Homeಕರ್ನಾಟಕಗ್ರೂಪ್ ಸಿ, ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ‘ಕನ್ನಡಿಗರಿಗೆ’ ಕಾಯ್ದಿರಿಸಲು ಮುಂದಾದ ರಾಜ್ಯ ಸರ್ಕಾರ

ಗ್ರೂಪ್ ಸಿ, ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ‘ಕನ್ನಡಿಗರಿಗೆ’ ಕಾಯ್ದಿರಿಸಲು ಮುಂದಾದ ರಾಜ್ಯ ಸರ್ಕಾರ

ಯಾವುದೇ ವ್ಯಕ್ತಿಯು 10 ವರ್ಷಗಳಿಗಿಂತ ಹೆಚ್ಚು ಕಾಲ ರಾಜ್ಯದಲ್ಲಿದ್ದು 10 ನೇ ತರಗತಿ ತನಕ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದವರನ್ನು ‘ಕನ್ನಡಿಗ’ ಎಂದು ಕರೆಯಲು ಅರ್ಹನಾಗಿರುತ್ತಾರೆ

- Advertisement -
- Advertisement -

ಕರ್ನಾಟಕ ಸರ್ಕಾರ ‘ಕನ್ನಡಿಗರಿಗೆ’ ಗ್ರೂಪ್ ಸಿ ಮತ್ತು ಡಿ ವರ್ಗದ ಸರ್ಕಾರಿ ಉದ್ಯೋಗಗಳನ್ನು ಕಾಯ್ದಿರಿಸುವ ಆದೇಶ ಹೊರಡಿಸಿದ್ದು, ಖಾಸಗಿ ವಲಯದಲ್ಲಿ ಕೂಡಾ ಉದ್ಯೋಗಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದೆ.

ಈ ಆದೇಶದಂತೆ ಗುಮಾಸ್ತರು, ಅಕೌಂಟೆಂಟ್‌ಗಳು, ಮೇಲ್ವಿಚಾರಕರು, ಪಿಯೋನ್‌ಗಳು, ಸಹಾಯಕರು ಮತ್ತು ಇತರ ಕಚೇರಿ ಸಿಬ್ಬಂದಿಗಳನ್ನು ಒಳಗೊಂಡಿರುವ ಗ್ರೂಪ್ ಸಿ ಮತ್ತು ಡಿ ವಿಭಾಗಗಳಲ್ಲಿ ‘ಕನ್ನಡಿಗರನ್ನು’ ಮಾತ್ರ ನೇಮಕ ಮಾಡಲಾಗುತ್ತದೆ.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಕನ್ನಡ ಪರ ಸಂಘಟನೆಗಳ ದೀರ್ಘಕಾಲದ ಬೇಡಿಕೆ ಸಧ್ಯಕ್ಕೆ ಈಡೇರಿದೆಯಾದರೂ ಇದು ಹಲವಾರು ಕಾನೂನು ತೊಡಕುಗಳನ್ನು ಎದುರಿಸುತ್ತದೆ ಎನ್ನಲಾಗಿದೆ.

ಸರ್ಕಾರದ ಈ ನಿರ್ಧಾರವನ್ನು ಸೆಪ್ಟೆಂಬರ್ 24 ರಂದು ವಿಧಾನಸಭೆಯ ಅಧಿವೇಶನದಲ್ಲಿ ಕಾನೂನು ಸಚಿವ ಜೆ.ಸಿ.ಮಧುಸ್ವಾಮಿ ಘೋಷಿಸಿದ್ದರು. ಸರ್ಕಾರಿ ಇಲಾಖೆಗಳಲ್ಲಿ ಅಥವಾ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್‌ಯು) ಮಾತ್ರವಲ್ಲದೆ ಖಾಸಗಿ ಕಂಪನಿಗಳಲ್ಲಿಯೂ ರಾಜ್ಯದ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ ಎಂದು ಅವರು ಹೇಳಿದ್ದರು.

ಎ ಮತ್ತು ಬಿ ವಿಭಾಗದಲ್ಲಿ ಕೂಡಾ ಕನ್ನಡಿಗರಿಗೆ ಆದ್ಯತೆ ನೀಡಬೇಕು, ಇದರಲ್ಲಿ ಕಂಪನಿಯ ನಿರ್ವಹಣಾ ಮಟ್ಟದ ಹುದ್ದೆಗಳಲ್ಲಿಯು ಮೀಸಲಾತಿ ಇರಬೇಕೆಂದು ನಿರ್ದೇಶನ ಒತ್ತಿಹೇಳಿದೆ. “ಸರ್ಕಾರವು ನೀಡುವ ಪ್ರಯೋಜನಗಳು ಮತ್ತು ರಿಯಾಯಿತಿಗಳನ್ನು ಪಡೆದುಕೊಂಡಿರುವ ಎಲ್ಲಾ ಕೈಗಾರಿಕೆಗಳು ಮತ್ತು ಕಂಪೆನಿಗಳಿಗೆ ಇದು ಅನ್ವಯಿಸುತ್ತದೆ” ಎಂದು ಮಧುಸ್ವಾಮಿ ಹೇಳಿರುವುದಾಗಿ ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

“ಯಾವುದೇ ವ್ಯಕ್ತಿಯು 10 ವರ್ಷಗಳಿಗಿಂತ ಹೆಚ್ಚು ಕಾಲ ರಾಜ್ಯದಲ್ಲಿದ್ದು 10 ನೇ ತರಗತಿ ತನಕ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದವರನ್ನು ‘ಕನ್ನಡಿಗ’ ಎಂದು ಕರೆಯಲು ಅರ್ಹನಾಗಿರುತ್ತಾರೆ” ಎಂದು ನಿರ್ದೇಶನವು ಹೇಳಿದೆ.

ರಾಜ್ಯ ಸರ್ಕಾರವು ಈ ಘೋಷಣೆ ಮಾಡಿದ್ದರೂ, ಅದನ್ನು ಅನುಷ್ಠಾನಗೊಳಿಸುವಲ್ಲಿ ಕಾನೂನು ತೊಡಕುಗಳನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರಿ ಮೂಲವೊಂದನ್ನು ಉಲ್ಲೇಖಿಸಿ ದಿ ಪ್ರಿಂಟ್ ಹೇಳಿದೆ. “ಸುಪ್ರೀಂ ಕೋರ್ಟ್‌ ಜೂನ್‌ನಲ್ಲಿ ಮಾಡಿದ ಆದೇಶವು ದೊಡ್ಡ ಅಡಚಣೆಯಾಗಿದೆ”. ಆದೇಶದಲ್ಲಿ “ಮೀಸಲಾತಿಯು ಮೂಲಭೂತ ಹಕ್ಕಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಜೊತೆಗೆ ಜನರನ್ನು ಹುದ್ದಗೆ ನೇಮಿಸಿಕೊಳ್ಳಲು ಯಾವುದೇ ಸರ್ಕಾರವು ಕಂಪನಿಗಳನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಅದು ಸೂಚಿಸಿತ್ತು.

ಅದಾಗ್ಯೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್,‌ ಈ ನಿರ್ಧಾರವನ್ನು ಜಾರಿಗೆ ತರುವ ಪ್ರಕ್ರಿಯೆಯನ್ನು ಸರ್ಕಾರ ಈಗಾಗಲೇ ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...