Homeಕರ್ನಾಟಕಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ದೂರು ದಾಖಲಾಗಿ 120 ಗ೦ಟೆಗಳಾದರೂ FIR‌ ದಾಖಲಾಗದೆ ಇರುವುದಕ್ಕೆ, ದೂರುದಾರ ಜನಾಧಿಕಾರ ಸ೦ಘರ್ಷ ಪರಿಷತ್‌ ಐಪಿಸಿ ಕಲ೦ 217 ರ ಪ್ರಕಾರ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಹಾಗೂ ಎಂ. ಎನ್. ಅನುಚೇತ್ ವಿರುದ್ಧವೇ ದೂರು ದಾಖಲಿಸಿದೆ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪರ ಮಗ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ದಾಖಲಿಸಲಾಗಿದ್ದ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ದೂರು ದಾಖಲಾಗಿದೆ.

ಮುಖ್ಯಮಂತ್ರಿ ಕುಟುಂಬದ ಸದಸ್ಯರು ಸುಲಿಗೆ ಮತ್ತು ವಸೂಲಿ ದಂಧೆ ಮಾಡಿದ್ದಾರೆ ಎಂದು ಜನಾಧಿಕಾರ ಸ೦ಘರ್ಷ ಪರಿಷತ್‌ನ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25ರಂದು ದೂರು ದಾಖಲಿಸಿದ್ದರು. ಆದರೆ ದೂರು ದಾಖಲಾಗಿ 120 ಗ೦ಟೆಗಳಾದರೂ FIR‌ ದಾಖಲಾಗಿಲ್ಲ. ಹೀಗಾಗಿ ದೂರುದಾರರು‌ ಐಪಿಸಿ ಕಲ೦ 217 ರ ಪ್ರಕಾರ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಹಾಗೂ ಡಿಸಿಪಿ ಎಂ. ಎನ್. ಅನುಚೇತ್ ವಿರುದ್ಧವೇ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಐಪಿಸಿ ಕಲ೦ 217 ರ ಪ್ರಕಾರ, ಯಾವುದೇ ಸರ್ಕಾರಿ ನೌಕರರು ಕಾನೂನಿನ ನಿರ್ದೇಶನ ಉಲ್ಲಂಘಿಸಿ ಯಾರನ್ನಾದರೂ ಶಿಕ್ಷೆಯಿಂದ ರಕ್ಷಿಸಲು ತಡೆದರೆ ಸ೦ಜ್ಞೆಯ ಅಪರಾಧ (Cognizable Offence) ಆಗಿದೆ.

ಸಂಜ್ಞೆಯ ಅಪರಾಧದಲ್ಲಿ ಪೊಲೀಸ್ ಅಧಿಕಾರಿಯು ನ್ಯಾಯಾಲಯದ ಅನುಮತಿಯಿಲ್ಲದೆ FIR ದಾಖಲಿಸಬಹುದಾಗಿದೆ. ಕೊಲೆ, ಕಳ್ಳತನ, ದರೋಡೆ, ಸುಲಿಗೆ ಹಾಗೂ ಅತ್ಯಾಚಾರದಂತ ಅಪರಾಧಗಳು ಸಂಜ್ಞೆಯ ಅಪರಾಧದ ಅಡಿಯಲ್ಲಿ ಬರುತ್ತದೆ.

ಅಷ್ಟೇ ಅಲ್ಲದೆ ದೂರಿನಲ್ಲಿರುವ ಮಾಹಿತಿಯು ಸ೦ಜ್ಞೆಯ ಅಪರಾಧವಾಗಿದೆ ಎಂದು ತಿಳಿದು ಬಂದರೆ ಸಿಆರ್‌ಪಿಸಿ ಸೆಕ್ಷನ್‌ 154 ರಡಿಯಲ್ಲಿ ಠಾಣಾಧಿಕಾರಿಗಳು ಕಡ್ಡಾಯವಾಗಿ FIR‌ ದಾಖಲಿಸಬೇಕಾಗುತ್ತದೆ. ಇ೦ತಹ ಸ೦ದರ್ಭದಲ್ಲಿ ಪೂರ್ವ ವಿಚಾರಣೆಯನ್ನು ಮಾಡಲು ಪೊಲೀಸರಿಗೆ ಅವಕಾಶವಿಲ್ಲ. ಹಾಗಾಗಿ ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ಸಿಆರ್‌ಪಿಸಿ ಸೆಕ್ಷನ್‌‌ 154 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಗಳಿವೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಜನಾಧಿಕಾರ ಸಂಘರ್ಷ ಪರಿಷತ್ ಸೆಪ್ಟಂಬರ್ 25ರಂದು, ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್‌ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಹಲವಾರು ಸಾಕ್ಷಿಗಳ ಸಮೇತ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಿತ್ತು.

ವಿಡಿಯೋ ನೋಡಿ: ಸಿಎಂ ಮಗನ ಭ್ರಷ್ಟಾಚಾರ ಬಯಲಿಗೆಳೆದಿದ್ದಕ್ಕೆ ಪವರ್‌ ಟಿವಿಯ ಪ್ರಸಾರ ತಡೆ: ಪವರ್‌ ಟಿವಿ ಇದಕ್ಕೆ ಬಗ್ಗುವುದಿಲ್ಲ. ನಾವು ಕಾನೂನಾತ್ಮವಾಗಿ ಹೋರಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...