Homeಮುಖಪುಟಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಸಂತ್ರಸ್ತೆಯ ಈ ವೀಡಿಯೋ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ ಸ್ವತಃ ತಾನೇ ಹೇಳಿರುವ ವೀಡಿಯೋ ವೈರಲ್ ಆಗುತ್ತಿದೆ. ಆದರೆ ಪೋಸ್ಟ್‌ಮಾರ್ಟಂ ರಿಪೋರ್ಟ್ ಅತ್ಯಾಚಾರ ನಡೆದಿಲ್ಲ ಎಂದು ಹೇಳುತ್ತದೆ. ಹೆಚ್ಚಿನ ವಿವಿರ ಇಲ್ಲಿದೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತೆ ಮನಿಷಾ ಅಂತಿಮವಾಗಿ ಮಾತನಾಡಿದ್ದಾಳೆ ಎನ್ನಲಾಗುತ್ತಿರುವ ವಿಡಿಯೋ ಸದ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, “ತಾನು ಇಬ್ಬರು ಪುರುಷರಿಂದ ಅತ್ಯಾಚಾರಕ್ಕೆ ಒಳಗಾಗಿದ್ದೇನೆ” ಎಂದು ಹೇಳಿರುವುದು ದಾಖಲಾಗಿದೆ.

“ತನ್ನನ್ನು ಇಬ್ಬರು ಅತ್ಯಾಚಾರ ಮಾಡಿದರು. ನನ್ನ ತಾಯಿ ಬರುವುದನ್ನು ನೋಡಿ ಇನ್ನಿಬ್ಬರು ಓಡಿ ಹೋದರು. ಅವರು ಈ ಮೊದಲೇ ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದರು. ಆದರೆ ಆಗ ನಾನು ತಪ್ಪಿಸಿಕೊಂಡಿದ್ದೆ” ಎಂದು ಹೇಳುತ್ತಾ, ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ 4 ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬ ಆರೋಪಿಯ ಹೆಸರನ್ನು ಉಲ್ಲೇಖಿಸಿದ್ದಾಳೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ಸೆಪ್ಟೆಂಬರ್ 22 ರಂದು ಯುವತಿಯ ಹೇಳಿಕೆಯನ್ನು ರೆಕಾರ್ಡ್ ಮಾಡಿದ್ದ ಸರ್ಕಲ್ ಅಧಿಕಾರಿ ಬ್ರಹ್ಮ್ ಸಿಂಗ್, ಈ ವಿಡಿಯೋ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಈ ಹೇಳಿಕೆಯನ್ನು ದಾಖಲಿಸಿದ ಸಮಯದಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (JNMC), ಇದನ್ನು ಮರಣದ ಅಂತಿಮ ಹೇಳಿಕೆಯಲ್ಲ ಎಂದು ಹೇಳಿದ್ದು, ಇದನ್ನು ಆಕೆ ವಾರ್ಡ್‌ನಲ್ಲಿದ್ದಾಗ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿದೆ.

ಆದರೆ ಇದಕ್ಕೆ ವಿರುದ್ಧವಾಗಿ ಯುವತಿಯ ಪೋಸ್ಟ್‌ಮಾರ್ಟಂ ವರದಿಯಲ್ಲಿ ಅತ್ಯಾಚಾರವೇ ನಡೆದಿಲ್ಲ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಗೊಳಗಾಗಿ ಸಾವನಪ್ಪಿದ ದಲಿತ ಯುವತಿಯ ಪೋಸ್ಟ್‌ಮಾರ್ಟಂ ವರದಿಯ ಪ್ರಕಾರ, “ಕತ್ತು ಹಿಸುಕಲಾಗಿದ್ದು, ಆಕೆಯ ಬೆನ್ನುಮೂಳೆ ಮುರಿದಿತ್ತು” ಎಂದು ತಿಳಿದುಬಂದಿದೆ. ಆದರೆ ಅಂತಿಮ ವರದಿಯಲ್ಲಿ ಅತ್ಯಾಚಾರ ನಡೆದಿರುವುದರ ಬಗ್ಗೆ ಉಲ್ಲೇಖವಿಲ್ಲ!

ದೆಹಲಿ ಆಸ್ಪತ್ರೆ ನೀಡಿರುವ ಪೋಸ್ಟ್‌ಮಾರ್ಟಂ ವರದಿಯಲ್ಲಿ, “ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ” ಎಂದು ಉಲ್ಲೇಖಿಸಲಾಗಿದೆ.

ಈಗ ಹತ್ರಾಸ್ ಸಂತ್ರಸ್ತೆ ಹೇಳಿಕೆ ನಿಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಸರ್ಕಾರ ಮತ್ತು ಪೊಲೀಸರ ವರ್ತನೆಯ ಮೇಲೆ ಅನುಮಾನ ಸೃಷ್ಟಿಯಾಗುತ್ತಿದೆ. ಈ  ನಿಟ್ಟಿನಲ್ಲಿ ನಮ್ಮ ಮುಂದೆ ಹಲವು ಪ್ರಶ್ನೆಗಳು ಉದ್ಭವಿಸುತ್ತವೆ. ಯುವತಿಯ ಕುಟುಂಬವನ್ನು ದೂರವಿಟ್ಟು, ನಡುರಾತ್ರಿ ಆಕೆಯನ್ನು ಸುಟ್ಟಿದ್ದು? ಏಮ್ಸ್‌ಗೆ ಸೂಚಿಸಿದ್ದರೂ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದು? ಸರ್ಕಾರ ಮತ್ತು ಅಧಿಕಾರಿಗಳ ವರ್ತನೆ? ಕುಟುಂಬಕ್ಕೆ ಗೃಹಬಂಧನ? ಅಧಿಕಾರಿಗಳ ಬೆದರಿಕೆ? ಯುವತಿಯ ಸಹೋದರನ ಹೇಳಿಕೆ? ಮಧ್ಯಮಗಳಿಗೆ ನಿರ್ಬಂಧ? ಮುಂತಾದ ನೂರಾರು ಪ್ರಶ್ನೆಗಳು ಉದ್ಭವಿಸುತ್ತವೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ತನಿಖೆ ನಡೆಸಲು ವಹಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಶನಿವಾರ ಸಂಜೆ ತಿಳಿಸಿದೆ. ನಿನ್ನೆ ರಾತ್ರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಆದೇಶ ಹೊರಬಿದ್ದಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...