Homeಮುಖಪುಟಮೋದಿಯವರ ಮೌನ - ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಪ್ರಧಾನಮಂತ್ರಿಗಳೇ, ಅತ್ಯಾಚಾರಕ್ಕೊಳಗಾದ ಯುವತಿಯ ರೋಧನೆ ನಿಮಗೆ ಕೇಳಲಿಲ್ಲವೇ ಅಥವಾ ಆಕೆಯ ಕುಟುಂಬದವರ ರೋಧನೆ ನಿಮಗೆ ತಲುಪಲಿಲ್ಲವೇ? ನೀವು ಇನ್ನೂ ಎಷ್ಟು ದಿನ ಮೌನವಾಗಿರುತ್ತೀರಿ? ನೀವು ಉತ್ತರವನ್ನು ನೀಡಲೇಬೇಕು. ಉತ್ತರ ಕೇಳಲು ಇಂದು ಸಂಜೆ 5 ಗಂಟೆಗೆ ನಾವು ಬರುತ್ತಿದ್ದೇವೆ.

- Advertisement -
- Advertisement -

ಹತ್ರಾಸ್ ದಲಿತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕುಟುಂಬಕ್ಕೆ ಶವ ಕೊಡದೇ ಇರುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಭೀಮ್ ಆರ್ಮಿ ಮುಖ್ಯಸ್ಥರಾದ ಚಂದ್ರಶೇಖರ್ ಆಜಾದ್ ಒತ್ತಾಯಿಸಿದ್ದಾರೆ. ಆಜಾದ್ ಇಂದು ಸಂಜೆ 5 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಆಜಾದ್, ಭಾವನಾತ್ಮಕವಾಗಿ ಮಾತನಾಡಿ, “ಪ್ರಧಾನಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ” ಎಂದು ಹೇಳಿದ್ದಾರೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಹತ್ರಾಸ್ ಯುವತಿ ಸಾವನ್ನಪ್ಪಿದ ನಂತರ, ಆಜಾದ್ ಮುಂದಾಳತ್ವದಲ್ಲಿ ಭೀಮ್ ಆರ್ಮಿ ಪ್ರತಿಭಟಿಸಿತ್ತು.

“ಮೋದಿಯವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸಿದ (ವಾರಣಾಸಿ) ಅದೇ ಉತ್ತರಪ್ರದೇಶದಲ್ಲಿ ಹತ್ರಾಸ್ ಮೂಲದ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಆಕೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಅವಳ ಮೂಳೆಗಳನ್ನು ಮುರಿದು, ಮೃತದೇಹವನ್ನು ಕಸದಂತೆ ಸುಡಲಾಗಿದೆ. ಉತ್ತರಪ್ರದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆದಾಗ ಪ್ರಧಾನಿ ಒಂದು ಮಾತನ್ನೂ ಆಡುವುದಿಲ್ಲವೇಕೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

“ಪ್ರಧಾನಮಂತ್ರಿಗಳೇ, ಅತ್ಯಾಚಾರಕ್ಕೊಳಗಾದ ಯುವತಿಯ ರೋಧನೆ ನಿಮಗೆ ಕೇಳಲಿಲ್ಲವೇ ಅಥವಾ ಆಕೆಯ ಕುಟುಂಬದವರ ರೋಧನೆ ನಿಮಗೆ ತಲುಪಲಿಲ್ಲವೇ? ನೀವು ಇನ್ನೂ ಎಷ್ಟು ದಿನ ಮೌನವಾಗಿರುತ್ತೀರಿ? ನೀವು ಉತ್ತರವನ್ನು ನೀಡಲೇಬೇಕು. ಉತ್ತರ ಕೇಳಲು ಇಂದು ಸಂಜೆ 5 ಗಂಟೆಗೆ ನಾವು ಬರುತ್ತಿದ್ದೇವೆ. ನಿಮ್ಮ ಮೌನ ನಮ್ಮ ಹೆಣ್ಣುಮಕ್ಕಳಿಗೆ ಅಪಾಯ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಆಜಾದ್ ಇಂದು ಸಂಜೆ 5 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಇಂಡಿಯಾ ಗೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೊಡ್ಡ ಗುಂಪು ಸೇರುವಿಕೆಯನ್ನು ನಿಷೇದಿಸಿರುವುದರಿಂದ ಪ್ರತಿಭಟನೆಯು ಜಂತರ್ ಮಂತರ್‌ಗೆ ಸ್ಥಳಾಂತರಗೊಂಡಿದೆ ಎಂದು ಹೇಳಿದರು.

ಭೀಮ್ ಆರ್ಮಿಯ ಪ್ರತಿಭಟನಾಕಾರರೊಂದಿಗೆ ನೂರಾರು ಕಾರ್ಯಕರ್ತರು ಮತ್ತು ನಾಗರೀಕರು ಸೇರಿಕೊಳ್ಳುವ ನಿರೀಕ್ಷೆಯಿದೆ. ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿತ್ತು. ಇದು ಇಂಡಿಯಾ ಗೇಟ್ ಬಳಿ ಗುಂಪು ಸೇರುವಿಕೆಯ ನಿಷೇದಕ್ಕೆ ಕಾರಣವಾಯಿತು.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಹತ್ರಾಸ್ ದುರಂತದ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದ ಪ್ರಧಾನ ಮಂತ್ರಿಯನ್ನು ಗುರಿಯಾಗಿಸಿಕೊಂಡು ಆಜಾದ್ ಎರಡು ಬಾರಿ ವಾಗ್ದಾಳಿ ನಡೆಸಿದ್ದರು. “ಪ್ರಧಾನಿ ಯಾಕೆ ಪ್ರತಿಕ್ರಿಯಿಸಲಿಲ್ಲ? ಇನ್ನು ಉತ್ತರಪ್ರದೇಶದಲ್ಲಂತೂ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಆದಿತ್ಯನಾಥ್ ಸರ್ಕಾರವನ್ನು ಟೀಕಿಸಿದರು.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು. ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಿರಲಿಲ್ಲ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...