Homeಕರ್ನಾಟಕಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

ಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

"ನಮ್ಮ ಧ್ವನಿ" ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ ದಿವಂಗತ ಮಹೇಂದ್ರ ಕುಮಾರ್‌ ಅವರು ಪ್ರಾರಂಭಿಸಿದ್ದ ’ನಮ್ಮ ಧ್ವನಿ’ ತಂಡವು ಗಾಂಧಿ ಜಯಂತಿಯನ್ನು ’ನಮ್ಮ ನಡೆ ಗಾಂಧಿ ಕಡೆ’ ಎಂಬ ಧ್ಯೇಯದೊಂದಿಗೆ ಎಂಬ ವಿನೂತನ ರೀತಿಯಲ್ಲಿ ಆಚರಿಸಿತು.

ಬೆಂಗಳೂರಿನ ಟೌನ್‌ಹಾಲ್‌‌ನಿಂದ ಕಾಲ್ನಡಿಗೆಯಲ್ಲಿ ಹೊರಟ ತಂಡವು ಮೆಜೆಸ್ಟಿಕ್ ಮೂಲಕ ಹಾದು ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆಯವರೆಗೂ ಮೆರವಣಿಗೆ ನಡೆಸಿತು. ಗಾಂಧಿಯ ಆಶಯಗಳ ಪೋಸ್ಟರ್‌ ಪ್ರದರ್ಶನ, ಗಾಂಧಿ ಜಯಂತಿಯ ಶುಭಾಶಯ ಪತ್ರ ಹಾಗೂ ಶಾಂತಿಯ ಸಂಕೇತವಾಗಿ ಬಿಳಿ ಗುಲಾಬಿಯನ್ನು ಹಂಚುತ್ತಾ ಗಮನ ಸೆಳೆಯಿತು.

ಇದನ್ನೂ ಓದಿ: ಮಹೇಂದ್ರ ಕುಮಾರ್ ಎಂಬ ‘ನಮ್ಮ ಧ್ವನಿ’ಯ ನೆನಪು: ಮುನೀರ್‌ ಕಾಟಿಪಳ್ಳ

ಜಾಥಾದಲ್ಲಿ ಚಿಂತಕ, ನಟ ಚೇತನ್, ಹಾಗೂ ಸಾಹಿತಿ ಯೋಗೇಶ್ ಮೇಷ್ಟ್ರ ಕೂಡಾ ಭಾಗವಹಿಸಿದ್ದರು. ಕನ್ನಡ ಸಂಘಟನೆಯ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಹಾಗೂ ಹಲವಾರು ಪಾದಚಾರಿಗಳು ಮೆರವಣಿಗೆಯಲ್ಲಿ ಹೆಜ್ಜೆಯಾಕಿದರು.

“ಜಗತ್ತಿನಲ್ಲಿ ಶಾಂತಿ ಬೇಕು ಎಂದರೆ ಅದನ್ನು ನಿಮ್ಮ ಮಕ್ಕಳಿಂದಲೇ ಆರಂಭಿಸಿ. ಸತ್ಯ, ಪ್ರೀತಿ, ಅಹಿಂಸೆ ಎಲ್ಲಿ ನೆಲೆಸಿರುತ್ತದೆಯೋ ಅಲ್ಲಿ ಶಾಂತಿ ತೃಪ್ತಿ ನೆಲೆಸುತ್ತದೆ. ಸಹನೆ ಕಳೆದುಕೊಳ್ಳುವುದೆಂದರೆ ಯುದ್ಧವನ್ನು ಸೋತಂತೆ. ಅಹಿಂಸೋ ಪರಮೋ ಧರ್ಮ” ಎಂಬ ಬರಹಗಳಿದ್ದ ಪ್ಲಕಾರ್ಡುಗಳನ್ನು ಹಿಡಿದು, ಗಾಂಧೀಜಿ ಅಮರರಾಗಲಿ, ಮಹೇಂದ್ರ ಕುಮಾರ್ ಅಮರರಾಗಲಿ ಎಂಬ ಘೋಷಣೆಗಳೊಂದಿಗೆ ಮೆರವಣಗೆ ನಡೆಯಿತು.

