Homeಮುಖಪುಟ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಎಂದು ಕುಟುಂಬ ಪ್ರಶ್ನಿಸುತ್ತದೆ.

- Advertisement -
- Advertisement -

ಜಾತಿ ಪ್ರಮಾಣಪತ್ರ ಅರ್ಜಿಯಲ್ಲಿ ಧರ್ಮದ ಸ್ಥಳದಲ್ಲಿ ಜಾತ್ಯಾತೀತ ಎಂದು ಬರೆದ ಕೇರಳದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಿಸಲಾಗಿದೆ. ಯಾವುದೇ ಧರ್ಮವನ್ನು ನಂಬದ ಅಥವಾ ಅನುಸರಿಸದ ಕಾರಣ ಇವರಿಗೆ ಜಾತಿ ಪ್ರಮಾಣಪತ್ರ ನಿರಾಕರಿಸಿದ ತಾಲೂಕು ಅಧಿಕಾರಿಯ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇರಳದ ಪಥನಂತಿಟ್ಟ ಜಿಲ್ಲೆಯ ರಾನ್ನಿಯಲ್ಲಿರುವ ತಾಲ್ಲೂಕು ಕಚೇರಿಯ ಹೊರಗೆ ಅಜ್ಜ-ಅಜ್ಜಿಯರು ಮತ್ತು ಮಕ್ಕಳು ಸೇರಿದಂತೆ ದಲಿತ ಕುಟುಂಬವೊಂದು ಸೆ.28ರಿಂದ ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸುತ್ತಿದೆ. ’ನಾನು ವಿದ್ಯಾಭ್ಯಾಸ ಮಾಡಲು ಬಯಸುತ್ತೇನೆ. ಧರ್ಮದ ಹೆಸರಿನಲ್ಲಿ ತಹಶೀಲ್ದಾರ್ ನಮಗೆ ಜಾತಿ ಪ್ರಮಾಣಪತ್ರವನ್ನು ನಿರಾಕರಿಸಿದ್ದಾರೆ. ನಮಗೆ ನ್ಯಾಯ ನೀಡಿ” ಎಂಬ ಫಲಕಗಳನ್ನು ಹಿಡಿದು ಧರಣಿ ನಡೆಸುತ್ತಿದ್ದಾರೆ.

ವಡಸ್ಸೆರಿಕಾ ಗ್ರಾಮದ ಪಿ.ಕೇಶವದೇವು ಪುಲಯ ಸಮುದಾಯಕ್ಕೆ ಸೇರಿದವರಾಗಿದ್ದು, ಕೇರಳದಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿದೆ. ಅವರ ಕುಟುಂಬದ ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಯಾವುದೇ ಧರ್ಮವನ್ನು ಆಚರಿಸುವುದಿಲ್ಲ ಮತ್ತು ತಮ್ಮನ್ನು ಜಾತ್ಯತೀತರು ಎಂದು ಕರೆದುಕೊಳ್ಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಇತ್ತೀಚೆಗೆ, ಕೇಶವದೇವು ತಮ್ಮ ಮೊಮ್ಮಗಳಿಗೆ ಶೈಕ್ಷಣಿಕ ಉದ್ದೇಶಗಳಿಗಾಗಿ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿದಾರರು ಧರ್ಮವನ್ನು ‘ಜಾತ್ಯತೀತ’ ಎಂದು ಉಲ್ಲೇಖಿಸಿರುವುದರಿಂದ ಪ್ರಮಾಣಪತ್ರವನ್ನು ನೀಡಲು ಸಾಧ್ಯವಿಲ್ಲ ಎಂದು ರಾನ್ನಿಯ ತಹಶೀಲ್ದಾರ್ ಅರ್ಜಿ ತಿರಸ್ಕರಿಸಿದರು.

