Homeಮುಖಪುಟಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ/ ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

- Advertisement -
- Advertisement -

ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ ಕೆಳಗಿನಂತಿದೆ.

ನಾನು ಹತ್ರಾಸ್ ಅತ್ಯಾಚಾರ ಪ್ರಕರಣದತ್ತ ತಮ್ಮ ಗಮನವನ್ನು ಸೆಳೆಯಲು ಇಚ್ಛಿಸುತ್ತೇನೆ- ನನ್ನಂತೆಯೇ ನೀವೂ ನಿಮ್ಮ ಮನೆಗಳ ಆರಾಮದಲ್ಲಿ ಇಂಟರ್ನೆಟ್ ಸಂದೇಶಗಳನ್ನು ನೋಡುತ್ತಿರುವಾಗ, ಒಂದು ಕುಟುಂಬವನ್ನು ಅವರ ಮನೆಯಲ್ಲೇ ಕೂಡಿಹಾಕಲಾಗಿದೆ ಮತ್ತು ಉತ್ತರ ಪ್ರದೇಶ ಸರಕಾರವು ಅವರನ್ನು ತೀವ್ರವಾದ ನೋವಿಗೆ ಒಳಪಡಿಸುತ್ತಿದೆ.

ಅವರು ಮಾಡಿರುವ ಅಪರಾಧ? ಅವರ ಮನೆಮಗಳನ್ನು ಅತ್ಯಾಚಾರ ಮಾಡಲಾಗಿದೆ. ಆ ದಲಿತ ಬಾಲಕಿಯನ್ನು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿಯ ನಾಲ್ವರು ಪುರುಷರು ಬರ್ಬರವಾಗಿ ಅತ್ಯಾಚಾರ ಮಾಡಿದ್ದಾರೆ. ಆ ಮಹಿಳೆ ಕೆಲವು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆಕೆಯ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆ ಕುಟುಂಬಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೊಲೀಸರು ಕುಟುಂಬದ ಅನುಮತಿ ಪಡೆಯದೆಯೇ, ಅಥವಾ ಅವರಿಗೆ ಗೊತ್ತಿಲ್ಲದೇ ರಾತ್ರಿ 2.30ರ ಹೊತ್ತಿಗೆ ಶವವನ್ನು ಸುಟ್ಟುಹಾಕಿದ್ದಾರೆ.

ಇಷ್ಟು ಕ್ರೌರ್ಯ ಸಾಕಾಗಲಿಲ್ಲವೋ ಎಂಬಂತೆ ಆಕೆಯ ಕುಟುಂಬವನ್ನು ಮನೆಯೊಳಗೆ ಕೂಡಿಹಾಕಿ, ಅವರ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಳ್ಳಲಾಗಿದೆ. ಮಾಧ್ಯಮದವರಿಗಾಗಲೀ, ಪ್ರತಿಪಕ್ಷ ನಾಯಕರಿಗಾಗಲೀ ಅವರನ್ನು ಭೇಟಿಮಾಡಲು ಬಿಡಲಾಗುತ್ತಿಲ್ಲ. ಪೊಲೀಸರು ಅವರ ಮನೆಯ ಪ್ರವೇಶ, ಊರಿನ ಪ್ರವೇಶ ಮತ್ತು ಹೆದ್ದಾರಿಯಲ್ಲಿ ತಡೆಬೇಲಿ ಹಾಕಿದ್ದಾರೆ.

I want to draw your attention to the #HathrasRape incident- While you are scrolling your feed in the comfort of your…

Posted by Divya Spandana/Ramya on Saturday, October 3, 2020

ಈ ಕುಟುಂಬವನ್ನು ಭೇಟಿ ಮಾಡಲು ಯತ್ನಿಸಿದ ನಾಯಕರನ್ನು ಬಂಧಿಸಲಾಗಿದೆ, ಥಳಿಸಲಾಗಿದೆ ಮತ್ತು ಅವರ ವಿರುದ್ಧ ಕೇಸು ಜಡಿಯಲಾಗಿದೆ. ಆ ಕುಟುಂಬ ಮಾಡಿರುವ ತಪ್ಪಾದರೂ ಏನು? ತಮ್ಮ ಮನೆಮಗಳನ್ನು ಕಳೆದುಕೊಂಡಿರುವುದೇ ಸಾಕಷ್ಟು ನೋವಿನ ಸಂಗತಿ ಅಲ್ಲವೋ ಎಂಬಂತೆ ಏಕೆ ಅವರಿಗೆ ಕಿರುಕುಳ ನೀಡಿ ಇನ್ನಷ್ಟು ಪೀಡಿಸಲಾಗುತ್ತಿದೆ? ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ.

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ / ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

ಇದೆಲ್ಲಕ್ಕಿಂತ ಮೇಲಾಗಿ, ಪೊಲೀಸರು ಇವೆಲ್ಲವನ್ನೂ ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ; ಅತ್ಯಾಚಾರವನ್ನೇ ನಿರಾಕರಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆ ಸ್ವತಃ ತನ್ನನ್ನು ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರೇ ಶವವನ್ನು ಸುಟ್ಟುಹಾಕುತ್ತಿರುವ ವಿಡಿಯೋಗಳಿವೆ. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಕೆಯ ಕುಟುಂಬದವರು ಅಂಗಲಾಚುತ್ತಿರುವ ವಿಡಿಯೋಗಳಿವೆ. ಈ ಕುಟುಂಬದವರನ್ನು ಅವರ ಮನೆಯಲ್ಲಿಯೇ ಕೂಡಿಹಾಕಿರುವ ವಿಡಿಯೋಗಳಿವೆ.

ಅವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಇದೊಂದು ಪ್ರಜಾಪ್ರಭುತ್ವ ಎಂಬಂತೆ ನಿಮಗೆ ಅನಿಸುತ್ತಿದೆಯೆ? ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ನಮ್ಮ ಪೂರ್ವಿಕ ತಂದೆ ತಾಯಿಯರು ಕಲ್ಪಿಸಿಕೊಂಡ ದೇಶ ಇದು ಅಲ್ಲವೇ ಅಲ್ಲ. ನಮ್ಮ ದೇಶದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಕುಟುಂಬಕ್ಕೆ ನಿಮ್ಮ ಅಗತ್ಯವಿದೆ; ನೀವು ಧ್ವನಿಯೆತ್ತಿ ಮಾತನಾಡಬೇಕಾದ ಅಗತ್ಯವಿದೆ. ಈ ಕುರಿತು ಧ್ವನಿಯೆತ್ತದಿರುವುದರ ಮೂಲಕ ನೀವು ದೇಶಕ್ಕೆ ಬಹುದೊಡ್ಡ ಅಪಕಾರ ಮಾಡಿದಂತಾದೀತು.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...