Homeಕರ್ನಾಟಕಗ್ರೂಪ್ ಸಿ, ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ‘ಕನ್ನಡಿಗರಿಗೆ’ ಕಾಯ್ದಿರಿಸಲು ಮುಂದಾದ ರಾಜ್ಯ ಸರ್ಕಾರ

ಗ್ರೂಪ್ ಸಿ, ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ‘ಕನ್ನಡಿಗರಿಗೆ’ ಕಾಯ್ದಿರಿಸಲು ಮುಂದಾದ ರಾಜ್ಯ ಸರ್ಕಾರ

ಯಾವುದೇ ವ್ಯಕ್ತಿಯು 10 ವರ್ಷಗಳಿಗಿಂತ ಹೆಚ್ಚು ಕಾಲ ರಾಜ್ಯದಲ್ಲಿದ್ದು 10 ನೇ ತರಗತಿ ತನಕ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದವರನ್ನು ‘ಕನ್ನಡಿಗ’ ಎಂದು ಕರೆಯಲು ಅರ್ಹನಾಗಿರುತ್ತಾರೆ

- Advertisement -
- Advertisement -

ಕರ್ನಾಟಕ ಸರ್ಕಾರ ‘ಕನ್ನಡಿಗರಿಗೆ’ ಗ್ರೂಪ್ ಸಿ ಮತ್ತು ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ಕಾಯ್ದಿರಿಸುವ ಆದೇಶ ಹೊರಡಿಸಿದ್ದು, ಖಾಸಗಿ ವಲಯದಲ್ಲಿ ಕೂಡಾ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದೆ.

ಈ ಆದೇಶದಂತೆ ಗುಮಾಸ್ತರು, ಅಕೌಂಟೆಂಟ್‌ಗಳು, ಮೇಲ್ವಿಚಾರಕರು, ಪಿಯೋನ್‌ಗಳು, ಸಹಾಯಕರು ಮತ್ತು ಇತರ ಕಚೇರಿ ಸಿಬ್ಬಂದಿಗಳನ್ನು ಒಳಗೊಂಡಿರುವ ಗ್ರೂಪ್ ಸಿ ಮತ್ತು ಡಿ ವಿಭಾಗಗಳಲ್ಲಿ ‘ಕನ್ನಡಿಗರನ್ನು’ ಮಾತ್ರ ನೇಮಕ ಮಾಡಲಾಗುತ್ತದೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಕನ್ನಡ ಪರ ಸಂಘಟನೆಗಳ ದೀರ್ಘಕಾಲದ ಬೇಡಿಕೆ ಸಧ್ಯಕ್ಕೆ ಈಡೇರಿದೆಯಾದರೂ ಇದು ಹಲವಾರು ಕಾನೂನು ತೊಡಕುಗಳನ್ನು ಎದುರಿಸುತ್ತದೆ ಎನ್ನಲಾಗಿದೆ.

ಸರ್ಕಾರದ ಈ ನಿರ್ಧಾರವನ್ನು ಸೆಪ್ಟೆಂಬರ್ 24 ರಂದು ವಿಧಾನಸಭೆಯ ಅಧಿವೇಶನದಲ್ಲಿ ಕಾನೂನು ಸಚಿವ ಜೆ.ಸಿ.ಮಧುಸ್ವಾಮಿ ಘೋಷಿಸಿದ್ದರು. ಸರ್ಕಾರಿ ಇಲಾಖೆಗಳಲ್ಲಿ ಅಥವಾ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್‌ಯು) ಮಾತ್ರವಲ್ಲದೆ ಖಾಸಗಿ ಕಂಪನಿಗಳಲ್ಲಿಯೂ ರಾಜ್ಯದ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ ಎಂದು ಅವರು ಹೇಳಿದ್ದರು.

ಎ ಮತ್ತು ಬಿ ವಿಭಾಗದಲ್ಲಿ ಕೂಡಾ ಕನ್ನಡಿಗರಿಗೆ ಆದ್ಯತೆ ನೀಡಬೇಕು, ಇದರಲ್ಲಿ ಕಂಪನಿಯ ನಿರ್ವಹಣಾ ಮಟ್ಟದ ಹುದ್ದೆಗಳಲ್ಲಿಯು ಮೀಸಲಾತಿ ಇರಬೇಕೆಂದು ನಿರ್ದೇಶನ ಒತ್ತಿಹೇಳಿದೆ. “ಸರ್ಕಾರವು ನೀಡುವ ಪ್ರಯೋಜನಗಳು ಮತ್ತು ರಿಯಾಯಿತಿಗಳನ್ನು ಪಡೆದುಕೊಂಡಿರುವ ಎಲ್ಲಾ ಕೈಗಾರಿಕೆಗಳು ಮತ್ತು ಕಂಪೆನಿಗಳಿಗೆ ಇದು ಅನ್ವಯಿಸುತ್ತದೆ” ಎಂದು ಮಧುಸ್ವಾಮಿ ಹೇಳಿರುವುದಾಗಿ ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

“ಯಾವುದೇ ವ್ಯಕ್ತಿಯು 10 ವರ್ಷಗಳಿಗಿಂತ ಹೆಚ್ಚು ಕಾಲ ರಾಜ್ಯದಲ್ಲಿದ್ದು 10 ನೇ ತರಗತಿ ತನಕ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದವರನ್ನು ‘ಕನ್ನಡಿಗ’ ಎಂದು ಕರೆಯಲು ಅರ್ಹನಾಗಿರುತ್ತಾರೆ” ಎಂದು ನಿರ್ದೇಶನವು ಹೇಳಿದೆ.

ರಾಜ್ಯ ಸರ್ಕಾರವು ಈ ಘೋಷಣೆ ಮಾಡಿದ್ದರೂ, ಅದನ್ನು ಅನುಷ್ಠಾನಗೊಳಿಸುವಲ್ಲಿ ಕಾನೂನು ತೊಡಕುಗಳನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರಿ ಮೂಲವೊಂದನ್ನು ಉಲ್ಲೇಖಿಸಿ ದಿ ಪ್ರಿಂಟ್ ಹೇಳಿದೆ. “ಸುಪ್ರೀಂ ಕೋರ್ಟ್‌ ಜೂನ್‌ನಲ್ಲಿ ಮಾಡಿದ ಆದೇಶವು ದೊಡ್ಡ ಅಡಚಣೆಯಾಗಿದೆ”. ಆದೇಶದಲ್ಲಿ “ಮೀಸಲಾತಿಯು ಮೂಲಭೂತ ಹಕ್ಕಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಜೊತೆಗೆ ಜನರನ್ನು ಹುದ್ದಗೆ ನೇಮಿಸಿಕೊಳ್ಳಲು ಯಾವುದೇ ಸರ್ಕಾರವು ಕಂಪನಿಗಳನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಅದು ಸೂಚಿಸಿತ್ತು.

ಅದಾಗ್ಯೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್,‌ ಈ ನಿರ್ಧಾರವನ್ನು ಜಾರಿಗೆ ತರುವ ಪ್ರಕ್ರಿಯೆಯನ್ನು ಸರ್ಕಾರ ಈಗಾಗಲೇ ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...