Homeಕರ್ನಾಟಕ20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ.

- Advertisement -
- Advertisement -

ಒಳ್ಳೆಯ ಬೆಲೆ ಸಿಗುತ್ತದೆ ಎಂದು ಇಪ್ಪತ್ತು ವರ್ಷಗಳ ಹಿಂದೆ ಭೂಮಿ ಕೊಟ್ಟವರು ಇಂದು ಬೀದಿ ಬಿಕಾರಿಯಾಗಿದ್ದಾರೆ. ಕೆಲವು ತಲೆ ಮಾಸಿದವರು, ರೈತರ ಬಗ್ಗೆ ತಿಳಿಯದೆ ಇರುವವರು, ಕಾರ್ಪೊರೇಟ್ ಬಂದರೆ ರೈತರ ಭೂಮಿಗೆ ಕೋಟಿಗಟ್ಟಲೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇವರು ಯಾರೂ ರೈತರ ಮಕ್ಕಳಲ್ಲ. ಇವರು ಪಕ್ಕಾ ಅಪ್ರಮಾಣಿಕ ಬ್ಯುಸಿನೆಸ್‌ಗೆ ಹುಟ್ಟಿದವರು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಜೆ.ಎಂ. ವೀರಸಂಗಯ್ಯ ಕಿಡಿಕಾರಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಐಕ್ಯ ಹೋರಾಟ ಸಮಿತಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

“ದೇಶಕ್ಕೆ ಸ್ವಾತಂತ್ಯ್ರ ಬೇಡ, ಬ್ರಿಟೀಷರ ಆಡಳಿತವೆ ಇರಲಿ ಎಂದು ಹೇಳಿದವರು ದೇಶದಲ್ಲಿ ಅಧಿಕಾರ ಹಿಡಿದು ಕೂತಿದ್ದಾರೆ, ಇದು ದೇಶದ ಬಹುದೊಡ್ಡ ದುರಂತವಾಗಿದೆ. ಗಾಂಧೀಜಿಯನ್ನು ದೈಹಿಕ ಹಾಗೂ ತಾತ್ವಿಕವಾಗಿ ಕೊಂದು ಹಾಕಿರುವ ಈ ಸಮಯದಲ್ಲಿ ಕಾರ್ಮಿಕರು, ಮಹಿಳೆಯರು, ರೈತರು ಗಾಂಧಿಜಿಯ ಮಾರ್ಗದಲ್ಲಿ ಹೋರಾಟವನ್ನು ಪುನರ್‌ರೂಪಿಸುವ ಅಗತ್ಯವಿದೆ” ಎಂದು ಹೇಳಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕ ಕ್ಷೇತ್ರವನ್ನು ಉಳಿಸಬಾರದು ಎಂದು ಆಲೋಚಿಸಿವೆ. ಬ್ಯಾಂಕುಗಳು ಮುಚ್ಚುತ್ತಿರುವ ಈ ಸಮಯದಲ್ಲಿ ಶ್ರೀಮಂತರ ಹಣ ಬ್ಯಾಂಕುಗಳಲ್ಲಿ ಇಡಲು ಸಾಧ್ಯವಾಗದಿರುವುದರಿಂದ ರೈತರ ಭೂಮಿಯನ್ನು ಕೊಂಡುಕೊಳ್ಳುವ ಮೂಲಕ ಶ್ರೀಮಂತರ ಹಣವನ್ನು ಉಳಿಸಲು ಬೇಕಾಗಿಯೇ ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದಾರೆ” ಎಂದು ಅವರು ಆರೋಪಿಸಿದರು.

“ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ. ಪ್ರಸ್ತುತ 168 ರೀತಿಯ ಬೆಳೆಗಳನ್ನು ರಾಜ್ಯದಲ್ಲಿ ಬೆಳೆಯುತ್ತಿದ್ದಾರೆ. ಈ ಕಾಯ್ದೆ ಬಂದರೆ ಲಾಭ ತರುವ ಏಕ ಬೆಳೆಯನ್ನು ಬೆಳೆದು ನಮ್ಮ ಆಹಾರ ಸಂಸ್ಕೃತಿಯನ್ನು ನಾಶ ಮಾಡುತ್ತಾರೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು.

“ಎಪಿಎಂಸಿಯ ಸಾವಿರಾರು ಎಕರೆ ಭೂಮಿಯನ್ನು, ಕಚೇರಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿ ನುಂಗಿ ನೀರು ಕುಡಿಯಲು ಸರ್ಕಾರ ಹೊರಟಿದೆ. ಇದರಿಂದ ರೈತರಿಗೆ ಮಾರುಕಟ್ಟೆ ಇಲ್ಲದಂತೆ ಆಗುತ್ತದೆ. ಒಂದು ವೇಳೆ ಬೆಲೆ ಸಿಗುತ್ತದೆ ಎಂದು ಭಾವಿಸಿ ಭೂಮಿಯನ್ನು ಶ್ರೀಮಂತರಿಗೆ ಮಾರಿದರೆ, ಮತ್ತೆಂದೂ ರೈತರಿಗೆ ಭೂಮಿ ಸಿಗುವುದಿಲ್ಲ, ಗುಲಾಮರಾಗಿಯೆ ಇರಬೇಕಾಗುತ್ತದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿಯ ಕೆಲಸಕ್ಕೆ ಯಂತ್ರಗಳನ್ನು ತರುವುದರಿಂದ ಕೂಲಿ ಕೆಲಸನೂ ಸಿಗುವುದಿಲ್ಲ, ಹುಷಾರ್‌…” ಎಂದು ವೀರಸಂಗಯ್ಯ ರೈತರಿಗೆ ಎಚ್ಚರಿಸಿದರು.


ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...