Homeಮುಖಪುಟಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

ಪೊಲೀಸರು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಬಿಡದ ಕಾರಣ ಟಿಎಂಸಿ ಸಂಸದರು ಕಳೆದ ಒಂದು ಗಂಟೆಯಿಂದ ಸ್ಥಳದಲ್ಲೇ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

- Advertisement -
- Advertisement -

ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬದ ಭೇಟಿಗೆ ಬಂದಿದ್ದ ಟಿಎಂಸಿ ನಿಯೋಗವನ್ನು ದಾರಿಯಲ್ಲೇ ಉತ್ತರಪ್ರದೇಶ ಪೊಲೀಸರು ಬಲಪ್ರಯೋಗದಿಂದ ತಡೆದಿದ್ದಾರೆ. ಸಂಸದೆ ಪ್ರತಿಮಾ ಮೊಂಡಾಲ್‌ರ ಭುಜ ಹಿಡಿದು ಪುರುಷ ಪೊಲೀಸನೊಬ್ಬ ದೂಡಿರುವ ಮತ್ತು ಪಕ್ಷದ ಹಿರಿಯ ಮುಖಂಡ ಡೆರೆಕ್ ಒಬ್ರಿಯೆನ್ನ ನೆಲಕ್ಕೆ ಬೀಳಿಸಿರುವ ಘಟನೆ ಜರುಗಿದ್ದು ತೀವ್ರ ಟೀಕೆಗೆ ಕಾರಣವಾಗಿದೆ.

ಎಎನ್‌ಐ ಟ್ವೀಟ್ ಮಾಡಿರುವ 29 ಸೆಕೆಂಡುಗಳ ವಿಡಿಯೋ ದೃಶ್ಯದಲ್ಲಿ ಟಿಎಂಸಿ ನಿಯೋಗದ ಜೊತೆ ಪೊಲೀಸರ ಅಟ್ಟಹಾಸ ಕಾಣಿಸುತ್ತದೆ. ಬಿಳಿ ಅಂಗಿ ಮತ್ತು ಹೆಲ್ಮೆಟ್ ಧರಿಸಿರುವ ಪುರುಷ ಪೊಲೀಸನೊಬ್ಬ ಸಂಸದೆ ಪ್ರತಿಮಾ ಮೊಂಡಾಲ್‌ರ ಭುಜ ಹಿಡಿದು ದೂಡುತ್ತಿದ್ದಾಗ ಅದನ್ನು ಪ್ರಶ್ನಿಸಿ ಅವರ ರಕ್ಷಣೆಗೆ ಪಕ್ಷದ ಹಿರಿಯ ಮುಖಂಡ ಒಬ್ರಿಯನ್ ಧಾವಿಸಿದ್ದಾರೆ. ಆಗ ಅವರನ್ನು ನೆಲಕ್ಕೆ ತಳ್ಳಿ ಬೀಳಿಸಲಾಗಿದೆ.

ಸಂತ್ರಸ್ತೆ ಕುಟುಂಬಕ್ಕೆ ಸಂತಾಪ ಸೂಚಿಸಲು ಹೊರಟಿದ್ದ ಸಂಸದರನ್ನು ಆಕೆಯ ಮನೆಯಿಂದ ಒಂದೂವರೆ ಕಿಲೋಮೀಟರ್ ದೂರದಲ್ಲೇ ಪೊಲೀಸರು ತಡೆದಿದ್ದಾರೆ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ತಿಳಿಸಿದೆ. ನಿಯೋಗದಲ್ಲಿ ಡೆರೆಕ್ ಒಬ್ರಯೆನ್, ಡಾ.ಕಾಕೋಲಿ ಘೋಷ್ ದಸ್ತಿದಾರ್, ಪ್ರತಿಮಾ ಮೊಂಡಾಲ್ ಮತ್ತು ಮಾಜಿ ಸಂಸತ್ ಸದಸ್ಯೆ ಮಮತಾ ಠಾಕೂರ್ ಇದ್ದರು.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಭೇಟಿಗೆ ಪಾದಯಾತ್ರೆ: ರಾಹುಲ್, ಪ್ರಿಯಾಂಕಾ ಬಂಧನ

