Homeಮುಖಪುಟ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಎಂದು ಕುಟುಂಬ ಪ್ರಶ್ನಿಸುತ್ತದೆ.

- Advertisement -
- Advertisement -

ಜಾತಿ ಪ್ರಮಾಣಪತ್ರ ಅರ್ಜಿಯಲ್ಲಿ ಧರ್ಮದ ಸ್ಥಳದಲ್ಲಿ ಜಾತ್ಯಾತೀತ ಎಂದು ಬರೆದ ಕೇರಳದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಿಸಲಾಗಿದೆ. ಯಾವುದೇ ಧರ್ಮವನ್ನು ನಂಬದ ಅಥವಾ ಅನುಸರಿಸದ ಕಾರಣ ಇವರಿಗೆ ಜಾತಿ ಪ್ರಮಾಣಪತ್ರ ನಿರಾಕರಿಸಿದ ತಾಲೂಕು ಅಧಿಕಾರಿಯ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇರಳದ ಪಥನಂತಿಟ್ಟ ಜಿಲ್ಲೆಯ ರಾನ್ನಿಯಲ್ಲಿರುವ ತಾಲ್ಲೂಕು ಕಚೇರಿಯ ಹೊರಗೆ ಅಜ್ಜ-ಅಜ್ಜಿಯರು ಮತ್ತು ಮಕ್ಕಳು ಸೇರಿದಂತೆ ದಲಿತ ಕುಟುಂಬವೊಂದು ಸೆ.28ರಿಂದ ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸುತ್ತಿದೆ. ’ನಾನು ವಿದ್ಯಾಭ್ಯಾಸ ಮಾಡಲು ಬಯಸುತ್ತೇನೆ. ಧರ್ಮದ ಹೆಸರಿನಲ್ಲಿ ತಹಶೀಲ್ದಾರ್ ನಮಗೆ ಜಾತಿ ಪ್ರಮಾಣಪತ್ರವನ್ನು ನಿರಾಕರಿಸಿದ್ದಾರೆ. ನಮಗೆ ನ್ಯಾಯ ನೀಡಿ” ಎಂಬ ಫಲಕಗಳನ್ನು ಹಿಡಿದು ಧರಣಿ ನಡೆಸುತ್ತಿದ್ದಾರೆ.

ವಡಸ್ಸೆರಿಕಾ ಗ್ರಾಮದ ಪಿ.ಕೇಶವದೇವು ಪುಲಯ ಸಮುದಾಯಕ್ಕೆ ಸೇರಿದವರಾಗಿದ್ದು, ಕೇರಳದಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿದೆ. ಅವರ ಕುಟುಂಬದ ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಯಾವುದೇ ಧರ್ಮವನ್ನು ಆಚರಿಸುವುದಿಲ್ಲ ಮತ್ತು ತಮ್ಮನ್ನು ಜಾತ್ಯತೀತರು ಎಂದು ಕರೆದುಕೊಳ್ಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಇತ್ತೀಚೆಗೆ, ಕೇಶವದೇವು ತಮ್ಮ ಮೊಮ್ಮಗಳಿಗೆ ಶೈಕ್ಷಣಿಕ ಉದ್ದೇಶಗಳಿಗಾಗಿ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿದಾರರು ಧರ್ಮವನ್ನು ‘ಜಾತ್ಯತೀತ’ ಎಂದು ಉಲ್ಲೇಖಿಸಿರುವುದರಿಂದ ಪ್ರಮಾಣಪತ್ರವನ್ನು ನೀಡಲು ಸಾಧ್ಯವಿಲ್ಲ ಎಂದು ರಾನ್ನಿಯ ತಹಶೀಲ್ದಾರ್ ಅರ್ಜಿ ತಿರಸ್ಕರಿಸಿದರು.

