Homeಅಂತರಾಷ್ಟ್ರೀಯಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

- Advertisement -
- Advertisement -

ಯುನೈಟೆಡ್ ಕಿಂಗ್‌ಡಂನ 200ಕ್ಕೂ ಹೆಚ್ಚು ಪ್ರಮುಖ ನಾಗರಿಕರು, ಕಲಾವಿದರು, ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು 50ಕ್ಕೂ ಹೆಚ್ಚು ಹಿರಿಯ ಶಿಕ್ಷಣ ತಜ್ಞರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವು ಅನುಸರಿಸುತ್ತಿರುವ “ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಧೋರಣೆ” ಖಂಡಿಸಿ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.

ಲೇಬರ್ ಪಕ್ಷದ ಜೆರೆಮಿ ಕಾರ್ಬಿನ್ ಮತ್ತು ಜಾನ್ ಮೆಕ್‌ಡೊನೆಲ್, ಗ್ರೀನ್ ಪಾರ್ಟಿಯ ಕ್ಯಾರೋಲಿನ್ ಲ್ಯೂಕಾಸ್, ಸ್ಕಾಟಿಷ್ ನ್ಯಾಷನಲ್ ಪಾರ್ಟಿಯ ಬ್ರೆಂಡನ್ ಒಹರಾ (ಅಂತರರಾಷ್ಟ್ರೀಯ ಮಾನವ ಹಕ್ಕುಗಳ ವಕ್ತಾರ), ಶಮಿ ಚಕ್ರವರ್ತಿ (ನಾಗರಿಕ ಸ್ವಾತಂತ್ರ್ಯ ಗುಂಪು ಲಿಬರ್ಟಿಯ ಮಾಜಿ ನಿರ್ದೇಶಕ) ಮತ್ತು ಹೌಸ್ ಆಫ್ ಲಾರ್ಡ್ಸ್ ಸದಸ್ಯರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬ್ರಿಟಿಷ್ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ಪತ್ರವನ್ನು ಬೆಂಬಲಿಸುವ ಪ್ರಮುಖ ಸಾಂಸ್ಕೃತಿಕ ವ್ಯಕ್ತಿಗಳಲ್ಲಿ ಡ್ಯಾನಿ ಬೊಯೆಲ್ (ಸ್ಲಮ್‌ಡಾಗ್ ಮಿಲೆನಿಯರ್ ನಿರ್ದೇಶಕ), ಚಲನಚಿತ್ರ ನಿರ್ಮಾಪಕ ಕೆನ್ ಲೋಚ್, ನಟಿ ಮ್ಯಾಕ್ಸಿನ್ ಪೀಕ್, ಸಂಗೀತಗಾರ ಲೋಕಿ, ಕಾದಂಬರಿಕಾರ ಹರಿ ಕುಂಜ್ರು, ನಿರ್ಮಾಪಕ ಟೋಬಿ ಕೈರೆಮಾಟೆಂಗ್, ಪರಿಸರವಾದಿ ಜಾರ್ಜ್ ಮೊನ್‌ಬಿಯೊಟ್ ಮತ್ತು ಬರಹಗಾರ ಪಾಲ್ ಗಿಲ್ರಾಯ್ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಪತ್ರದಲ್ಲಿ ’ಮೋದಿ ಆಡಳಿತವು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ಆಕ್ರಮಣ ಮತ್ತು ಪ್ರಜಾಪ್ರಭುತ್ವ ಭಿನ್ನಾಭಿಪ್ರಾಯದ ವಿರುದ್ಧದ ಜಾಗತಿಕ ಆಕ್ರೋಶಕ್ಕೆ ನಾವು ನಮ್ಮ ಧ್ವನಿಯನ್ನು ಸೇರಿಸುತ್ತೇವೆ’ ಎನ್ನಲಾಗಿದೆ.

’ಮೋದಿ ಆಡಳಿತವು ವಿದ್ಯಾರ್ಥಿ ಪ್ರತಿಭಟನಾಕಾರರು, ಸ್ತ್ರೀಸಮಾನತಾವಾದಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳನ್ನು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ನಂತಹ ಆರೋಪಗಳಲ್ಲಿ ತುರ್ತು ಕಾನೂನುಗಳ ಆಧಾರದ ಮೇಲೆ ಅನೇಕರನ್ನು ಬಂಧಿಸಿದೆ.

ಕೆಲವು ಸಂದರ್ಭಗಳಲ್ಲಿ, ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೂ, ಗಲಭೆಯ ಅಸಂಬದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬರೆಯಲಾಗಿದೆ.

