Homeರಾಜಕೀಯಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

ಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

- Advertisement -
- Advertisement -

ಮಿಥ್ಯ: ಕರ್ನಾಟಕದ ಮುಖ್ಯಮಂತ್ರಿ ಪುಲ್ವಾಮ ವಿಷಯವಾಗಿ ಮಾತನಾಡುವಾಗ ಪಾಕಿಸ್ತಾನದ ಪರ ಮಾತಾಡಿಬಿಟ್ಟರಂತೆ! ಇದು ಟೈಮ್ಸ್ ನೌ ಎಂಬ ಚಾನೆಲ್ಲಿನ ಎಕ್ಸ್‌ಕ್ಲೂಸಿವ್ ವರದಿ. ಈ ಚಾನೆಲ್ ಪ್ರಕಾರ, ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ದೇಶ ಅಂತ ಘೋಷಿಸಬೇಕಲ್ಲ ಎಂಬ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಲು ನಿರಾಕರಿಸಿದರಂತೆ! ’ಮೊದಲು ನಮ್ಮ ದೇಶದಲ್ಲಿನ ಭಯೋತ್ಪಾದಕ ಸಮಸ್ಯೆಯನ್ನು ಸಾಲ್ವ್ ಮಾಡಿಕೊಳ್ಳೋಣ’ ಅಂದರಂತೆ.

ಕುಮಾರಸ್ವಾಮಿ ವಿರುದ್ಧ ಟೈಮ್ಸ್ ನೌ ಅಪಪ್ರಚಾರ

ಇದನ್ನೇ ಇಟ್ಟುಕೊಂಡು ಮೊನ್ನೆ ಟೈಮ್ಸ್ ನೌ ಅರ್ಧ ಘಂಟೆ ಬ್ರೇಕಿಂಗ್ ಹೊಡೆಯಿತು. ಅದರಲ್ಲಿ ಅದು ಪದೇಪದೇ ’ಕಾಂಗ್ರೆಸ್‌ನ ಮೈತ್ರಿ ಪಕ್ಷದ ಕುಮಾರಸ್ವಾಮಿ’ ಎಂದು ಒತ್ತಿ ಒತ್ತಿ ಹೇಳುತ್ತಲೇ ಇತ್ತು! ಇಷ್ಟಕ್ಕೇ ಕಾಯುತ್ತಿದ್ದ ಭಕ್ತರು ಈ ಕ್ಲಿಪ್ ಇಟ್ಟುಕೊಂಡು ಜಾಲತಾಣಗಳಲ್ಲಿ ತಮ್ಮ ನಿತ್ಯದ ’ದಂಧೆ’ ಶುರು ಹಚ್ಚಿಕೊಂಡಿದ್ದಾರೆ.
ಸತ್ಯ: ಕುಮಾರಸ್ವಾಮಿ ಹಾಗೆಲ್ಲ ಹೇಳುವುದು ಸಾಧ್ಯವೇ ಇಲ್ಲ ಎಂಬುದು ಕನ್ನಡಿಗರಿಗೆ ಗೊತ್ತು. ಕುಮಾರಸ್ವಾಮಿ ಕನ್ನಡದಲ್ಲಿ ಹೇಳಿದ್ದನ್ನು ಆ ಚಾನೆಲ್‌ನ ವರದಿಗಾರ/ರ್ತಿ ತಪ್ಪಾಗಿ ಅನುವಾದ ಮಾಡಿದರಾ? ಪ್ರಶ್ನೆ ಅಷ್ಟು ಸರಳವಾಗಿಲ್ಲ. ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿಗಳಿಗೆ ಹೀಗೆಲ್ಲ ತಿರುಚಿ ಒದರುವುದೇ ಒಂದು ದಂಧೆ. ಅವೆಲ್ಲ ಬಿಜೆಪಿಯ ಪೇಯ್ಡ್ ಚಾನೆಲ್‌ಗಳು.

ಕುಮಾರಸ್ವಾಮಿ ಹೇಳಿದ್ದಿಷ್ಟೇ:
’ಪುಲ್ವಾಮಾದ ಮಾಸ್ಟರ್‌ಮೈಂಡ್‌ನನ್ನು ಹೊಡೆದು ಹಾಕಿದ್ದು ಒಳ್ಳೆಯದೇ, ಆದರೆ ಆ ಸೈನಿಕರ ಸಾವಿನ ನೋವು ಹಾಗೇ ಇದೆ. ಇಂಥದ್ದು ಸಂಭವಿಸದಂತೆ ನಾವೆಲ್ಲ ಎಚ್ಚರ ವಹಿಸಬೇಕು. ಅದು ಸರ್ಕಾರದ ಜವಾಬ್ದಾರಿ…. ’

ಟೈಮ್ಸ್ ನೌ ವಿರುದ್ಧ ಕನ್ನಡಿಗರ ಆಕ್ರೋಶ

’ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಘೋಷಿಸಿವುದು ಒಂದು ಭಾಗವಷ್ಟೇ. ಅದಕ್ಕಿಂತ ಮುಖ್ಯವಾಗಿ ಈ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಾಶ ಮಾಡಬೇಕು. ಅದನ್ನು ಗನ್ ಬಳಸಿಯೋ ಅಥವಾ ಅವರನ್ನು ವಿಶ್ವಾಸಕ್ಕೆ ತಂದುಕೊಂಡೋ ಮಾಡಬೇಕು. ಅದು ಕೇಂದ್ರದ ಜವಾಬ್ದಾರಿ…’ ಎಲ್ಲೂ ಕುಮಾರಸ್ವಾಮಿ ಪಾಕ್ ಪರ ಮಾತನಾಡಿಯೇ ಇಲ್ಲ.

ಇದೆಲ್ಲವನ್ನೂ ಕುಮಾರಸ್ವಾಮಿ ಕನ್ನಡದಲ್ಲೇ ಹೇಳಿದ್ದಾರೆ. ಆದರೆ ’ಅನುವಾದ’ದ ದ ಸಮಸ್ಯೆಯಿಂದ ಟೈಮ್ಸ್ ನೌ ತಪ್ಪು ಮಾಡಿತೇ? ಇಲ್ಲ, ಖಂಡಿತ ಇಲ್ಲ. ಅದು ಬಿಜೆಪಿ ಪರ ಅಲೆ ಸೃಷ್ಟಿಸಲು ಎಂತಹ ಹೀನ ಕೆಲಸಕ್ಕೂ ರೆಡಿ. ಅದು ಬೇಕೆಂತಲೇ ಇದನ್ನು ಮಾಡಿದೆ-ಅದರ ಪೇಮೇಂಟ್ ಹೆಚ್ಚಿಸಿಕೊಳ್ಳಲು! ಹಲವಾರು ಕನ್ನಡಿಗರು, ’ನಿಮಗೆ ಅನುವಾದವೇ ಗೊತ್ತಿಲ್ಲವಾ?’ ಎಂದು ಉಗಿದ ಮೇಲಷ್ಟೇ ಟೈಮ್ಸ್ ನೌ ಎಲ್ಲ ಮುಚ್ಚಿಕೊಂಡು ಆ ಸುದ್ದಿಯನ್ನು ಡ್ರಾಪ್ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...