ನಾವು ಯಾವುದೇ ಧರ್ಮವನ್ನು ಅನುಸರಿಸದ ಕಾರಣ ನಮಗೆ ಜಾತಿ ಪ್ರಮಾಣಪತ್ರವನ್ನು ಹೇಗೆ ನಿರಾಕರಿಸುತ್ತಾರೆ ಎಂದು ಪ್ರಶ್ನಿಸಿ ಕೇಶವದೇವು ಕುಟುಂಬ ಪ್ರತಿಭಟನೆ ನಡೆಸುತ್ತಿದೆ. ಜಾತಿ ಪ್ರಮಾಣಪತ್ರ ಸಲ್ಲಿಸದಿದ್ದರೇ  ಮೊಮ್ಮಕ್ಕಳ ಪದವಿ ಕೋರ್ಸ್ ಪ್ರವೇಶ ರದ್ದುಗೊಳಿಸುತ್ತಾರೆ ಎಂಬ ಆತಂಕವನ್ನು ಕುಟುಂಬ ಸದಸ್ಯರು ಹೊರಹಾಕಿದ್ದಾರೆ. ಅಧಿಕಾರಿಗಳು ಬೇಗನೆ ಮಧ್ಯಪ್ರವೇಶಿಸುತ್ತಾರೆ ಎಂಬ ಭರವಸೆಯಿಂದ ಇಡೀ ಕುಟುಂಬ ಪ್ರತಿಭಟನೆಯನ್ನು ಕೈಗೊಂಡಿದೆ.

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಸಮಾಜದಲ್ಲಿ ದಲಿತರು ಎದುರಿಸುತ್ತಿರುವ ತಾರತಮ್ಯವೂ ಹೋಗುವುದಿಲ್ಲ. ಹಾಗಾಗಿ ನಮ್ಮ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಏಕೆ ನಿರಾಕರಿಸಲಾಗಿದೆ..? ” ಎಂದು ಕೇಶವದೇವು ಪ್ರಶ್ನಿಸುತ್ತಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ತನ್ನ ಮೊಮ್ಮಕ್ಕಳಿಗೆ ನೀಡಲಾದ 10 ನೇ ತರಗತಿ ಪ್ರಮಾಣಪತ್ರದಲ್ಲಿ ಅವರ ಧರ್ಮ ಮತ್ತು ಜಾತಿಯನ್ನು “ಜಾತ್ಯತೀತ ಮತ್ತು ಪುಲಯ” ಎಂದು ಉಲ್ಲೇಖಿಸಲಾಗಿದೆ. “ಇದು ರಾಜ್ಯ ಸರ್ಕಾರ ನೀಡಿದ ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ. ಈಗ ಯಾಕೆ ನಮಗೆ ಜಾತಿ ಪ್ರಮಾಣಪತ್ರ ನಿರಾಕರಿಸಲಾಗುತ್ತಿದೆ? ” ಕೇಶವದೇವು ಕೇಳುತ್ತಾರೆ.

2015ರಲ್ಲಿ ಇದೇ ರೀತಿಯ ಸಮಸ್ಯೆಯಾದಾಗ ಈ ಕುಟುಂಬವು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿ ಅನುಕೂಲಕರ ಆದೇಶವನ್ನು ಪಡೆದುಕೊಂಡಿತು, ಅದು ಅವರಿಗೆ ಜಾತಿ ಪ್ರಮಾಣಪತ್ರವನ್ನು ನೀಡಬೇಕು ಎಂದು ಹೇಳಿ, ಧರ್ಮಕ್ಕೆ ಸೂಚಿಸಲಾದ ಅಂಕಣದಲ್ಲಿ ‘Nil’ ಎಂದು ಬರೆಯಲು ಸೂಚಿಸಿತ್ತು. “ನಾವು ಈ ಆದೇಶವನ್ನು ತಹಶೀಲ್ದಾರ್‌ಗೆ ತೋರಿಸಿದರೂ, ಅವರು ನಮಗೆ ಪ್ರಮಾಣಪತ್ರಗಳನ್ನು ನೀಡಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ರಾನ್ನಿ ತಹಶೀಲ್ದಾರ್ ನವೀನ್ ಬಾಬು ’ಅರ್ಜಿಯನ್ನು ಮಾಜಿ ತಹಶೀಲ್ದಾರ್ ಅವರು ತಿರಸ್ಕರಿಸಿದ್ದಾರೆ. ಆದರೆ ಇದನ್ನು ಕಾನೂನಿನ ಪ್ರಕಾರ ತಿರಸ್ಕರಿಸಲಾಗಿದೆ. ಸಂವಿಧಾನದ ಪ್ರಕಾರ, ಅವರು ಹಿಂದೂ ಧರ್ಮ, ಬೌದ್ಧಧರ್ಮ ಅಥವಾ ಸಿಖ್ ಧರ್ಮವನ್ನು ಅನುಸರಿಸಿದರೆ ಮಾತ್ರ ದಲಿತ ಅಥವಾ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು” ಎಂದು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಇಂತಹ ಪ್ರಕರಣಗಳಿಗೆ ಯಾಕೆ ಪದೇ ಪದೇ ಸಮಸ್ಯೆಗಳು ಉಂಟಾಗುತ್ತವೆ ಎಂಬುದಕ್ಕೆ ಕಾನೂನಿನ ಅಸ್ಪಷ್ಟತೆಯೇ ಕಾರಣವಾಗಿದೆ.