ಜಾಥಾದಲ್ಲಿ ಸಾಹಿತಿ ಯೋಗೇಶ್ ಮೇಷ್ಟ್ರು ಭಾಗವಹಿಸಿದರು.

ಯುವ ಮುಖಂಡ, ಚಿಂತಕ ರಾ ಚಿಂತನ್ ಮಾತನಾಡಿ, “ನಮ್ಮ ಧ್ವನಿ ಮಹೇಂದ್ರ ಕುಮಾರ್ ಮತ್ತು ನಮ್ಮೆಲ್ಲರ ಕನಸು. ಈ ದೇಶದ ಶಾಂತಿ ಸೌಹಾರ್ದತೆಯನ್ನು ಕದಡುವ ಕೆಲಸಗಳು ನಡೆಯುತ್ತಿರುವಾಗ ಅದನ್ನು ಶಾಶ್ವತವಾಗಿ ನಿಲ್ಲಿಸಲು ನಮ್ಮ ಧ್ವನಿ ಆರಂಭವಾಯಿತು. ಈ ನಡುವೆ ನಾವು ಮಹೇಂದ್ರ ಕುಮಾರ್‌ರವರನ್ನು ಕಳೆದುಕೊಂಡು ಅಕ್ಷರಶಃ ತಬ್ಬಲಿಗಳಾಗಿದ್ದೆವು. ನಮ್ಮಧ್ವನಿಯನ್ನು ಮುಂದುವರೆಸಲು ಗಾಂಧಿ ಜಯಂತಿಯ ದಿನ ಪ್ರಸಸ್ತವಾದ ದಿನ. ಹಾಗಾಗಿ ನಾವು ಮೊಟ್ಟ ಮೊದಲ ಬಾರಿಗೆ ಬೀದಿಗಿಳಿದು ಗಾಂಧಿ ತಾತನ ಶಾಂತಿಯ ಸಂದೇಶಗಳನ್ನು ಜನರಿಗೆ ತಲುಪಿಸಲು ಈ ಜಾಥವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ’ನಮ್ಮ ಧ್ವನಿ’ ಬಳಗದ ಸಂಸ್ಥಾಪಕ ಸದಸ್ಯರಾದ ರುದ್ರು ಪುನೀತ್‌ ಆರ್‌.ಸಿ, “ಮಹೇಂದ್ರ ಕುಮಾರ್‌ ಅವರ ಆಶಯಗಳನ್ನು ಮುಂದುವರೆಸಲು ’ನಮ್ಮ ಧ್ವನಿ’ ತಂಡ ಬದ್ದವಾಗಿದೆ. ಮಹೇಂದ್ರರವರ ಆಶಯದಂತೆ ಅನ್ಯಾಯದ ವಿರುದ್ದ ’ನಮ್ಮ ಧ್ವನಿ’ ತಂಡವು ಯಾವತ್ತಿಗೂ ನಿಲ್ಲುತ್ತದೆ. ಕೊರೊನಾ ಕಾರಣದಿಂದ ತಂಡದ ಚಟುವಟಿಕೆ ತುಸು ನಿಧಾನವಾಗಿತ್ತಾದರೂ, ಇದೀಗ ತಂಡದ ಚಟುವಟಿಕೆಯನ್ನು ಮತ್ತೇ ಉತ್ಸಾಹದಿಂದ ಪ್ರಾರಂಭಿಸಿದ್ದೇವೆ” ಎಂದರು.

ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ!

ಜಾಥಾದಲ್ಲಿ ಭಾಗವಹಿಸಿದ ನಟ ಚೇತನ್

“ನಮ್ಮ ಧ್ವನಿ” ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

ಯುವಕರನ್ನು ತಲುಪಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದ್ದ ಮಹೇಂದ್ರ ಕುಮಾರ್‌, ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪುತ್ತಿದ್ದರು. ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್‌ನಲ್ಲಿ ಚಿಂತನಾರ್ಹ ಮತ್ತು ಸಕಾಲಿಕ ಸರಣಿ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...