ಟಿಎಂಸಿ ಸಂಸದರು ಪೊಲೀಸರು ತಡೆದ ಸ್ಥಳದಲ್ಲೇ ಧರಣಿ ನಡೆಸುತ್ತಿದ್ದಾರೆ. ಸಂಸದೆ ಡಾ.ಕಾಕೋಲಿ ಘೋಷ್ ದಸ್ತಿದಾರ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯುವತಿಯ ಮೇಲೆ ಅತ್ಯಾಚಾರವಾದಾಗ ಎಲ್ಲಿ ಹೇಗಿದ್ದಿರಿ..? ಆ ಕ್ರಿಮಿನಲ್‌ಗಳು ಆಕೆಯನ್ನು ಕೊಂದುಹಾಕಿದ್ದಾರೆ ಆಗ ಎಲ್ಲಿ ಇದ್ದಿರಿ..? ಲಾಠಿ, ಬಂದೂಕುಗಳನ್ನು ಹಿಡಿದು ಕೊಂಡಿದ್ದಿರಿ… ನಾಚಿಕೆಯಾಗಬೇಕು ನಿಮಗೆ, ನಿಮ್ಮ ಸರ್ಕಾರಕ್ಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಬಿಡದ ಕಾರಣ ಟಿಎಂಸಿ ಸಂಸದರು ಕಳೆದ ಒಂದು ಗಂಟೆಯಿಂದ ಸ್ಥಳದಲ್ಲೇ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ನಿನ್ನೆ ಕೂಡ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯುವತಿಯ ಕುಟುಂಬವನ್ನು ಭೇಟಿಯಾಗಲು ಹೋಗುವಾಗ ತಡೆದು ಸ್ವಲ್ಪ ಸಮಯದವರೆಗೆ ಬಂಧಿಸಲಾಗಿತ್ತು. ಉತ್ತರ ಪ್ರದೇಶದ ಗೌತಮ ಬುದ್ಧ ಪೊಲೀಸ್ ಠಾನೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ.

ಸೆಪ್ಟೆಂಬರ್ 14 ರಂದು ದನದ ಮೇವನ್ನು ಸಂಗ್ರಹಿಸಲು ಕುಟುಂಬದ ಜೊತೆ ತನ್ನ ಹಳ್ಳಿಯ ಹೊಲಕ್ಕೆ ಹೋಗಿದ್ದಾಗ ನಾಲ್ಕು ಮೇಲ್ಜಾತಿಯ ಪುರುಷರು ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿದ್ದರು. ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗಿತ್ತು.

ಆದರೆ ಆಕೆಯ ಸ್ಥಿತಿ ಸುಧಾರಿಸದಿದ್ದಾಗ ನವದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಕೆ ಅಲ್ಲೇ ನಿಧನರಾಗಿದ್ದರು. ಕುಟುಂಬದವರನ್ನು ದೂರವಿರಿಸಿ ಪೊಲೀಸರೇ ಯುವತಿಯ ಮೃತದೇಹವನ್ನು ಸುಟ್ಟುಹಾಕಿದ್ದರು. ಈ ಪ್ರಕರಣ ದೇಶಾದ್ಯಂತ ವ್ಯಾಪಕ ಟೀಕೆ ಮತ್ತು ಪ್ರತಿಭಟನೆಗೆ ಕಾರಣವಾಗಿದೆ. ಪ್ರತಿಪಕ್ಷಗಳು ಸೇರಿ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದರೆ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿದ್ದು, ವಿಪಕ್ಷಗಳು ಸಂತ್ರಸ್ತೆಯ ಮನೆಗೆ ಭೇಟಿ ನೀಡದಂತೆ ತಡೆಯುತ್ತಿದೆ.


ಇದನ್ನೂ ಓದಿ: ಹತ್ರಾಸ್: ತೀವ್ರಗೊಂಡ ಆಕ್ರೋಶ, ಪ್ರತಿಭಟನೆ ಹತ್ತಿಕ್ಕಲು ಇಂಡಿಯಾ ಗೇಟ್ ಬಳಿ ನಿಷೇದಾಜ್ಞೆ ಹೇರಿದ ದೆಹಲಿ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...