Homeಕರ್ನಾಟಕ20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ.

- Advertisement -
- Advertisement -

ಒಳ್ಳೆಯ ಬೆಲೆ ಸಿಗುತ್ತದೆ ಎಂದು ಇಪ್ಪತ್ತು ವರ್ಷಗಳ ಹಿಂದೆ ಭೂಮಿ ಕೊಟ್ಟವರು ಇಂದು ಬೀದಿ ಬಿಕಾರಿಯಾಗಿದ್ದಾರೆ. ಕೆಲವು ತಲೆ ಮಾಸಿದವರು, ರೈತರ ಬಗ್ಗೆ ತಿಳಿಯದೆ ಇರುವವರು, ಕಾರ್ಪೊರೇಟ್ ಬಂದರೆ ರೈತರ ಭೂಮಿಗೆ ಕೋಟಿಗಟ್ಟಲೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇವರು ಯಾರೂ ರೈತರ ಮಕ್ಕಳಲ್ಲ. ಇವರು ಪಕ್ಕಾ ಅಪ್ರಮಾಣಿಕ ಬ್ಯುಸಿನೆಸ್‌ಗೆ ಹುಟ್ಟಿದವರು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಜೆ.ಎಂ. ವೀರಸಂಗಯ್ಯ ಕಿಡಿಕಾರಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಐಕ್ಯ ಹೋರಾಟ ಸಮಿತಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

“ದೇಶಕ್ಕೆ ಸ್ವಾತಂತ್ಯ್ರ ಬೇಡ, ಬ್ರಿಟೀಷರ ಆಡಳಿತವೆ ಇರಲಿ ಎಂದು ಹೇಳಿದವರು ದೇಶದಲ್ಲಿ ಅಧಿಕಾರ ಹಿಡಿದು ಕೂತಿದ್ದಾರೆ, ಇದು ದೇಶದ ಬಹುದೊಡ್ಡ ದುರಂತವಾಗಿದೆ. ಗಾಂಧೀಜಿಯನ್ನು ದೈಹಿಕ ಹಾಗೂ ತಾತ್ವಿಕವಾಗಿ ಕೊಂದು ಹಾಕಿರುವ ಈ ಸಮಯದಲ್ಲಿ ಕಾರ್ಮಿಕರು, ಮಹಿಳೆಯರು, ರೈತರು ಗಾಂಧಿಜಿಯ ಮಾರ್ಗದಲ್ಲಿ ಹೋರಾಟವನ್ನು ಪುನರ್‌ರೂಪಿಸುವ ಅಗತ್ಯವಿದೆ” ಎಂದು ಹೇಳಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕ ಕ್ಷೇತ್ರವನ್ನು ಉಳಿಸಬಾರದು ಎಂದು ಆಲೋಚಿಸಿವೆ. ಬ್ಯಾಂಕುಗಳು ಮುಚ್ಚುತ್ತಿರುವ ಈ ಸಮಯದಲ್ಲಿ ಶ್ರೀಮಂತರ ಹಣ ಬ್ಯಾಂಕುಗಳಲ್ಲಿ ಇಡಲು ಸಾಧ್ಯವಾಗದಿರುವುದರಿಂದ ರೈತರ ಭೂಮಿಯನ್ನು ಕೊಂಡುಕೊಳ್ಳುವ ಮೂಲಕ ಶ್ರೀಮಂತರ ಹಣವನ್ನು ಉಳಿಸಲು ಬೇಕಾಗಿಯೇ ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದಾರೆ” ಎಂದು ಅವರು ಆರೋಪಿಸಿದರು.

“ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ. ಪ್ರಸ್ತುತ 168 ರೀತಿಯ ಬೆಳೆಗಳನ್ನು ರಾಜ್ಯದಲ್ಲಿ ಬೆಳೆಯುತ್ತಿದ್ದಾರೆ. ಈ ಕಾಯ್ದೆ ಬಂದರೆ ಲಾಭ ತರುವ ಏಕ ಬೆಳೆಯನ್ನು ಬೆಳೆದು ನಮ್ಮ ಆಹಾರ ಸಂಸ್ಕೃತಿಯನ್ನು ನಾಶ ಮಾಡುತ್ತಾರೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು.

“ಎಪಿಎಂಸಿಯ ಸಾವಿರಾರು ಎಕರೆ ಭೂಮಿಯನ್ನು, ಕಚೇರಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿ ನುಂಗಿ ನೀರು ಕುಡಿಯಲು ಸರ್ಕಾರ ಹೊರಟಿದೆ. ಇದರಿಂದ ರೈತರಿಗೆ ಮಾರುಕಟ್ಟೆ ಇಲ್ಲದಂತೆ ಆಗುತ್ತದೆ. ಒಂದು ವೇಳೆ ಬೆಲೆ ಸಿಗುತ್ತದೆ ಎಂದು ಭಾವಿಸಿ ಭೂಮಿಯನ್ನು ಶ್ರೀಮಂತರಿಗೆ ಮಾರಿದರೆ, ಮತ್ತೆಂದೂ ರೈತರಿಗೆ ಭೂಮಿ ಸಿಗುವುದಿಲ್ಲ, ಗುಲಾಮರಾಗಿಯೆ ಇರಬೇಕಾಗುತ್ತದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿಯ ಕೆಲಸಕ್ಕೆ ಯಂತ್ರಗಳನ್ನು ತರುವುದರಿಂದ ಕೂಲಿ ಕೆಲಸನೂ ಸಿಗುವುದಿಲ್ಲ, ಹುಷಾರ್‌…” ಎಂದು ವೀರಸಂಗಯ್ಯ ರೈತರಿಗೆ ಎಚ್ಚರಿಸಿದರು.


ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...