Homeಕರ್ನಾಟಕರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: 'ನಮ್ದು ಬ್ರ್ಯಾಂಡ್' ಆರಂಭ

ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

- Advertisement -
- Advertisement -

ಚಾಮರಾಜನಗರದಲ್ಲಿ ವಿಷಮುಕ್ತ ಆಹಾರೋತ್ಪನ್ನಗಳ ನೇರ ಮಾರಾಟದ “ನಮ್ದು ಬ್ರ್ಯಾಂಡ್” ಮಳಿಗೆ ನಿನ್ನೆ (ಗಾಂಧಿ ಜಯಂತಿ) ಉದ್ಘಾಟನೆಯಾಗಿದ್ದು, ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

ಇಂದು ಸರ್ಕಾರಗಳು ರೈತಪರವಾಗಿಲ್ಲ. ಬೀಜ ಗೊಬ್ಬರ ಸೇರಿ ಎಲ್ಲದರ ಬೆಲೆ ಏರಿಸುವುದರೊಂದಗೆ ಕನಿಷ್ಟ ಬೆಂಬಲ ಬೆಲೆ ನೀಡಲು ವಿಫಲವಾಗುತ್ತಿವೆ. ಇಂಥಹ ಕಷ್ಟದ ಪರಿಸ್ಥಿತಿಯಲ್ಲಿ ರೈತರು ಒಳ್ಳೆಯ ಬೆಳೆ ಬೆಳೆದರೂ ಅವರಿಗೆ ಲಾಭವಾಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಇನ್ನು ಹೆಚ್ಚಿನ ಇಳುವರಿಯ ಮೋಹಕ್ಕೆ ಬಿದ್ದು ಕೃಷಿಯಲ್ಲಿ ರಾಸಯನಿಕಗಳನ್ನು ಬಳಸುವವರೆ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಅಮೃತಭೂಮಿ ಸುಸ್ಥಿರ ಅಭಿವೃದ್ದಿ ಕೇಂದ್ರ ಮತ್ತು ಕ.ರಾ.ರೈ.ಸಂಘ, ಹಸಿರು ಸೇನೆ ಮಾಡುತ್ತಿರುವ ವಿನೂತನ ಪ್ರಯೋಗವೇ ‘ನಮ್ದು’ ಬ್ರ್ಯಾಂಡ್ ಆಗಿದೆ.

ಮಧ್ಯವರ್ತಿಗಳ ಹಾವಳಿಯಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಅತಿ ಮುಖ್ಯವಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡ ರೈತರಿಗಿದ್ದ ಅಲ್ಪಸ್ವಲ್ಪ ಮಾರುಕಟ್ಟೆಯ ಭದ್ರತೆಯನ್ನು ಕಸಿದುಕೊಂಡು ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಹೊರಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಂದ ನೇರ ಗ್ರಾಹಕರಿಗೆ ತಲುಪಿಸಲು ನಮ್ದು ಬ್ರ್ಯಾಂಡ್‌ನ ಉದ್ದೇಶ ಎಂದು ಅಮೃತಭೂಮಿ ಟ್ರಸ್ಟ್ ಹೇಳಿದೆ.

ಅದರ ಮೊದಲ ಮಾರಾಟ ಮಳಿಗೆಯು ಚಾಮರಾಜನಗರದಲ್ಲಿ ಆರಂಭವಾಗಿದ್ದು, ಇಲ್ಲಿ ರೈತರು ಬೆಳೆದ ಸಿರಿಧಾನ್ಯಗಳು, ದವಸ ಧಾನ್ಯಗಳು, ಹಣ್ಣು, ತರಕಾರಿ, ಸೊಪ್ಪು, ಜೇನುತುಪ್ಪ, ಬೆಲ್ಲ, ಗಾಣದಲ್ಲಿ ತಯಾರಿಸಿದ ಎಣ್ಣೆ ಮೊದಲಾದ ಆಹಾರ ಪದಾರ್ಥಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಕನಸುಗಳಲ್ಲಿ, ಮಧ್ಯವರ್ತಿಗಳಿಲ್ಲದ ನೇರ ಮಾರುಕಟ್ಟೆ ಕಲ್ಪನೆಯೂ ಕೂಡ ಒಂದಾಗಿತ್ತು. ಸಹಕಾರ ವ್ಯವಸ್ಥೆಯಲ್ಲಿ ಯಶಸ್ಸು ಕಂಡಿರುವ ಹಾಲು ಮತ್ತು ಹಾಲಿನ ಉಪಉತ್ಪನ್ನಗಳ ರೀತಿಯೇ ರೈತರು ಬೆಳೆಯುವ ಎಲ್ಲಾ ರೀತಿಯ ದವಸ ಧಾನ್ಯಗಳು, ಹಣ್ಣು ತರಕಾರಿಗಳು ಮತ್ತು ಅದರ ಉಪ ಉತ್ಪನ್ನಗಳನ್ನು ಇಡೀ ಕರ್ನಾಟಕದ ರೈತರು ಒಂದೇ ಬ್ರಾಂಡ್‌ನ ಕೆಳಗೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಟ್ಟುವುದರ ಮೂಲಕ ಗಾಂಧೀಜಿಯವರು ಕಂಡಿದ್ದ ಗ್ರಾಮಸ್ವ ರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಪಟ್ಟಿದ್ದರು. ಈ ಬ್ರಾಂಡ್‌ಗೆ “ನಮ್ದು” ಎನ್ನುವ ಹೆಸರನ್ನು ಕೂಡ ಕೊಟ್ಟಿದ್ದರು ಅದನ್ನೇ ನಾವು ಮುಂದುವರೆಸಿದ್ದೇವೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ: ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಮೃತಭೂಮಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರ, ನಿಸರ್ಗ ಟ್ರಸ್ಟ್, ನಿಸರ್ಗ ನೈಸರ್ಗಿಕ ಸಾವಯವ ಕೃಷಿಕರ ಸಂಘ, ಗುರುಮಲ್ಲೇಶ್ವರ ಸಾವಯವ ಕೃಷಿಕರ ಸಂಘ, ಮಹದೇಶ್ವರ ಜಿಲ್ಲಾ ಸಾವಯವ ಕೃಷಿಕರ ಸಂಘಗಳ ಸಹಯೋಗದಲ್ಲಿ ಈ ಮಳಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಸಾವಯವ ಕೃಷಿ ಮತ್ತು ಸಾವಯವ ಉತ್ಪನ್ನಗಳಿಗೆ ಮಹತ್ವ ಹೆಚ್ಚಾಗುತ್ತಿರುವುದು ಒಂದು ಒಳ್ಳೆಯ ಬೆಳವಣಿಗೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಉಳಿಗಾಲವಿಲ್ಲದಂತೆ ಹುನ್ನಾರ ಮಾಡುತ್ತಿರುವ ಕಾರ್ಪೋರೇಟ್ ಪ್ರಣೀತ ಸರ್ಕಾರಗಳ ಯೋಜನೆ ಮತ್ತು ಕಾನೂನುಗಳ ನಡುವೆ ಇಂತಹ ಸಣ್ಣ ಸಣ್ಣ ಕೆಲಸಗಳು ಮರುಭೂಮಿಯಲ್ಲಿ ಓಯಸಿಸ್‌ನಂತೆ ಕಾಣಿಸುತ್ತದೆ. ಹಾಗಾಗಿ ಇದನ್ನು ಬೆಂಬಲಿಸಿ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನ ಕರ್ತವ್ಯವಾಗಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...