Homeಮುಖಪುಟಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ/ ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

- Advertisement -
- Advertisement -

ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ ಕೆಳಗಿನಂತಿದೆ.

ನಾನು ಹತ್ರಾಸ್ ಅತ್ಯಾಚಾರ ಪ್ರಕರಣದತ್ತ ತಮ್ಮ ಗಮನವನ್ನು ಸೆಳೆಯಲು ಇಚ್ಛಿಸುತ್ತೇನೆ- ನನ್ನಂತೆಯೇ ನೀವೂ ನಿಮ್ಮ ಮನೆಗಳ ಆರಾಮದಲ್ಲಿ ಇಂಟರ್ನೆಟ್ ಸಂದೇಶಗಳನ್ನು ನೋಡುತ್ತಿರುವಾಗ, ಒಂದು ಕುಟುಂಬವನ್ನು ಅವರ ಮನೆಯಲ್ಲೇ ಕೂಡಿಹಾಕಲಾಗಿದೆ ಮತ್ತು ಉತ್ತರ ಪ್ರದೇಶ ಸರಕಾರವು ಅವರನ್ನು ತೀವ್ರವಾದ ನೋವಿಗೆ ಒಳಪಡಿಸುತ್ತಿದೆ.

ಅವರು ಮಾಡಿರುವ ಅಪರಾಧ? ಅವರ ಮನೆಮಗಳನ್ನು ಅತ್ಯಾಚಾರ ಮಾಡಲಾಗಿದೆ. ಆ ದಲಿತ ಬಾಲಕಿಯನ್ನು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿಯ ನಾಲ್ವರು ಪುರುಷರು ಬರ್ಬರವಾಗಿ ಅತ್ಯಾಚಾರ ಮಾಡಿದ್ದಾರೆ. ಆ ಮಹಿಳೆ ಕೆಲವು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆಕೆಯ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆ ಕುಟುಂಬಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೊಲೀಸರು ಕುಟುಂಬದ ಅನುಮತಿ ಪಡೆಯದೆಯೇ, ಅಥವಾ ಅವರಿಗೆ ಗೊತ್ತಿಲ್ಲದೇ ರಾತ್ರಿ 2.30ರ ಹೊತ್ತಿಗೆ ಶವವನ್ನು ಸುಟ್ಟುಹಾಕಿದ್ದಾರೆ.

ಇಷ್ಟು ಕ್ರೌರ್ಯ ಸಾಕಾಗಲಿಲ್ಲವೋ ಎಂಬಂತೆ ಆಕೆಯ ಕುಟುಂಬವನ್ನು ಮನೆಯೊಳಗೆ ಕೂಡಿಹಾಕಿ, ಅವರ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಳ್ಳಲಾಗಿದೆ. ಮಾಧ್ಯಮದವರಿಗಾಗಲೀ, ಪ್ರತಿಪಕ್ಷ ನಾಯಕರಿಗಾಗಲೀ ಅವರನ್ನು ಭೇಟಿಮಾಡಲು ಬಿಡಲಾಗುತ್ತಿಲ್ಲ. ಪೊಲೀಸರು ಅವರ ಮನೆಯ ಪ್ರವೇಶ, ಊರಿನ ಪ್ರವೇಶ ಮತ್ತು ಹೆದ್ದಾರಿಯಲ್ಲಿ ತಡೆಬೇಲಿ ಹಾಕಿದ್ದಾರೆ.

I want to draw your attention to the #HathrasRape incident- While you are scrolling your feed in the comfort of your…

Posted by Divya Spandana/Ramya on Saturday, October 3, 2020

ಈ ಕುಟುಂಬವನ್ನು ಭೇಟಿ ಮಾಡಲು ಯತ್ನಿಸಿದ ನಾಯಕರನ್ನು ಬಂಧಿಸಲಾಗಿದೆ, ಥಳಿಸಲಾಗಿದೆ ಮತ್ತು ಅವರ ವಿರುದ್ಧ ಕೇಸು ಜಡಿಯಲಾಗಿದೆ. ಆ ಕುಟುಂಬ ಮಾಡಿರುವ ತಪ್ಪಾದರೂ ಏನು? ತಮ್ಮ ಮನೆಮಗಳನ್ನು ಕಳೆದುಕೊಂಡಿರುವುದೇ ಸಾಕಷ್ಟು ನೋವಿನ ಸಂಗತಿ ಅಲ್ಲವೋ ಎಂಬಂತೆ ಏಕೆ ಅವರಿಗೆ ಕಿರುಕುಳ ನೀಡಿ ಇನ್ನಷ್ಟು ಪೀಡಿಸಲಾಗುತ್ತಿದೆ? ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ.

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ / ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

ಇದೆಲ್ಲಕ್ಕಿಂತ ಮೇಲಾಗಿ, ಪೊಲೀಸರು ಇವೆಲ್ಲವನ್ನೂ ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ; ಅತ್ಯಾಚಾರವನ್ನೇ ನಿರಾಕರಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆ ಸ್ವತಃ ತನ್ನನ್ನು ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರೇ ಶವವನ್ನು ಸುಟ್ಟುಹಾಕುತ್ತಿರುವ ವಿಡಿಯೋಗಳಿವೆ. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಕೆಯ ಕುಟುಂಬದವರು ಅಂಗಲಾಚುತ್ತಿರುವ ವಿಡಿಯೋಗಳಿವೆ. ಈ ಕುಟುಂಬದವರನ್ನು ಅವರ ಮನೆಯಲ್ಲಿಯೇ ಕೂಡಿಹಾಕಿರುವ ವಿಡಿಯೋಗಳಿವೆ.

ಅವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಇದೊಂದು ಪ್ರಜಾಪ್ರಭುತ್ವ ಎಂಬಂತೆ ನಿಮಗೆ ಅನಿಸುತ್ತಿದೆಯೆ? ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ನಮ್ಮ ಪೂರ್ವಿಕ ತಂದೆ ತಾಯಿಯರು ಕಲ್ಪಿಸಿಕೊಂಡ ದೇಶ ಇದು ಅಲ್ಲವೇ ಅಲ್ಲ. ನಮ್ಮ ದೇಶದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಕುಟುಂಬಕ್ಕೆ ನಿಮ್ಮ ಅಗತ್ಯವಿದೆ; ನೀವು ಧ್ವನಿಯೆತ್ತಿ ಮಾತನಾಡಬೇಕಾದ ಅಗತ್ಯವಿದೆ. ಈ ಕುರಿತು ಧ್ವನಿಯೆತ್ತದಿರುವುದರ ಮೂಲಕ ನೀವು ದೇಶಕ್ಕೆ ಬಹುದೊಡ್ಡ ಅಪಕಾರ ಮಾಡಿದಂತಾದೀತು.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...