Homeಮುಖಪುಟಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಸಂತ್ರಸ್ತೆಯ ಈ ವೀಡಿಯೋ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ ಸ್ವತಃ ತಾನೇ ಹೇಳಿರುವ ವೀಡಿಯೋ ವೈರಲ್ ಆಗುತ್ತಿದೆ. ಆದರೆ ಪೋಸ್ಟ್‌ಮಾರ್ಟಂ ರಿಪೋರ್ಟ್ ಅತ್ಯಾಚಾರ ನಡೆದಿಲ್ಲ ಎಂದು ಹೇಳುತ್ತದೆ. ಹೆಚ್ಚಿನ ವಿವಿರ ಇಲ್ಲಿದೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತೆ ಮನಿಷಾ ಅಂತಿಮವಾಗಿ ಮಾತನಾಡಿದ್ದಾಳೆ ಎನ್ನಲಾಗುತ್ತಿರುವ ವಿಡಿಯೋ ಸದ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, “ತಾನು ಇಬ್ಬರು ಪುರುಷರಿಂದ ಅತ್ಯಾಚಾರಕ್ಕೆ ಒಳಗಾಗಿದ್ದೇನೆ” ಎಂದು ಹೇಳಿರುವುದು ದಾಖಲಾಗಿದೆ.

“ತನ್ನನ್ನು ಇಬ್ಬರು ಅತ್ಯಾಚಾರ ಮಾಡಿದರು. ನನ್ನ ತಾಯಿ ಬರುವುದನ್ನು ನೋಡಿ ಇನ್ನಿಬ್ಬರು ಓಡಿ ಹೋದರು. ಅವರು ಈ ಮೊದಲೇ ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದರು. ಆದರೆ ಆಗ ನಾನು ತಪ್ಪಿಸಿಕೊಂಡಿದ್ದೆ” ಎಂದು ಹೇಳುತ್ತಾ, ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ 4 ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬ ಆರೋಪಿಯ ಹೆಸರನ್ನು ಉಲ್ಲೇಖಿಸಿದ್ದಾಳೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ಸೆಪ್ಟೆಂಬರ್ 22 ರಂದು ಯುವತಿಯ ಹೇಳಿಕೆಯನ್ನು ರೆಕಾರ್ಡ್ ಮಾಡಿದ್ದ ಸರ್ಕಲ್ ಅಧಿಕಾರಿ ಬ್ರಹ್ಮ್ ಸಿಂಗ್, ಈ ವಿಡಿಯೋ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಈ ಹೇಳಿಕೆಯನ್ನು ದಾಖಲಿಸಿದ ಸಮಯದಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (JNMC), ಇದನ್ನು ಮರಣದ ಅಂತಿಮ ಹೇಳಿಕೆಯಲ್ಲ ಎಂದು ಹೇಳಿದ್ದು, ಇದನ್ನು ಆಕೆ ವಾರ್ಡ್‌ನಲ್ಲಿದ್ದಾಗ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿದೆ.

ಆದರೆ ಇದಕ್ಕೆ ವಿರುದ್ಧವಾಗಿ ಯುವತಿಯ ಪೋಸ್ಟ್‌ಮಾರ್ಟಂ ವರದಿಯಲ್ಲಿ ಅತ್ಯಾಚಾರವೇ ನಡೆದಿಲ್ಲ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಗೊಳಗಾಗಿ ಸಾವನಪ್ಪಿದ ದಲಿತ ಯುವತಿಯ ಪೋಸ್ಟ್‌ಮಾರ್ಟಂ ವರದಿಯ ಪ್ರಕಾರ, “ಕತ್ತು ಹಿಸುಕಲಾಗಿದ್ದು, ಆಕೆಯ ಬೆನ್ನುಮೂಳೆ ಮುರಿದಿತ್ತು” ಎಂದು ತಿಳಿದುಬಂದಿದೆ. ಆದರೆ ಅಂತಿಮ ವರದಿಯಲ್ಲಿ ಅತ್ಯಾಚಾರ ನಡೆದಿರುವುದರ ಬಗ್ಗೆ ಉಲ್ಲೇಖವಿಲ್ಲ!

ದೆಹಲಿ ಆಸ್ಪತ್ರೆ ನೀಡಿರುವ ಪೋಸ್ಟ್‌ಮಾರ್ಟಂ ವರದಿಯಲ್ಲಿ, “ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ” ಎಂದು ಉಲ್ಲೇಖಿಸಲಾಗಿದೆ.

ಈಗ ಹತ್ರಾಸ್ ಸಂತ್ರಸ್ತೆ ಹೇಳಿಕೆ ನಿಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಸರ್ಕಾರ ಮತ್ತು ಪೊಲೀಸರ ವರ್ತನೆಯ ಮೇಲೆ ಅನುಮಾನ ಸೃಷ್ಟಿಯಾಗುತ್ತಿದೆ. ಈ  ನಿಟ್ಟಿನಲ್ಲಿ ನಮ್ಮ ಮುಂದೆ ಹಲವು ಪ್ರಶ್ನೆಗಳು ಉದ್ಭವಿಸುತ್ತವೆ. ಯುವತಿಯ ಕುಟುಂಬವನ್ನು ದೂರವಿಟ್ಟು, ನಡುರಾತ್ರಿ ಆಕೆಯನ್ನು ಸುಟ್ಟಿದ್ದು? ಏಮ್ಸ್‌ಗೆ ಸೂಚಿಸಿದ್ದರೂ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದು? ಸರ್ಕಾರ ಮತ್ತು ಅಧಿಕಾರಿಗಳ ವರ್ತನೆ? ಕುಟುಂಬಕ್ಕೆ ಗೃಹಬಂಧನ? ಅಧಿಕಾರಿಗಳ ಬೆದರಿಕೆ? ಯುವತಿಯ ಸಹೋದರನ ಹೇಳಿಕೆ? ಮಧ್ಯಮಗಳಿಗೆ ನಿರ್ಬಂಧ? ಮುಂತಾದ ನೂರಾರು ಪ್ರಶ್ನೆಗಳು ಉದ್ಭವಿಸುತ್ತವೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ತನಿಖೆ ನಡೆಸಲು ವಹಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಶನಿವಾರ ಸಂಜೆ ತಿಳಿಸಿದೆ. ನಿನ್ನೆ ರಾತ್ರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಆದೇಶ ಹೊರಬಿದ್ದಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...