Homeಮುಖಪುಟಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ.

- Advertisement -
- Advertisement -

ಅದು ಸ್ವಾತಂತ್ರ್ಯ ಸಂಗ್ರಾಮದ ಆಚೀಚೆಯ ದಿನ ಮಾನೆ; ಇಡೀ ಕರ್ನಾಟಕದಲ್ಲಿ ಗಾಂಧಿ ಜಿಲ್ಲೆ ಎಂಬ ಪ್ರತೀತಿ ಇದ್ದದ್ದು ಉತ್ತರ ಕನ್ನಡಕ್ಕೆ ಮಾತ್ರ! ಗಾಂಧೀಜಿ ಚಿಂತನೆಗಳಿಂದ ಪ್ರಭಾವಿತವಾಗಿದ್ದ ಜಿಲ್ಲೆ ಜೊತೆ ಗಾಂಧೀಜಿಗೂ ನಿಕಟ ಒಡನಾಟವಿತ್ತು. ಉತ್ತರ ಕನ್ನಡದಲ್ಲಿ ನಡೆದ ಅಸ್ಪೃಶ್ಯತೆ ವಿರುದ್ಧ, ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧ ಮತ್ತು ಬ್ರಿಟಿಷರ ವಿರುದ್ಧದ ಹಲವು ಹೋರಾಟಗಳಲ್ಲಿ ಗಾಂಧೀಜಿ ಪಾಲ್ಗೊಂಡು ಪ್ರೇರಣೆ ಆಗಿದ್ದರು. ಜಿಲ್ಲೆಯ ಅಂಕೋಲೆಯಂತೂ ಕರ್ನಾಟಕದ ಬಾರ್ಡೋಲಿ ಎಂದೇ ಹೆಸರುವಾಸಿ. ಇಲ್ಲಾಗಿರುವ ಹತ್ತಾರು ಸ್ವಾತಂತ್ರ್ಯ ಚಳುವಳಿಗಳು ಐತಿಹಾಸಿಕ! ಗಾಂಧಿ ಅನುಯಾಯಿಗಳ ದೊಡ್ಡ ದಂಡೇ ಅಂಕೋಲೆಯ ಹಳ್ಳಿ-ಹಳ್ಳಿಗಳಲ್ಲಿ ತಯಾರಾಗಿತ್ತು.

ಅಂಕೋಲೆಯ ಸುತ್ತಮುತ್ತ “ಆಗೇರ” ಎಂದು ಗುರುತಿಸುವ ದಲಿತ ಸಮುದಾಯವೊಂದಿದೆ. ಇವತ್ತಿಗೂ ತೀರ ಹಿಂದುಳಿದಿರುವ ಈ ಜಾತಿ ಜನರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದರು. ಅಂಕೋಲೆಯ ವಂದಿಗೆ ಗ್ರಾಮದ ದಲಿತ ಕೇರಿಗೆ 1942ರಲ್ಲಿ ಗಾಂಧೀಜಿ ಬಂದಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಗೇರ ಸಮುದಾಯ ಬಲಿಯಾ ಮಾಧು ಆಗೇರಗೆ ಗಾಂಧೀಜಿ ಎಂದರೆ ಸಾಕ್ಷಾತ್ ದೇವರು!! ಗೌಂಡಿ ಉಪಕಸುಬಿನ ಈತ ಕೆಂಪು ಕಡಗಲ್ಲಿನಲ್ಲಿ ಗಾಂಧೀಜಿಯ ಉಬ್ಬುಶಿಲ್ಪ ನಿರ್ಮಿಸಿದ್ದರು. ಮನೆ ಮುಂದೆ ಕಟ್ಟೆಕಟ್ಟಿ ಅದನ್ನಲ್ಲಿ ಪ್ರತಿಷ್ಠಾಪಿಸಿದ್ದರು. ಈ ಗಾಂಧಿ ಪ್ರತಿಮೆಗೆ ಬಲಿಯಾ ಆಗೇರ ದಿನವೂ ಹೂ ಮುಡಿಸಿ ಧೂಪ-ದೀಪದಿಂದ ಪೂಜಿಸುತ್ತಿದ್ದರು.