ಭಿನ್ನಾಭಿಪ್ರಾಯದ ಈ ಅಪರಾಧೀಕರಣವು ಇತ್ತೀಚಿನ ತಿಂಗಳುಗಳಲ್ಲಿಆತಂಕಗೊಳಿಸುವ ರೀತಿಯಲ್ಲಿ ತೀವ್ರಗೊಂಡಿದೆ. ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಹಲವು ಮಂದಿಯನ್ನು ಬಂಧಿಸಲಾಯಿತು.  ಬಿಜೆಪಿ ನೇತೃತ್ವದ ಸರ್ಕಾರವು ವಲಸೆ ಕಾರ್ಮಿಕರರನ್ನು ಕಷ್ಟಕ್ಕೆ ದೂಡಿದ್ದು ಮಾತ್ರವಲ್ಲದೇ, ಭಾರತದ ಅನಾರೋಗ್ಯಕರ ಜೈಲುಗಳಿಗೆ ಕಾರ್ಯಕರ್ತರನ್ನು ದೂಡ್ಡಿದೆ. ಜೈಲಿನಲ್ಲಿದ್ದ ಹಲವಾರು ಕಾರ್ಯಕರ್ತರಿಗೆ ಈ ವೈರಸ್ ಸೋಂಕು ತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಬಿಜೆಪಿ ನಾಯಕರು ಸರ್ಕಾರವನ್ನು ಪ್ರಶ್ನಿಸುವವರ ಮೇಲೆ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚೋದಿತ ಭೀಕರ ಗಲಭೆಗಳಲ್ಲಿ ಮುಸ್ಲಿಮರ ವಿರುದ್ಧ ಪೊಲೀಸ್ ಪಡೆಗಳು ಸಹಕರಿಸಿದವು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದಿದ್ದಾರೆ.

ಮೋದಿ ಆಡಳಿತವು ತನ್ನ ಸರ್ವಾಧಿಕಾರಿ ಮತ್ತು ಬಹುಸಂಖ್ಯಾತ ಅಜೆಂಡಾ ಅನುಸರಿಸುವಲ್ಲಿ ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದೆ. ಈ ಕೆಟ್ಟ ಆಡಳಿತವನ್ನು ವಿರೋಧಿಸುತ್ತಿರುವ ಭಾರತದ ಧೈರ್ಯಶಾಲಿ ಕಾರ್ಯಕರ್ತರೊಂದಿಗೆ ನಾವು ನಿಲ್ಲುತ್ತೇವೆ ಮತ್ತು ಎಲ್ಲಾ ರಾಜಕೀಯ ಕೈದಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರೆ ನೀಡುತ್ತೇವೆ ಎಂಬ ಪತ್ರಕ್ಕೆ 200ಕ್ಕೂ ಅಧಿಕ ಮಂದಿ ಸಹಿ ಮಾಡಿದ್ದಾರೆ.

ವಿಶೇಷವೆಂದರೆ, ಹಲವಾರು ಬ್ರಿಟಿಷ್-ಭಾರತೀಯ ಸಾಂಸ್ಕೃತಿಕ ವ್ಯಕ್ತಿಗಳು ಕೂಡ ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಪತ್ರಕರ್ತರಾದ ಆಶ್ ಸರ್ಕಾರ್, ಏಂಜೆಲಾ ಸೈನಿ, ಬರಹಗಾರರಾದ ನಿಕೇಶ್ ಶುಕ್ಲಾ, ಪ್ರೀತಿ ತನೇಜಾ, ಸಂದೀಪ್ ಪಾರ್ಮಾರ್, ಜೆಮ್ಮಾ ದೇಸಾಯಿ, ಸಂಗೀತಗಾರರಾದ ಆಡಮ್ ಬೈನ್‌ಬ್ರಿಡ್ಜ್, ಕಪಿಲ್ ಶೇಷಾಸಾಯೀ, ಶಾರತಿ ಕೊರ್ವಾರ್ ಮತ್ತು ರಂಗಭೂಮಿ ಕಲಾವಿದರಾದ ತನಿಕಾ ಗುಪ್ತಾ, ವಿನಯ್ ಪಟೇಲ್, ಅಂಜ್ಲಿ ಮೊಹಿಂದ್ರಾ, ರಾಖೀ ಠಕ್ರಾರ್, ಮಿಲ್ಲಿ ಭಾಟಿಯಾ ಮುಕ್ತ ಪತ್ರಕ್ಕೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ‘ಕೊಲೆ ಸಿದ್ದಾಂತ’ ಸಂಪೂರ್ಣ ಸುಳ್ಳು: ಏಮ್ಸ್ ಮೂಲಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...