ನಾವು ಯಾವುದೇ ಧರ್ಮವನ್ನು ಅನುಸರಿಸದ ಕಾರಣ ನಮಗೆ ಜಾತಿ ಪ್ರಮಾಣಪತ್ರವನ್ನು ಹೇಗೆ ನಿರಾಕರಿಸುತ್ತಾರೆ ಎಂದು ಪ್ರಶ್ನಿಸಿ ಕೇಶವದೇವು ಕುಟುಂಬ ಪ್ರತಿಭಟನೆ ನಡೆಸುತ್ತಿದೆ. ಜಾತಿ ಪ್ರಮಾಣಪತ್ರ ಸಲ್ಲಿಸದಿದ್ದರೇ  ಮೊಮ್ಮಕ್ಕಳ ಪದವಿ ಕೋರ್ಸ್ ಪ್ರವೇಶ ರದ್ದುಗೊಳಿಸುತ್ತಾರೆ ಎಂಬ ಆತಂಕವನ್ನು ಕುಟುಂಬ ಸದಸ್ಯರು ಹೊರಹಾಕಿದ್ದಾರೆ. ಅಧಿಕಾರಿಗಳು ಬೇಗನೆ ಮಧ್ಯಪ್ರವೇಶಿಸುತ್ತಾರೆ ಎಂಬ ಭರವಸೆಯಿಂದ ಇಡೀ ಕುಟುಂಬ ಪ್ರತಿಭಟನೆಯನ್ನು ಕೈಗೊಂಡಿದೆ.

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಸಮಾಜದಲ್ಲಿ ದಲಿತರು ಎದುರಿಸುತ್ತಿರುವ ತಾರತಮ್ಯವೂ ಹೋಗುವುದಿಲ್ಲ. ಹಾಗಾಗಿ ನಮ್ಮ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಏಕೆ ನಿರಾಕರಿಸಲಾಗಿದೆ..? ” ಎಂದು ಕೇಶವದೇವು ಪ್ರಶ್ನಿಸುತ್ತಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ತನ್ನ ಮೊಮ್ಮಕ್ಕಳಿಗೆ ನೀಡಲಾದ 10 ನೇ ತರಗತಿ ಪ್ರಮಾಣಪತ್ರದಲ್ಲಿ ಅವರ ಧರ್ಮ ಮತ್ತು ಜಾತಿಯನ್ನು “ಜಾತ್ಯತೀತ ಮತ್ತು ಪುಲಯ” ಎಂದು ಉಲ್ಲೇಖಿಸಲಾಗಿದೆ. “ಇದು ರಾಜ್ಯ ಸರ್ಕಾರ ನೀಡಿದ ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ. ಈಗ ಯಾಕೆ ನಮಗೆ ಜಾತಿ ಪ್ರಮಾಣಪತ್ರ ನಿರಾಕರಿಸಲಾಗುತ್ತಿದೆ? ” ಕೇಶವದೇವು ಕೇಳುತ್ತಾರೆ.

2015ರಲ್ಲಿ ಇದೇ ರೀತಿಯ ಸಮಸ್ಯೆಯಾದಾಗ ಈ ಕುಟುಂಬವು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿ ಅನುಕೂಲಕರ ಆದೇಶವನ್ನು ಪಡೆದುಕೊಂಡಿತು, ಅದು ಅವರಿಗೆ ಜಾತಿ ಪ್ರಮಾಣಪತ್ರವನ್ನು ನೀಡಬೇಕು ಎಂದು ಹೇಳಿ, ಧರ್ಮಕ್ಕೆ ಸೂಚಿಸಲಾದ ಅಂಕಣದಲ್ಲಿ ‘Nil’ ಎಂದು ಬರೆಯಲು ಸೂಚಿಸಿತ್ತು. “ನಾವು ಈ ಆದೇಶವನ್ನು ತಹಶೀಲ್ದಾರ್‌ಗೆ ತೋರಿಸಿದರೂ, ಅವರು ನಮಗೆ ಪ್ರಮಾಣಪತ್ರಗಳನ್ನು ನೀಡಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ರಾನ್ನಿ ತಹಶೀಲ್ದಾರ್ ನವೀನ್ ಬಾಬು ’ಅರ್ಜಿಯನ್ನು ಮಾಜಿ ತಹಶೀಲ್ದಾರ್ ಅವರು ತಿರಸ್ಕರಿಸಿದ್ದಾರೆ. ಆದರೆ ಇದನ್ನು ಕಾನೂನಿನ ಪ್ರಕಾರ ತಿರಸ್ಕರಿಸಲಾಗಿದೆ. ಸಂವಿಧಾನದ ಪ್ರಕಾರ, ಅವರು ಹಿಂದೂ ಧರ್ಮ, ಬೌದ್ಧಧರ್ಮ ಅಥವಾ ಸಿಖ್ ಧರ್ಮವನ್ನು ಅನುಸರಿಸಿದರೆ ಮಾತ್ರ ದಲಿತ ಅಥವಾ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು” ಎಂದು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಇಂತಹ ಪ್ರಕರಣಗಳಿಗೆ ಯಾಕೆ ಪದೇ ಪದೇ ಸಮಸ್ಯೆಗಳು ಉಂಟಾಗುತ್ತವೆ ಎಂಬುದಕ್ಕೆ ಕಾನೂನಿನ ಅಸ್ಪಷ್ಟತೆಯೇ ಕಾರಣವಾಗಿದೆ.

