Homeಮುಖಪುಟಸ್ವರಾಜ್ ಎಂಬ ನಿಜವಾದ ಅಭಿವೃದ್ಧಿ : ಸುಮನಸ್ ಕೌಲಗಿ

ಸ್ವರಾಜ್ ಎಂಬ ನಿಜವಾದ ಅಭಿವೃದ್ಧಿ : ಸುಮನಸ್ ಕೌಲಗಿ

ಸ್ವರಾಜ್‌ ಅಭಿವೃದ್ದಿಯಲ್ಲಿ ಒಬ್ಬ ವ್ಯಕ್ತಿ ಮತ್ತೊಬ್ಬನನ್ನು ಶೋಷಿಸದೆ, ಪ್ರೀತಿಯಿಂದ ಬದುಕುವುದರೊಟ್ಟಿಗೆ, ಬೇರೊಬ್ಬನು ತನ್ನನ್ನು ಶೋಷಿಸದಂತೆ ತಡೆಯುವುದೂ ಕೂಡ ಅಹಿಂಸೆಯ ಭಾಗವಾಗಿದೆ..

- Advertisement -
- Advertisement -

ಕಾಡಂಚಿನ ಒಂದು ಹಳ್ಳಿಯ ಮಧ್ಯವಯಸ್ಕ ವ್ಯಕ್ತಿಯನ್ನು ಅಂದು ಮಾತನಾಡಿಸುತ್ತಿದ್ದೆ. ಮಾತು ತಿರುತಿರುಗಿ ಅತನ ಹಳ್ಳಿಯ ಬಗ್ಗೆ ಬಂತು. ಮಾತಿನ ಮಧ್ಯೆ ಆತ ತನ್ನ ಹಳ್ಳಿ ಹಾಗೆಯೇ ಕುಗ್ರಾಮವಾಗಿಯೇ ಉಳಿದಿದ್ದು ತನ್ನ ಹಳ್ಳಿಯು ಇನ್ನೂ ‘ಡೆವಲಪ್’ ಆಗಿಲ್ಲ ಎಂದು ಕೊರಗತೊಡಗಿದ. ಕೆಲವು ದಿನಗಳ ಹಿಂದೆ ಸಾಫ್ಟ್ವೇರ್ ಗೆಳೆಯನೊಬ್ಬ ಬೆಂಗಳೂರಿನ ಬಗ್ಗೆ ಇದೇ ಮಾತನ್ನು ಹೇಳಿದ್ದು ನೆನಪಿಗೆ ಬಂತು. ಈ ‘ಡೆವಲಪ್’ ಅಥವಾ ಅಭಿವೃದ್ಧಿ ಎಂಬ ಪದ ಇತ್ತೀಚಿನ ಕೆಲವು ವರ್ಷಗಳಲ್ಲಿ ಹೆಚ್ಚು ಚಾಲ್ತಿಗೆ ಬಂದ ಶಬ್ದ. ಹಳ್ಳಿಯಿಂದ ದಿಲ್ಲಿಯವರೆಗೂ ಇದು ಜನರ ಶಬ್ದಭಂಡಾರಕ್ಕೆ ಸೇರಿಹೋಗಿದೆ. ಸಾಮಾನ್ಯರ ಕಲ್ಪನೆಯಲ್ಲಿ ಒಳ್ಳೆಯ ಜೀವನದ ಕನಸೊಂದನ್ನು ನನಸಾಗಿಸುವ ವಿಧಾನವೇ ‘ಡೆವಲಪ್’ ಆಗುವುದಾಗಿದೆ. ಈ ಅಭಿವೃದ್ಧಿ ಎಂಬ ಕಲ್ಪನೆಯು ಒಬ್ಬ ವ್ಯಕ್ತಿಗೆ, ಸಮುದಾಯಕ್ಕೆ ಹಾಗು ದೇಶಕ್ಕೆ ದಿಕ್ಕನ್ನು ತೋರಿಸುವ ದಿಕ್ಸೂಚಿಯಂತೆ ಕೆಲಸಮಾಡತೊಡಗಿದೆ.