ಗಾಂಧಿ
ಬಲಿಯಾ ಆಗೇರ ಕೆತ್ತಿ ದಿನವೂ ಪೂಜಿಸುತ್ತಿದ್ದ ಉಬ್ಬುಗಲ್ಲಿನ ಗಾಂಧಿ ಪ್ರತಿಮೆ

ಗಾಂಧಿ ಜಯಂತಿ, ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದ ಬಲಿಯಾ ಸುತ್ತಲಿನವರಿಗೆ ಅಂದು ಸಿಹಿ ಹಂಚುತ್ತಿದ್ದರು. 1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ. ಬಲಿಯಾ ಆಗೇರರ ಮಕ್ಕಳಾದ ಲಿಂಗು ಮತ್ತು ಥಾಕು ಇವತ್ತಿಗೂ ದೇವರಿಗೆ ಪೂಜಿಸುವಷ್ಟೇ ಭಕ್ತಿ-ಗೌರವದಿಂದ ಗಾಂಧಿ ಪ್ರತಿಮೆಗೂ ಆರತಿ ಎತ್ತುತ್ತಿದ್ದಾರೆ.

ನೌಕರಿ-ವ್ಯವಹಾರ ನಿಮಿತ್ತ ಊರಿಂದ ಹೊರಗಿರುವ ಬಲಿಯಾ ಆಗೇರರ ಮೊಮ್ಮಕ್ಕಳು ಮತ್ತು ಪರಿವಾರದವರು ಗಾಂಧಿ ಜಯಂತಿಯಂದು ಮಾತ್ರ ತಪ್ಪದೆ ಊರಿಗೆ ಬರುತ್ತಾರೆ. ಗಾಂಧಿ ಶಿಲ್ಪದ ಮುಂದೆ ಒಟ್ಟಾಗಿ ನಿಂತು ಗೌರವ ಸಲ್ಲಿಸುತ್ತಾರೆ. ಅಂದು ಈ ಆಗೇರ ಕುಟುಂಬದಲ್ಲಿ ವಿಶೇಷ ಪೂಜೋತ್ಸವ; ಹಬ್ಬದ ಸಡಗರ; ನೆಂಟರಿಷ್ಟರಿಗೆಲ್ಲಾ ಸಿಹಿ ಹಂಚಿಕೆ.

ಗಾಂಧಿ
ಬಲಿಯಾ ಆಗೇರ

ಇಲ್ಲಿ ದಾಖಲಿಸಬೇಕಾದ ಮತ್ತೊಂದು ಮಹತ್ವದ ಸಂಗತಿಯಿದೆ. ಕಟ್ಟಾ ಗಾಂಧಿವಾದಿಯಾಗಿದ್ದ ಬಲಿಯಾ ಆಗೇರ ತನಗೆ ಸರ್ಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಸೌಲಭ್ಯ ಕೊಡಲು ಬಂದಾಗ ಬೇಡವೆಂದು ನಿರಾಕರಿಸಿದ್ದರು! ತಾನು ಮಾಡಿದ ಹೋರಾಟ ತನ್ನ ಜನ್ಮಭೂಮಿಗಾಗಿ; ಗಾಂಧೀಜಿಗಾಗಿ ಎಂಬ ಅರ್ಪಣಾಭಾವ ಬಲಿಯಾ ಆಗೇರರದಾಗಿತ್ತು; ಇದಕ್ಕೆಲ್ಲಾ ಇನಾಮು ಯಾಕೆಂದು ಆತ ಕೇಳುತ್ತಿದ್ದರು. ಗಾಂಧಿಯನ್ನು ಮತೋನ್ಮತ್ತರಾಗಿ ದ್ವೇಷಿಸುವವರಿಗೆ ಬಲಿಯಾ ಆಗೇರ ಅರ್ಥವಾಗದ ಒಗಟೇ ಬಿಡಿ!! ಗಾಂಧೀಜಿಯನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರನೆಂದು ಮೂದಲಿಸುವ ಬಾಯಿ ಹರುಕ ಧರ್ಮಾತ್ಮ ಸಂಸತ್ತಿನಲ್ಲಿ ಪ್ರತಿನಿಧಿಸುವ ಉತ್ತರಕನ್ನಡಲ್ಲಿ ಅದೇ ಗಾಂಧಿಯನ್ನು ತಲತಲಾಂತರದಿಂದ ಶ್ರದ್ಧೆಯಿಂದ ಪೂಜಿಸುವ ದಲಿತ ಕುಟುಂಬ ಒಂದಿದೇ ಎಂಬುದೇ ಅದ್ಭುತ!!!

  • ಶುದ್ದೋಧನ. ಪತ್ರಕರ್ತರು, ಉತ್ತರ ಕನ್ನಡ.

ಇದನ್ನೂ ಓದಿ: ಇಂದು ನಾವು ಗಾಂಧೀಜಿಯವರನ್ನೇಕೆ ನೆನೆಯಬೇಕು? – ಜಿ.ಎನ್‌. ನಾಗರಾಜ್

Also Read: When Godse´s Children Rule India, Gandhi is Crucified Everyday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...