Homeಚಳವಳಿರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ.

- Advertisement -
- Advertisement -

ಕನ್ನಡ ನಾಡಿಗೆ ನ್ಯಾಯಸಮ್ಮತವಾಗಿ ಬರಬೇಕಾದ GST ಪರಿಹಾರ, ನೆರೆ ಪರಿಹಾರ, SDRF ಹಾಗೂ NSRF ನಿಧಿ ನೀಡದೇ ಮಲತಾಯಿ ಧೋರಣೆ ತಳೆದಿರುವ ಭಾರತ ಒಕ್ಕೂಟ ಸರ್ಕಾರದ ನಡೆ ಖಂಡಿನೀಯ. ರಾಜ್ಯದ ಪಾಲಿನ GST, ನೆರೆ ಪರಿಹಾರ ಕೊಡಿ, ಇಲ್ಲದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ! ಎಂದು ಕನ್ನಡಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂದೆ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪರ ಸಹಭಾಗಿತ್ವದಲ್ಲಿ ‘ಕರ ನಿರಾಕರಣೆ ಚಳವಳಿ’ ಎಂಬ ವಿನೂತನ ವಿಭಿನ್ನ ಸತ್ಯಾಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ.

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ. ಕೊನೆಗೆ ತೆರಿಗೆ ಕಟ್ಟದೇ ಪ್ರತಿರೋಧ ಒಡ್ಡುತ್ತೇವೆ ಎಂದು ಕನ್ನಡ ರಣಧೀರರ ಪಡೆಯ ಚೇತನ್ ಗೌಡ ತಿಳಿಸಿದ್ದಾರೆ.

“ದಕ್ಷಿಣದ ರಾಜ್ಯಗಳ ಮೇಲಿನ ಹಿಂದಿ ಹೇರಿಕೆ ಹಾಗೂ ಭಾಷಾತಾರತಮ್ಯ ನೀತಿಯನ್ನು ಭಾರತದ ಒಕ್ಕೂಟ ಸರ್ಕಾರವು ನಿಲ್ಲಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕೈಬಿಡಬೇಕು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಮತ್ತು ಪರಿಷ್ಕೃತ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಅನಿಯಂತ್ರಿತ ವಲಸೆ ನಿಯಂತ್ರಣ ಕಾಯ್ದೆ (ILP) ಜಾರಿಯಾಗಬೇಕು. ಜೊತೆಗೆ ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕೈಬಿಡುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.

“ಕರ್ನಾಟಕ ರಾಜ್ಯವು ಭಾರತದ ಒಕ್ಕೂಟ ಸರ್ಕಾರಕ್ಕೆ  2014-15ರಲ್ಲಿ 60,595 ಕೋಟಿ, 2015-16ರಲ್ಲಿ 72,040ಕೋಟಿ, 2016-17 ರಲ್ಲಿ 85,920 ಕೋಟಿ, 2017-18 ರಲ್ಲಿ 98,460 ಕೋಟಿ ಮತ್ತು 2018-19 ರಲ್ಲಿ 1,19,796 ಕೋಟಿ ರೂಗಳನ್ನು ತೆರಿಗೆಯಾಗಿ ನೀಡಿದೆ. ಆದರೆ ಇಷ್ಟೊಂದು ತೆರಿಗೆ ಕಟ್ಟಿದರು ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ. ನಮ್ಮದೇ ಹಣವನ್ನು ನಮಗೆ ಕೊಡಲು ಹಿಂಜರಿಕೆಯೇಕೆ? ಕಳೆದ ವರ್ಷಗಳಲ್ಲಿ ಸರಾಸರಿ 100 ಪ್ರತಿಶತ ಹೆಚ್ಚಿನ ತೆರಿಗೆಯನ್ನು ನೀಡಿದ್ದೇವೆ. ಇದಕ್ಕೆ ನಮಗೆ ಸಿಕ್ಕ ಉಡುಗೊರೆಯೆಂದರೆ ನಮ್ಮ ಪಾಲಿನ 11,324 ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ಕೊಡದೇ ಆರ್‌ಬಿಐನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಲೈವ್ ನೋಡಿ

