Homeರಾಜಕೀಯಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

ಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

- Advertisement -
- Advertisement -

ಮಿಥ್ಯ: ಕರ್ನಾಟಕದ ಮುಖ್ಯಮಂತ್ರಿ ಪುಲ್ವಾಮ ವಿಷಯವಾಗಿ ಮಾತನಾಡುವಾಗ ಪಾಕಿಸ್ತಾನದ ಪರ ಮಾತಾಡಿಬಿಟ್ಟರಂತೆ! ಇದು ಟೈಮ್ಸ್ ನೌ ಎಂಬ ಚಾನೆಲ್ಲಿನ ಎಕ್ಸ್‌ಕ್ಲೂಸಿವ್ ವರದಿ. ಈ ಚಾನೆಲ್ ಪ್ರಕಾರ, ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ದೇಶ ಅಂತ ಘೋಷಿಸಬೇಕಲ್ಲ ಎಂಬ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಲು ನಿರಾಕರಿಸಿದರಂತೆ! ’ಮೊದಲು ನಮ್ಮ ದೇಶದಲ್ಲಿನ ಭಯೋತ್ಪಾದಕ ಸಮಸ್ಯೆಯನ್ನು ಸಾಲ್ವ್ ಮಾಡಿಕೊಳ್ಳೋಣ’ ಅಂದರಂತೆ.

ಕುಮಾರಸ್ವಾಮಿ ವಿರುದ್ಧ ಟೈಮ್ಸ್ ನೌ ಅಪಪ್ರಚಾರ

ಇದನ್ನೇ ಇಟ್ಟುಕೊಂಡು ಮೊನ್ನೆ ಟೈಮ್ಸ್ ನೌ ಅರ್ಧ ಘಂಟೆ ಬ್ರೇಕಿಂಗ್ ಹೊಡೆಯಿತು. ಅದರಲ್ಲಿ ಅದು ಪದೇಪದೇ ’ಕಾಂಗ್ರೆಸ್‌ನ ಮೈತ್ರಿ ಪಕ್ಷದ ಕುಮಾರಸ್ವಾಮಿ’ ಎಂದು ಒತ್ತಿ ಒತ್ತಿ ಹೇಳುತ್ತಲೇ ಇತ್ತು! ಇಷ್ಟಕ್ಕೇ ಕಾಯುತ್ತಿದ್ದ ಭಕ್ತರು ಈ ಕ್ಲಿಪ್ ಇಟ್ಟುಕೊಂಡು ಜಾಲತಾಣಗಳಲ್ಲಿ ತಮ್ಮ ನಿತ್ಯದ ’ದಂಧೆ’ ಶುರು ಹಚ್ಚಿಕೊಂಡಿದ್ದಾರೆ.
ಸತ್ಯ: ಕುಮಾರಸ್ವಾಮಿ ಹಾಗೆಲ್ಲ ಹೇಳುವುದು ಸಾಧ್ಯವೇ ಇಲ್ಲ ಎಂಬುದು ಕನ್ನಡಿಗರಿಗೆ ಗೊತ್ತು. ಕುಮಾರಸ್ವಾಮಿ ಕನ್ನಡದಲ್ಲಿ ಹೇಳಿದ್ದನ್ನು ಆ ಚಾನೆಲ್‌ನ ವರದಿಗಾರ/ರ್ತಿ ತಪ್ಪಾಗಿ ಅನುವಾದ ಮಾಡಿದರಾ? ಪ್ರಶ್ನೆ ಅಷ್ಟು ಸರಳವಾಗಿಲ್ಲ. ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿಗಳಿಗೆ ಹೀಗೆಲ್ಲ ತಿರುಚಿ ಒದರುವುದೇ ಒಂದು ದಂಧೆ. ಅವೆಲ್ಲ ಬಿಜೆಪಿಯ ಪೇಯ್ಡ್ ಚಾನೆಲ್‌ಗಳು.

ಕುಮಾರಸ್ವಾಮಿ ಹೇಳಿದ್ದಿಷ್ಟೇ:
’ಪುಲ್ವಾಮಾದ ಮಾಸ್ಟರ್‌ಮೈಂಡ್‌ನನ್ನು ಹೊಡೆದು ಹಾಕಿದ್ದು ಒಳ್ಳೆಯದೇ, ಆದರೆ ಆ ಸೈನಿಕರ ಸಾವಿನ ನೋವು ಹಾಗೇ ಇದೆ. ಇಂಥದ್ದು ಸಂಭವಿಸದಂತೆ ನಾವೆಲ್ಲ ಎಚ್ಚರ ವಹಿಸಬೇಕು. ಅದು ಸರ್ಕಾರದ ಜವಾಬ್ದಾರಿ…. ’

ಟೈಮ್ಸ್ ನೌ ವಿರುದ್ಧ ಕನ್ನಡಿಗರ ಆಕ್ರೋಶ

’ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಘೋಷಿಸಿವುದು ಒಂದು ಭಾಗವಷ್ಟೇ. ಅದಕ್ಕಿಂತ ಮುಖ್ಯವಾಗಿ ಈ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಾಶ ಮಾಡಬೇಕು. ಅದನ್ನು ಗನ್ ಬಳಸಿಯೋ ಅಥವಾ ಅವರನ್ನು ವಿಶ್ವಾಸಕ್ಕೆ ತಂದುಕೊಂಡೋ ಮಾಡಬೇಕು. ಅದು ಕೇಂದ್ರದ ಜವಾಬ್ದಾರಿ…’ ಎಲ್ಲೂ ಕುಮಾರಸ್ವಾಮಿ ಪಾಕ್ ಪರ ಮಾತನಾಡಿಯೇ ಇಲ್ಲ.

ಇದೆಲ್ಲವನ್ನೂ ಕುಮಾರಸ್ವಾಮಿ ಕನ್ನಡದಲ್ಲೇ ಹೇಳಿದ್ದಾರೆ. ಆದರೆ ’ಅನುವಾದ’ದ ದ ಸಮಸ್ಯೆಯಿಂದ ಟೈಮ್ಸ್ ನೌ ತಪ್ಪು ಮಾಡಿತೇ? ಇಲ್ಲ, ಖಂಡಿತ ಇಲ್ಲ. ಅದು ಬಿಜೆಪಿ ಪರ ಅಲೆ ಸೃಷ್ಟಿಸಲು ಎಂತಹ ಹೀನ ಕೆಲಸಕ್ಕೂ ರೆಡಿ. ಅದು ಬೇಕೆಂತಲೇ ಇದನ್ನು ಮಾಡಿದೆ-ಅದರ ಪೇಮೇಂಟ್ ಹೆಚ್ಚಿಸಿಕೊಳ್ಳಲು! ಹಲವಾರು ಕನ್ನಡಿಗರು, ’ನಿಮಗೆ ಅನುವಾದವೇ ಗೊತ್ತಿಲ್ಲವಾ?’ ಎಂದು ಉಗಿದ ಮೇಲಷ್ಟೇ ಟೈಮ್ಸ್ ನೌ ಎಲ್ಲ ಮುಚ್ಚಿಕೊಂಡು ಆ ಸುದ್ದಿಯನ್ನು ಡ್ರಾಪ್ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...