Homeಅಂಕಣಗಳುಇದು ಲವ್ ಜಿಹಾದ್ ಅಲ್ಲವಂತೆ

ಇದು ಲವ್ ಜಿಹಾದ್ ಅಲ್ಲವಂತೆ

- Advertisement -
- Advertisement -
ಇಸ್ಮತ್ ಪಜೀರ್ |
ಮೊನ್ನೆ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಮೂರನೇ ದಿನಕ್ಕೆ ಅಂದರೆ ದೇಶಕ್ಕೆ ದೇಶವೇ ಸೂತಕದ ಛಾಯೆಯಲ್ಲಿದ್ದಾಗ ಉತ್ತರ ಪ್ರದೇಶದಲ್ಲೊಂದು ಹೈ ಪ್ರೊಫೈಲ್ ಮದುವೆ ನಡೆಯಿತು.
ಮದುವೆ ಯಾರದ್ದು ಗೊತ್ತೇ…?
ಉತ್ತರ ಪ್ರದೇಶದ ಮಂತ್ರಿ ರಾಮಲಾಲ್ ರ ಸೊಸೆ ಶ್ರೇಯಾ ಗುಪ್ತಾಳದ್ದು.. ವರನ್ಯಾರು ಗೊತ್ತೇ…? ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿಯ ತವರು ಕ್ಷೇತ್ರ ಗೋರಖ್ ಪುರದ ಶ್ರೀಮಂತ ಯುವಕ ಫೈಝಾನ್ ಕರೀಂ..! ಈ ಮದುವೆಯೇನು ಕದ್ದು ಮುಚ್ಚಿಯೋ.. ಗಂಡು ಹೆಣ್ಣು ಪರಾರಿಯಾಗಿಯೋ ನಡೆದದ್ದಲ್ಲ. ಇದು ಲವ್ ಕಂ ಅರೇಂಜ್ಡ್ ಮ್ಯಾರೇಜ್. ಅಂದರೆ ಶ್ರೇಯಾ ಗುಪ್ತಾ ಮತ್ತು ಫೈಝಾನ್ ಕರೀಂ ಮಧ್ಯೆ ಪ್ರೇಮಾಂಕುರವಾಯಿತು.

ಅವರು ಬಾಳ ಸಂಗಾತಿಗಳಾಗಲು ನಿರ್ಧರಿಸಿದರು. ಹಿರಿಯರು ಒಪ್ಪಿ ಮದುವೆ ಮಾಡಿ ಕೊಟ್ಟರು. ಒಂದು ವೇಳೆ ಹಿರಿಯರ ವಿರೋಧ ಈ ಮದುವೆಗೆ ಇದ್ದಿದ್ದರೆ  ಅಷ್ಟೊಂದು ಅದ್ದೂರಿ ಮದುವೆ ನಡೆಯುತ್ತಿರಲಿಲ್ಲ ಎಂಬುವುದು ಕಾಮನ್‌ ಸೆನ್ಸ್ ಗೆ ನಿಲುಕುವ ವಿಚಾರ. ಆ ಮದುವೆಯಲ್ಲಿ ಬಿಜೆಪಿಯ ಅತಿರಥ ಮಹಾರಥ ನಾಯಕರೆಲ್ಲಾ ಭಾಗವಹಿಸಿದ್ದರು. ಬಿಜೆಪಿ ಪಕ್ಷದ ಮಾತ್ರವಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸರಕಾರಗಳ ಅಧಿಕಾರಸ್ಥರೂ ಭಾಗವಹಿಸಿದ್ದರು. ವಧೂ ವರರನ್ನು ಆಶೀರ್ವದಿಸುವುದರಲ್ಲಿ ಆರೆಸ್ಸೆಸ್ ಮುಖಂಡರೂ ಹಿಂದೆ ಬೀಳಲಿಲ್ಲ. ಯಾಕೆಂದರೆ ಅವರೀರ್ವರೂ ಮದುವೆ ಪ್ರಾಯವಾದವರೇ…

ಅವರ ಬದುಕು ಅವರ ವೈಯಕ್ತಿಕ ನಿರ್ಧಾರ. ಅವರ ಕುಟಂಬಕ್ಕೂ ಸಮ್ಮತಿಯಿದೆ. ಅದರಲ್ಲೇನು ತಪ್ಪು… ಅಲ್ವಾ…?
ಹೌದು, ತಪ್ಪೇನಿಲ್ಲ. ಹೇಳಿ ಕೇಳಿ ಲವ್ ಅಂದರೆ ಮೊದಲು ಒಂದು‌ ಆಕರ್ಷಣೆ… ಆ ಬಳಿಕ ಸ್ನೇಹ…‌ಆ ಬಳಿಕ ಆತ್ಮೀಯತೆ…..ಆ ಬಳಿಕ ಸುಖ ದುಃಖ ಹಂಚಿಕೊಳ್ಳುವಿಕೆ… ಮತ್ತೆ ಒಂದು ಗಟ್ಟಿ ನಿರ್ಧಾರಕ್ಕೆ ಬಂದರೆ ಮದುವೆ. ಇದು ಭಾರತದಲ್ಲಿ ಉಳ್ಳವರಿಗೆ, ಅಧಿಕಾರಸ್ಥರಿಗೆ ಅನ್ವಯವಾಗುವ ಅಲಖಿತ ಕಾನೂನು. ಆದರೆ… ಬಡ, ಮಧ್ಯಮ ವರ್ಗದವರಾದರೆ, ಅಧಿಕಾರಸ್ಥರಲ್ಲದಿದ್ದರೆ ಅಲ್ಲಿ ಜಾತಿ ಧರ್ಮಗಳ ಹಸ್ತಕ್ಷೇಪ ಇರಲೇಬೇಕು. ಯಾಕೆಂದರೆ ಅದೊಂದು ಮತ ಕೊಯ್ಲು ಮಾಡಲು ಸಾಧ್ಯವಾಗಬಲ್ಲ ರಾಜಕೀಯ ಇಶ್ಯೂ….
ಉಳ್ಳವರಾದರೆ, ಅಧಿಕಾರಸ್ಥರಾದರೆ ಲವ್ ಮ್ಯಾರೇಜ್….
ಬಡವರು, ಮಧ್ಯಮ ವರ್ಗಿಗಳಾದರೆ ಲವ್ ಜಿಹಾದ್…
ಈ ಪ್ರಕ್ರಿಯೆ ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ…
ಅಡ್ವಾಣಿ, ಮುರಳೀ ಮನೋಹರ ಜೋಶಿ, ಅಶೋಕ್ ಸಿಂಘಾಲ್, ಮುಕ್ತಾರ್ ಅಬ್ಬಾಸ್ ನಖ್ವಿ, ಉಮರ್ ಅಬ್ದುಲ್ಲಾ, ಶಾನವಾಝ್ ಹುಸೇನ್, ಬಾಳಾ ಠಾಕ್ರೆ, ಸುಬ್ರಹ್ಮಣ್ಯ ಸ್ವಾಮಿ… ಹೀಗೆ ಇದಕ್ಕೊಂದು ದೊಡ್ಡ ಪರಂಪರೆಯೇ ಇದೆ. ಇದು ಮುಂದುವರಿಯುತ್ತದೆ ಸಹೋದರರೇ…ನಾವು ಮಾತ್ರ ಜಾತಿ, ಧರ್ಮ ಎಂದು ಕಚ್ಚಾಡುತ್ತಿರೋಣ…
(ಕೃಪೆ : ರಿಯಲ್ ಫ್ಲೇವರ್ ನ್ಯೂಸ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...