Homeಮುಖಪುಟಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಸಂತ್ರಸ್ತೆಯ ಈ ವೀಡಿಯೋ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ ಸ್ವತಃ ತಾನೇ ಹೇಳಿರುವ ವೀಡಿಯೋ ವೈರಲ್ ಆಗುತ್ತಿದೆ. ಆದರೆ ಪೋಸ್ಟ್‌ಮಾರ್ಟಂ ರಿಪೋರ್ಟ್ ಅತ್ಯಾಚಾರ ನಡೆದಿಲ್ಲ ಎಂದು ಹೇಳುತ್ತದೆ. ಹೆಚ್ಚಿನ ವಿವಿರ ಇಲ್ಲಿದೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತೆ ಮನಿಷಾ ಅಂತಿಮವಾಗಿ ಮಾತನಾಡಿದ್ದಾಳೆ ಎನ್ನಲಾಗುತ್ತಿರುವ ವಿಡಿಯೋ ಸದ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, “ತಾನು ಇಬ್ಬರು ಪುರುಷರಿಂದ ಅತ್ಯಾಚಾರಕ್ಕೆ ಒಳಗಾಗಿದ್ದೇನೆ” ಎಂದು ಹೇಳಿರುವುದು ದಾಖಲಾಗಿದೆ.

“ತನ್ನನ್ನು ಇಬ್ಬರು ಅತ್ಯಾಚಾರ ಮಾಡಿದರು. ನನ್ನ ತಾಯಿ ಬರುವುದನ್ನು ನೋಡಿ ಇನ್ನಿಬ್ಬರು ಓಡಿ ಹೋದರು. ಅವರು ಈ ಮೊದಲೇ ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದರು. ಆದರೆ ಆಗ ನಾನು ತಪ್ಪಿಸಿಕೊಂಡಿದ್ದೆ” ಎಂದು ಹೇಳುತ್ತಾ, ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ 4 ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬ ಆರೋಪಿಯ ಹೆಸರನ್ನು ಉಲ್ಲೇಖಿಸಿದ್ದಾಳೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ಸೆಪ್ಟೆಂಬರ್ 22 ರಂದು ಯುವತಿಯ ಹೇಳಿಕೆಯನ್ನು ರೆಕಾರ್ಡ್ ಮಾಡಿದ್ದ ಸರ್ಕಲ್ ಅಧಿಕಾರಿ ಬ್ರಹ್ಮ್ ಸಿಂಗ್, ಈ ವಿಡಿಯೋ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಈ ಹೇಳಿಕೆಯನ್ನು ದಾಖಲಿಸಿದ ಸಮಯದಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (JNMC), ಇದನ್ನು ಮರಣದ ಅಂತಿಮ ಹೇಳಿಕೆಯಲ್ಲ ಎಂದು ಹೇಳಿದ್ದು, ಇದನ್ನು ಆಕೆ ವಾರ್ಡ್‌ನಲ್ಲಿದ್ದಾಗ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿದೆ.

ಆದರೆ ಇದಕ್ಕೆ ವಿರುದ್ಧವಾಗಿ ಯುವತಿಯ ಪೋಸ್ಟ್‌ಮಾರ್ಟಂ ವರದಿಯಲ್ಲಿ ಅತ್ಯಾಚಾರವೇ ನಡೆದಿಲ್ಲ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಗೊಳಗಾಗಿ ಸಾವನಪ್ಪಿದ ದಲಿತ ಯುವತಿಯ ಪೋಸ್ಟ್‌ಮಾರ್ಟಂ ವರದಿಯ ಪ್ರಕಾರ, “ಕತ್ತು ಹಿಸುಕಲಾಗಿದ್ದು, ಆಕೆಯ ಬೆನ್ನುಮೂಳೆ ಮುರಿದಿತ್ತು” ಎಂದು ತಿಳಿದುಬಂದಿದೆ. ಆದರೆ ಅಂತಿಮ ವರದಿಯಲ್ಲಿ ಅತ್ಯಾಚಾರ ನಡೆದಿರುವುದರ ಬಗ್ಗೆ ಉಲ್ಲೇಖವಿಲ್ಲ!

ದೆಹಲಿ ಆಸ್ಪತ್ರೆ ನೀಡಿರುವ ಪೋಸ್ಟ್‌ಮಾರ್ಟಂ ವರದಿಯಲ್ಲಿ, “ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ” ಎಂದು ಉಲ್ಲೇಖಿಸಲಾಗಿದೆ.

ಈಗ ಹತ್ರಾಸ್ ಸಂತ್ರಸ್ತೆ ಹೇಳಿಕೆ ನಿಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಸರ್ಕಾರ ಮತ್ತು ಪೊಲೀಸರ ವರ್ತನೆಯ ಮೇಲೆ ಅನುಮಾನ ಸೃಷ್ಟಿಯಾಗುತ್ತಿದೆ. ಈ  ನಿಟ್ಟಿನಲ್ಲಿ ನಮ್ಮ ಮುಂದೆ ಹಲವು ಪ್ರಶ್ನೆಗಳು ಉದ್ಭವಿಸುತ್ತವೆ. ಯುವತಿಯ ಕುಟುಂಬವನ್ನು ದೂರವಿಟ್ಟು, ನಡುರಾತ್ರಿ ಆಕೆಯನ್ನು ಸುಟ್ಟಿದ್ದು? ಏಮ್ಸ್‌ಗೆ ಸೂಚಿಸಿದ್ದರೂ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದು? ಸರ್ಕಾರ ಮತ್ತು ಅಧಿಕಾರಿಗಳ ವರ್ತನೆ? ಕುಟುಂಬಕ್ಕೆ ಗೃಹಬಂಧನ? ಅಧಿಕಾರಿಗಳ ಬೆದರಿಕೆ? ಯುವತಿಯ ಸಹೋದರನ ಹೇಳಿಕೆ? ಮಧ್ಯಮಗಳಿಗೆ ನಿರ್ಬಂಧ? ಮುಂತಾದ ನೂರಾರು ಪ್ರಶ್ನೆಗಳು ಉದ್ಭವಿಸುತ್ತವೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ತನಿಖೆ ನಡೆಸಲು ವಹಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಶನಿವಾರ ಸಂಜೆ ತಿಳಿಸಿದೆ. ನಿನ್ನೆ ರಾತ್ರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಆದೇಶ ಹೊರಬಿದ್ದಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...