2010 ರಲ್ಲಿ, ಕೇರಳ ಸರ್ಕಾರವು ಜಾರಿಗೆ ತಂದಿರುವ ಆದೇಶ (396/10 / ಪಿಎ)ದ ಪ್ರಕಾರ ’ಸಾರ್ವಜನಿಕ ಸೇವಾ ಆಯೋಗದ ಅರ್ಜಿಗಳು, ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ, ಅನುದಾನಿತ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸುವಾಗ ಒಬ್ಬ ವ್ಯಕ್ತಿಯು ಧರ್ಮ ಮತ್ತು ಜಾತಿಯನ್ನು ಬರೆಯಲು ಆಯ್ಕೆಮಾಡಬಹುದು ಅಥವಾ ಆಯ್ಕೆ ಮಾಡದಿರಬಹುದು’. “ಒಬ್ಬ ವ್ಯಕ್ತಿ ಧರ್ಮ ಮತ್ತು ಜಾತಿಯನ್ನು ಉಲ್ಲೇಖಿಸದಿದ್ದರೆ, ಅವರು ಧರ್ಮ ಮತ್ತು ಜಾತಿಯ ಭತ್ಯೆಗಳಿಗೆ ಅರ್ಹರಲ್ಲ” ಎಂದು ಅದು ಹೇಳುತ್ತದೆ.

ಆದರೆ ಧರ್ಮವನ್ನು ಬಿಟ್ಟು ಬರಿ ಜಾತಿಯನ್ನು ಮಾತ್ರ ಉಲ್ಲೇಖಿಸಲು ನಿರ್ಧರಿಸಿದರೆ ಏನು ಮಾಡಬೇಕೆಂದು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿಲ್ಲ. ವಿಶೇಷವೆಂದರೆ, ಈ ಆದೇಶ ಹೊರಡಿಸಿದ ನಂತರವೂ ಕೇಶವದೇವು ಕುಟುಂಬವು ಕಳೆದ ವರ್ಷಗಳಲ್ಲಿ ಅನೇಕ ಸಂದರ್ಭಗಳಲ್ಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದೆ.

“ನಾನು ಪಥನಂತಿಟ್ಟ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ ಮತ್ತು ಅಧಿಕಾರಿಗಳು ಆದೇಶವನ್ನು ಅಧ್ಯಯನ ಮಾಡಿ, ನಮಗೆ ಜಾತಿ ಪ್ರಮಾಣಪತ್ರವನ್ನು ನೀಡಬಹುದೇ ಇಲ್ಲವೇ ಎಂಬುದನ್ನು ತಿಳಿಸುತ್ತೇವೆ ಎಂದು ನಮಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಹಕ್ಕುಗಳನ್ನು ಪಡೆಯುವವರೆಗೆ ನಾವು ಪ್ರತಿಭಟನೆಯನ್ನು ಮುಂದುವರಿಸಲಿದ್ದೇವೆ ”ಎಂದು ದಲಿತ ಕುಟುಂಬ ತಿಳಿಸಿದೆ.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...