಎಂದು ಆರೋಪಿಸಿ ದೇಶದ್ರೋಹದ ಆರೋಪದ ಮೇಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಎನ್‌ಐಎ ಗೊಗೋಯ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಗೊಗೋಯ್‌ರವರ ಭಾಷಣವು ಭಾವನಾತ್ಮಕವಾಗಿತ್ತು ಆದರೆ ಅದು ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು ಮೇಲ್ನೋಟಕ್ಕೆ ಹೇಳಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

30,000 ರೂಪಾಯಿ ಶ್ಯೂರಿಟಿ, ಸಾಕ್ಷ್ಯಗಳನ್ನು ಹಾಳು ಮಾಡದಿರುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದು ಮುಂತಾದ ಷರತ್ತುಗಳ ಮೇಲೆ ಎನ್ಐಎ ವಿಶೇಷ ನ್ಯಾಯಾಧೀಶ ಪ್ರಂಜಲ್ ದಾಸ್ ಜಾಮೀನು ನೀಡಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಎರಡು ಪ್ರಕರಣಗಳಲ್ಲಿ ಒಂದರಲ್ಲಿ ಜಾಮೀನು ಸಿಕ್ಕಿದ್ದು, ಮತ್ತೊಂದು ಎನ್ಐಎ ಪ್ರಕರಣದಲ್ಲಿಇನ್ನೂ ಜಾಮೀನು ಸಿಗದೆ ಇರುವ ಕಾರಣ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

“ಚಾಬುವಾದಲ್ಲಿ ದಾಖಲಾದ ಎನ್‌ಐಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಗೊಗೊಯ್‌ಗೆ ಜಾಮೀನು ನೀಡಿದೆ. ಆದರೆ ಈ ವರ್ಷದ ಆಗಸ್ಟ್‌ನಲ್ಲಿ ಚಾಂದಮರಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಆ ಪ್ರಕರಣದ ಜಾಮೀನು ಅರ್ಜಿ ಅಕ್ಟೋಬರ್ 13 ರಂದು ವಿಚಾರಣೆಗೆ ಬರಲಿದೆ ”ಎಂದು ಗೊಗೋಯ್ ಪರ ವಕೀಲ ಸಂತನು ಬರ್ತಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

ಸಿಎಎ ವಿರೋಧಿ ಹೋರಾಟದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ನಾಯಕ ಗೊಗೋಯ್ ಅವರನ್ನು ಕಳೆದ ವರ್ಷ ಡಿಸೆಂಬರ್ 12 ರಂದು ಜೊರ್‌ಹಾಟ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಎನ್ಐಎಗೆ ಹಸ್ತಾಂತರಿಸಲಾಯಿತು ಮತ್ತು ಎನ್‌ಐಎ ನ್ಯಾಯಾಲಯವು ಡಿಸೆಂಬರ್ 17 ರಂದು 10 ದಿನಗಳ ಕಸ್ಟಡಿಗೆ ನೀಡಿದ್ದು. ಅದೇ ದಿನ ವಿಚಾರಣೆಗಾಗಿ ಅವರನ್ನು ನವದೆಹಲಿಗೆ ಕರೆದೊಯ್ಯಲಾಗಿತ್ತು.

ಗೊಗೊಯ್ ಅವರನ್ನು ಡಿಸೆಂಬರ್ 25 ರಂದು ಮತ್ತೆ ಗುವಾಹಟಿಗೆ ಕರೆತರಲಾಗಿತ್ತು ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಅಸ್ಸಾಂ ಪೊಲೀಸರು ಸಲ್ಲಿಸಿದ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುವಾಹಟಿ ಹೈಕೋರ್ಟ್ ಜುಲೈನಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಮುಂದಿನ ವರ್ಷದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಶೀಘ್ರದಲ್ಲೇ ಹೊಸ ಪ್ರಾದೇಶಿಕ ಪಕ್ಷ ಪ್ರಾರಂಭಿಸಲಿದ್ದು, ಅದರ ಸಂಸ್ಥಾಪಕ ಅಖಿಲ್ ಗೊಗೊಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿತ್ತು.

“ನಾವು ರಾಜಕೀಯ ಪಕ್ಷವನ್ನು ರಚಿಸುತ್ತೇವೆ. ಗೊಗೊಯ್ ಜೈಲಿನಿಂದ ಹೊರಬಂದ ನಂತರ ಪಕ್ಷದ ಹೆಸರು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಇತರ ವಿವರಗಳನ್ನು ಪ್ರಕಟಿಸಲಾಗುವುದು. ಗೊಗೊಯ್ ಸಿಎಂ ಅಭ್ಯರ್ಥಿಯಾಗಲಿದ್ದಾರೆ” ಎಂದು ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಡಿ ಸೈಕಿಯಾ ಹೇಳಿದ್ದರು


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...