2010 ರಲ್ಲಿ, ಕೇರಳ ಸರ್ಕಾರವು ಜಾರಿಗೆ ತಂದಿರುವ ಆದೇಶ (396/10 / ಪಿಎ)ದ ಪ್ರಕಾರ ’ಸಾರ್ವಜನಿಕ ಸೇವಾ ಆಯೋಗದ ಅರ್ಜಿಗಳು, ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ, ಅನುದಾನಿತ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸುವಾಗ ಒಬ್ಬ ವ್ಯಕ್ತಿಯು ಧರ್ಮ ಮತ್ತು ಜಾತಿಯನ್ನು ಬರೆಯಲು ಆಯ್ಕೆಮಾಡಬಹುದು ಅಥವಾ ಆಯ್ಕೆ ಮಾಡದಿರಬಹುದು’. “ಒಬ್ಬ ವ್ಯಕ್ತಿ ಧರ್ಮ ಮತ್ತು ಜಾತಿಯನ್ನು ಉಲ್ಲೇಖಿಸದಿದ್ದರೆ, ಅವರು ಧರ್ಮ ಮತ್ತು ಜಾತಿಯ ಭತ್ಯೆಗಳಿಗೆ ಅರ್ಹರಲ್ಲ” ಎಂದು ಅದು ಹೇಳುತ್ತದೆ.

ಆದರೆ ಧರ್ಮವನ್ನು ಬಿಟ್ಟು ಬರಿ ಜಾತಿಯನ್ನು ಮಾತ್ರ ಉಲ್ಲೇಖಿಸಲು ನಿರ್ಧರಿಸಿದರೆ ಏನು ಮಾಡಬೇಕೆಂದು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿಲ್ಲ. ವಿಶೇಷವೆಂದರೆ, ಈ ಆದೇಶ ಹೊರಡಿಸಿದ ನಂತರವೂ ಕೇಶವದೇವು ಕುಟುಂಬವು ಕಳೆದ ವರ್ಷಗಳಲ್ಲಿ ಅನೇಕ ಸಂದರ್ಭಗಳಲ್ಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದೆ.

“ನಾನು ಪಥನಂತಿಟ್ಟ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ ಮತ್ತು ಅಧಿಕಾರಿಗಳು ಆದೇಶವನ್ನು ಅಧ್ಯಯನ ಮಾಡಿ, ನಮಗೆ ಜಾತಿ ಪ್ರಮಾಣಪತ್ರವನ್ನು ನೀಡಬಹುದೇ ಇಲ್ಲವೇ ಎಂಬುದನ್ನು ತಿಳಿಸುತ್ತೇವೆ ಎಂದು ನಮಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಹಕ್ಕುಗಳನ್ನು ಪಡೆಯುವವರೆಗೆ ನಾವು ಪ್ರತಿಭಟನೆಯನ್ನು ಮುಂದುವರಿಸಲಿದ್ದೇವೆ ”ಎಂದು ದಲಿತ ಕುಟುಂಬ ತಿಳಿಸಿದೆ.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...