Homeಮುಖಪುಟಯುಪಿ ಪೊಲೀಸರ ವರ್ತನೆ 'ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ': ಸಂಜಯ್ ರಾವತ್

ಯುಪಿ ಪೊಲೀಸರ ವರ್ತನೆ ‘ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ’: ಸಂಜಯ್ ರಾವತ್

"ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ" ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

- Advertisement -
- Advertisement -

ಹತ್ರಾಸ್ ಪ್ರಕರಣದಲ್ಲಿನ ಕುಟುಂಬಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದ ರಾಹುಲ್ ಗಾಂಧಿಯವರೊಂದಿಗೆ ಅನುಚಿತವಾಗಿ ನಡೆದುಕೊಂಡ ಪೊಲೀಸರ ವರ್ತನೆಯನ್ನು, “ಪ್ರಜಾಪ್ರಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ” ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ ಬಣ್ಣಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, “ರಾಹುಲ್ ಗಾಂಧಿ ಪ್ರಮುಖ ರಾಜಕೀಯ ಪಕ್ಷದ ನಾಯರಾಗಿದ್ದು, ಅಂತಹವರನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷದೊಂದಿಗೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ರಾಹುಲ್ ಗಾಂಧಿಯ ಕೊರಳುಪಟ್ಟಿಯನ್ನು ಹಿಡಿದು ನೆಲಕ್ಕೆ ತಳ್ಳಿದ ರೀತಿ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

“ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ. ಈ ಘಟನೆಯನ್ನು ತನಿಖೆ ಮಾಡಬೇಕು. ಯಾರೂ ಪ್ರಶ್ನೆಗಳನ್ನು ಕೇಳಬಾರದು ಎಂದು, ಪ್ರತಿಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಇದೇ ಏನು? ವಾಡಿಕೆಯಂತೆ ನೀವು ಅವರನ್ನು ಅಪಹಾಸ್ಯ ಮಾಡಬಹುದು. ಆದರೆ ಪೊಲೀಸರು ಅವರೊಂದಿಗೆ ವರ್ತಿಸಿದ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ” ಎಂದೂ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ…

“ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

“ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಯುಪಿ ಪೊಲೀಸರು ಹೇಳಿದ್ದಾರೆ. ಹಾಗಾದರೆ ಯುವತಿ ಸಾಯುವ ಮುನ್ನ ಸುಳ್ಳು ಹೇಳಿದ್ದಾಳೆಯೇ?” ಎಂದು ಪ್ರಶ್ನಿಸಿದರು.

ಹತ್ರಾಸ್ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು ಎಂದು ಹೇಳಿದರು. ಇದರ ನಡುವೆ, ಶಿವಸೇನೆ ಕಾರ್ಯಕರ್ತರು ದಕ್ಷಿಣ ಮುಂಬೈನ ಚರ್ಚ್‌ಗೇಟ್ ರೈಲ್ವೆ ನಿಲ್ದಾಣದ ಹೊರಗೆ ಹತ್ರಾಸ್ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಹಲವು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...