Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

"ಈ ಕಷ್ಟದ ಸಮಯದಲ್ಲಿ ಆ ಕುಟುಂಬಕ್ಕೆ ಬೆಂಬಲ ನೀಡುವುದಾಗಿ ಮತ್ತು ನ್ಯಾಯ ಪಡೆಯುವ ಹೋರಾಟದಲ್ಲಿ ಜೊತೆಯಿರುವುದಾಗಿ ಭರವಸೆ ನೀಡಿದ್ದೇನೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -
- Advertisement -

ಭಾರಿ ಅಡೆತಡೆಗಳ ನಡುವೆಯೂ ಹತ್ರಾಸ್ ಅತ್ಯಾಚಾರ ಸಂತ್ರಸ್ತ ಕುಟುಂಬವನ್ನು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ಮಾಡಿ ಸಂತೈಸಿದ್ದಾರೆ. ಈ ನಡುವೆ ಆ ಕುಟುಂಬ ಕೇಳುತ್ತಿರುವುದೇನು ಎಂದು ಪ್ರಿಯಾಂಕಾ ಗಾಂಧಿ 5 ಪ್ರಶ್ನೆಗಳನ್ನು ಪಟ್ಟಿ ಮಾಡಿದ್ದಾರೆ.

ಭೇಟಿ ನಂತರ ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ “ನಮ್ಮ ಮಗಳನ್ನು ಪೆಟ್ರೋಲ್ ಹಾಕಿ ಏಕೆ ಸುಡಲಾಯಿತು? ನಮಗೆ ಜಿಲ್ಲಾ ನ್ಯಾಯಾಲಯದ ಮೇಲೆ ನಂಬಿಕೆಯಿಲ್ಲ. ಹಾಗಾಗಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕೆಂದು” ಕುಟುಂಬ ಒತ್ತಾಯಿಸಿದೆ ಎಂದು ಬರೆದಿದ್ದಾರೆ.

ಪ್ರಿಯಾಂಕಾ ಗಾಂಧಿ ಪಟ್ಟಿ ಮಾಡಿದ ಹತ್ರಾಸ್ ಸಂತ್ರಸ್ತೆಯ ಕುಟುಂಬದ 5 ಪ್ರಶ್ನೆಗಳು ಈ ಕೆಳಗಿನಂತಿವೆ.

  1. ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು.
  2. ಹತ್ರಾಸ್ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಮತ್ತು ಅವರಿಗೆ ದೊಡ್ಡ ಹುದ್ದೆ ನೀಡಬಾರದು.
  3. ನಮ್ಮ ಅನುಮತಿಯಿಲ್ಲದೆ ನಮ್ಮ ಮಗಳ ದೇಹವನ್ನು ಪೆಟ್ರೋಲ್ ಬಳಸಿ ಏಕೆ ಸುಡಲಾಯಿತು?
  4. ಇಷ್ಟು ದಿನ ನಮ್ಮನ್ನು ಏಕೆ ಪದೇ ಪದೇ ದಾರಿತಪ್ಪಿಸಿ, ಬೆದರಿಕೆ ಹಾಕಲಾಯಿತು?
  5. ನಾವು ನಮ್ಮ ಮಗಳ ಅಂತ್ಯಕ್ರಿಯೆ ನೇರವೇರಿಸಲು ‘ಹೂವುಗಳನ್ನು’ ತಂದಿದ್ದೇವೆ. ಆದರೆ ಅಂದು ಸುಟ್ಟ ಮೃತ ದೇಹವು ನಮ್ಮ ಮಗಳದು ಎಂದು ನಾವು ಹೇಗೆ ನಂಬಬೇಕು?

ಈ ಪ್ರಶ್ನೆಗಳನ್ನು ಕೇಳಲು ಸಂತ್ರಸ್ತ ಕುಟುಂಬಕ್ಕೆ ಎಲ್ಲಾ ಅಧಿಕಾರವಿದೆ. ಇದಕ್ಕೆ ಉತ್ತರ ಪ್ರದೇಶ ಸರ್ಕಾರ ಉತ್ತರಿಸಬೇಕು ಎಂಬು ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.

“ಈ ಕಷ್ಟದ ಸಮಯದಲ್ಲಿ ಆ ಕುಟುಂಬಕ್ಕೆ ಬೆಂಬಲ ನೀಡುವುದಾಗಿ ಮತ್ತು ನ್ಯಾಯ ಪಡೆಯುವ ಹೋರಾಟದಲ್ಲಿ ಜೊತೆಯಿರುವುದಾಗಿ ಭರವಸೆ ನೀಡಿದ್ದೇನೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಇನ್ನು ಮುಂದೆ ಯುಪಿ ಸರ್ಕಾರವು ತನಗೆ ಮನಬಂದಂತೆ ಅನಿಯಂತ್ರಿತವಾಗಿ ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಏಕೆಂದರೆ ಈಗ ಇಡೀ ದೇಶವು ಈ ದೇಶದ ಮಗಳಿಗೆ ನ್ಯಾಯ ಒದಗಿಸಲು ನಿಂತಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...