Homeಚಳವಳಿರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ.

- Advertisement -
- Advertisement -

ಕನ್ನಡ ನಾಡಿಗೆ ನ್ಯಾಯಸಮ್ಮತವಾಗಿ ಬರಬೇಕಾದ GST ಪರಿಹಾರ, ನೆರೆ ಪರಿಹಾರ, SDRF ಹಾಗೂ NSRF ನಿಧಿ ನೀಡದೇ ಮಲತಾಯಿ ಧೋರಣೆ ತಳೆದಿರುವ ಭಾರತ ಒಕ್ಕೂಟ ಸರ್ಕಾರದ ನಡೆ ಖಂಡಿನೀಯ. ರಾಜ್ಯದ ಪಾಲಿನ GST, ನೆರೆ ಪರಿಹಾರ ಕೊಡಿ, ಇಲ್ಲದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ! ಎಂದು ಕನ್ನಡಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂದೆ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪರ ಸಹಭಾಗಿತ್ವದಲ್ಲಿ ‘ಕರ ನಿರಾಕರಣೆ ಚಳವಳಿ’ ಎಂಬ ವಿನೂತನ ವಿಭಿನ್ನ ಸತ್ಯಾಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ.

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ. ಕೊನೆಗೆ ತೆರಿಗೆ ಕಟ್ಟದೇ ಪ್ರತಿರೋಧ ಒಡ್ಡುತ್ತೇವೆ ಎಂದು ಕನ್ನಡ ರಣಧೀರರ ಪಡೆಯ ಚೇತನ್ ಗೌಡ ತಿಳಿಸಿದ್ದಾರೆ.

“ದಕ್ಷಿಣದ ರಾಜ್ಯಗಳ ಮೇಲಿನ ಹಿಂದಿ ಹೇರಿಕೆ ಹಾಗೂ ಭಾಷಾತಾರತಮ್ಯ ನೀತಿಯನ್ನು ಭಾರತದ ಒಕ್ಕೂಟ ಸರ್ಕಾರವು ನಿಲ್ಲಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕೈಬಿಡಬೇಕು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಮತ್ತು ಪರಿಷ್ಕೃತ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಅನಿಯಂತ್ರಿತ ವಲಸೆ ನಿಯಂತ್ರಣ ಕಾಯ್ದೆ (ILP) ಜಾರಿಯಾಗಬೇಕು. ಜೊತೆಗೆ ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕೈಬಿಡುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.

“ಕರ್ನಾಟಕ ರಾಜ್ಯವು ಭಾರತದ ಒಕ್ಕೂಟ ಸರ್ಕಾರಕ್ಕೆ  2014-15ರಲ್ಲಿ 60,595 ಕೋಟಿ, 2015-16ರಲ್ಲಿ 72,040ಕೋಟಿ, 2016-17 ರಲ್ಲಿ 85,920 ಕೋಟಿ, 2017-18 ರಲ್ಲಿ 98,460 ಕೋಟಿ ಮತ್ತು 2018-19 ರಲ್ಲಿ 1,19,796 ಕೋಟಿ ರೂಗಳನ್ನು ತೆರಿಗೆಯಾಗಿ ನೀಡಿದೆ. ಆದರೆ ಇಷ್ಟೊಂದು ತೆರಿಗೆ ಕಟ್ಟಿದರು ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ. ನಮ್ಮದೇ ಹಣವನ್ನು ನಮಗೆ ಕೊಡಲು ಹಿಂಜರಿಕೆಯೇಕೆ? ಕಳೆದ ವರ್ಷಗಳಲ್ಲಿ ಸರಾಸರಿ 100 ಪ್ರತಿಶತ ಹೆಚ್ಚಿನ ತೆರಿಗೆಯನ್ನು ನೀಡಿದ್ದೇವೆ. ಇದಕ್ಕೆ ನಮಗೆ ಸಿಕ್ಕ ಉಡುಗೊರೆಯೆಂದರೆ ನಮ್ಮ ಪಾಲಿನ 11,324 ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ಕೊಡದೇ ಆರ್‌ಬಿಐನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಲೈವ್ ನೋಡಿ