ಬೆಂಗಳೂರು: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಕನ್ನಡ ರಣಧೀರ ಪಡೆ ಮತ್ತು ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ "ಕರೆ ನಿರಾಕರಣೆ ಸತ್ಯಾಗ್ರಹ"

Posted by Naanu Gauri on Thursday, October 1, 2020

ಇಡೀ ಭಾರತ ಒಕ್ಕೂಟದಲ್ಲಿಯೇ 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ಆದರೆ ನಮ್ಮ ಪಾಲಿನ ಹಣ ಕೇಳಲು ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ತಾವೇ ಭ್ರಷ್ಟರಾಗಿದ್ದುಕೊಂಡು ಹೈಕಮಾಂಡ್ ಎದುರು ಜೀ ಹುಜೂರ್ ಎನ್ನುತ್ತಿದ್ದಾರೆ. ಇನ್ನು ಇಲ್ಲಿಂದ ಆಯ್ಕೆಯಾದ  ಸಂಸದರು ಯಾವುದಕ್ಕೂ ಪ್ರಯೋಜನವಿಲ್ಲವೆಂದು ಹೋರಾಟಕಾರರು ಆಕ್ರೋಶ ಹೊರಹಾಕಿದ್ದಾರೆ.

ಕರ ನಿರಾಕರಣೆ ಮುಖೇನ ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಪಡೆಯಲು ನಾಡಿನ ಜನತೆ ಮುಂದಾಗಬೇಕು, ಅಧಿಕಾರ ಹಣ ಲಾಲಸೆಗಳಿಗೆ ಕನ್ನಡದ ಅಸ್ಮಿತೆಯನ್ನು ಅಡಮಾನವಿಟ್ಟಿರುವ ನಾಡದ್ರೋಹಿಗಳ ವಿರುದ್ಧ ನಮ್ಮ ಹೋರಾಟ ನಿತ್ಯ ನಿರಂತರವಾಗಿರಬೇಕು. ನಾಡಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ನಾಡಿನ ಸರ್ಕಾರದ ಉದ್ಯಮ, ನೆಲ, ಜಲಗಳನ್ನು ಮಾರಾಟಕ್ಕಿಟ್ಟಿರುವ, ನಮಗೆ ಬರಬೇಕಾದ ಪಾಲನ್ನು ಪಡೆಯಲಾಗದೆ ನಮ್ಮ ಭೂಮಿಯನ್ನು ಮಾರುತ್ತಿರುವ ರಣಹೇಡಿ ಸರ್ಕಾರದ ನಡೆಯನ್ನು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪಡೆ ಜಂಟಿಯಾಗಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೋರಾಟಗಾರರು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ ಕುಮಾರ್ ಮಾತನಾಡಿ “ನಮ್ಮ ನಾಡಿನ ತೆರಿಗೆ ಪಡೆಯುವ ಭಾರತ ಒಕ್ಕೂಟ ಸರ್ಕಾರ ನಮಗೆ ನೀಡಬೇಕಾದ ನ್ಯಾಯಸಮ್ಮತ ಹಣ ನೀಡದೆ, ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಿರುವುದು ತೀರಾ ಖಂಡನೀಯ. ನಾಡಿನ ನೆಲ ಸಂಸ್ಕೃತಿಗೆ ಬೆಲೆ ನೀಡದೆ, ಹಿಂದಿ ಹೇರಿಕೆ ಮಾಡುತ್ತಿರುವ ನೀತಿಯನ್ನು ಖಂಡಿಸಿ, ಭಾರತ ಒಕ್ಕೂಟ ಸರ್ಕಾರ ತನ್ನ ಮಲತಾಯಿ ಧೋರಣೆ ಮುಂದುವರಿಸಿದಲ್ಲಿ ಮಗದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣವಾಗಲಿದೆ” ಎಂದು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...