ಬೆಂಗಳೂರು: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಕನ್ನಡ ರಣಧೀರ ಪಡೆ ಮತ್ತು ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ "ಕರೆ ನಿರಾಕರಣೆ ಸತ್ಯಾಗ್ರಹ"

Posted by Naanu Gauri on Thursday, October 1, 2020

ಇಡೀ ಭಾರತ ಒಕ್ಕೂಟದಲ್ಲಿಯೇ 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ಆದರೆ ನಮ್ಮ ಪಾಲಿನ ಹಣ ಕೇಳಲು ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ತಾವೇ ಭ್ರಷ್ಟರಾಗಿದ್ದುಕೊಂಡು ಹೈಕಮಾಂಡ್ ಎದುರು ಜೀ ಹುಜೂರ್ ಎನ್ನುತ್ತಿದ್ದಾರೆ. ಇನ್ನು ಇಲ್ಲಿಂದ ಆಯ್ಕೆಯಾದ  ಸಂಸದರು ಯಾವುದಕ್ಕೂ ಪ್ರಯೋಜನವಿಲ್ಲವೆಂದು ಹೋರಾಟಕಾರರು ಆಕ್ರೋಶ ಹೊರಹಾಕಿದ್ದಾರೆ.

ಕರ ನಿರಾಕರಣೆ ಮುಖೇನ ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಪಡೆಯಲು ನಾಡಿನ ಜನತೆ ಮುಂದಾಗಬೇಕು, ಅಧಿಕಾರ ಹಣ ಲಾಲಸೆಗಳಿಗೆ ಕನ್ನಡದ ಅಸ್ಮಿತೆಯನ್ನು ಅಡಮಾನವಿಟ್ಟಿರುವ ನಾಡದ್ರೋಹಿಗಳ ವಿರುದ್ಧ ನಮ್ಮ ಹೋರಾಟ ನಿತ್ಯ ನಿರಂತರವಾಗಿರಬೇಕು. ನಾಡಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ನಾಡಿನ ಸರ್ಕಾರದ ಉದ್ಯಮ, ನೆಲ, ಜಲಗಳನ್ನು ಮಾರಾಟಕ್ಕಿಟ್ಟಿರುವ, ನಮಗೆ ಬರಬೇಕಾದ ಪಾಲನ್ನು ಪಡೆಯಲಾಗದೆ ನಮ್ಮ ಭೂಮಿಯನ್ನು ಮಾರುತ್ತಿರುವ ರಣಹೇಡಿ ಸರ್ಕಾರದ ನಡೆಯನ್ನು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪಡೆ ಜಂಟಿಯಾಗಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೋರಾಟಗಾರರು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ ಕುಮಾರ್ ಮಾತನಾಡಿ “ನಮ್ಮ ನಾಡಿನ ತೆರಿಗೆ ಪಡೆಯುವ ಭಾರತ ಒಕ್ಕೂಟ ಸರ್ಕಾರ ನಮಗೆ ನೀಡಬೇಕಾದ ನ್ಯಾಯಸಮ್ಮತ ಹಣ ನೀಡದೆ, ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಿರುವುದು ತೀರಾ ಖಂಡನೀಯ. ನಾಡಿನ ನೆಲ ಸಂಸ್ಕೃತಿಗೆ ಬೆಲೆ ನೀಡದೆ, ಹಿಂದಿ ಹೇರಿಕೆ ಮಾಡುತ್ತಿರುವ ನೀತಿಯನ್ನು ಖಂಡಿಸಿ, ಭಾರತ ಒಕ್ಕೂಟ ಸರ್ಕಾರ ತನ್ನ ಮಲತಾಯಿ ಧೋರಣೆ ಮುಂದುವರಿಸಿದಲ್ಲಿ ಮಗದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣವಾಗಲಿದೆ” ಎಂದು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...