ಅಮೂರ್ತವಾಗಿರುವ ಈ ಅಭಿವೃದ್ಧಿ ಕಲ್ಪನೆ ಸಮಾಜದ ಎಲ್ಲಾ ಸ್ಥರದವರಲ್ಲಿ ಹೆಚ್ಚು ಕಡಿಮೆ ಒಂದೇ ರೀತಿಯದಾಗಿದೆ. ಈ ಕಲ್ಪನೆ ನೂರಕ್ಕೆ ನೂರು ಭೌತಿಕ ಅಭಿವೃದ್ಧಿಯನ್ನು ತನ್ನ ಒಡಲಾಳದಲ್ಲಿ ಇಟ್ಟುಕೊಂಡಿದೆ. ಈ ಕಲ್ಪನೆಯಲ್ಲಿ ಹೆಚ್ಚಿನ ಭೌತಿಕ ವಸ್ತು ಸಂಗ್ರಹಣೆಯು ವ್ಯಕ್ತಿಯ, ಸಮುದಾಯದ ಅಥವಾ ದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಜೀವನದಲ್ಲಿ ನೆಮ್ಮದಿ ಹಾಗು ಶಾಂತಿಯನ್ನು ಪಡೆವುದು ಈ ‘ಡೆವಲಪ್’ ಆಗುವುದರ ಹಿಂದಿನ ಬಯಕೆ ಎಂಬುದು ಯಾರೇ ಜನಸಾಮಾನ್ಯರೊಟ್ಟಿಗೆ ಮಾತನಾಡಿದರೆ ತಿಳಿಯುತ್ತದೆ. ಆದರೆ ನಾವು ನಂಬಿರುವ ಈ ವಸ್ತುಕೇಂದ್ರಿತ ಅಭಿವೃದ್ಧಿ, ಎಷ್ಟರ ಮಟ್ಟಿಗೆ ಈ ಬಯಕೆಯನ್ನು ಈಡೇರಿಸಿದೆ ಎಂದು ಪರೀಕ್ಷಿಸಿಕೊಳ್ಳುವುದು ಇಂದಿಗೆ ಅತ್ಯಗತ್ಯ. ಈ ಪರಾಮರ್ಶೆಯಿಂದ ಒಂದು ನಾಗರೀಕತೆಯಾಗಿ ನಾವು ಸರಿಯಾದ ದಿಕ್ಕಿನೆಡೆಗೆ ಹೆಜ್ಜೆ ಇಡುತ್ತಿದ್ದೇವೆಯೆ ಅಥವಾ ಇಲ್ಲವೆ ಎಂಬುದು ತಿಳಿಯಬೇಕಿದೆ.

ಒಂದೆಡೆ, ವಸ್ತು ಕೇಂದ್ರಿತ ಅಭಿವೃದ್ಧಿಯಿಂದ ಪರಿಸರದ ಮೇಲೆ ಮಿತಿಮೀರಿದ ಒತ್ತಡ ಉಂಟಾಗಿ ನಾವು ಬದುಕಲೇ ಆಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇತ್ತಿಚೆಗಷ್ಟೆ, ಮೆಲ್‌ಬರ್ನ್‌ನ ‘ಬ್ರೇಕ್‌ಥ್ರೂ ನ್ಯಾಶನಲ್ ಸೆಂಟರ್ ಫಾರ್ ಕ್ಲೈಮೇಟ್ ರಿಸ್ಟೊರೇಶನ್’ ಸಂಸ್ಥೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ನಾವು ಅನುಸರಿಸುತ್ತಿರುವ ಅಭಿವೃದ್ಧಿ ಮಾದರಿಯು 2050ನೇ ಇಸವಿಯ ವೇಳೆಗೆ ಮನುಷ್ಯನ ಮೂಲಭೂತ ಅಗತ್ಯಗಳಾದ ಒಳ್ಳೆಯ ಗಾಳಿ, ನೀರು, ಮಣ್ಣು ಸಿಗದಂತೆ ಮಾಡಿ ಮಾನವ ಕುಲವೇ ವಿನಾಶದ ಅಂಚಿಗೆ ತಲುಪುತ್ತದೆ ಎನ್ನುತ್ತದೆ. ಇಂಗ್ಲೆಂಡಿನ ಆಕ್ಸಫಾಮ್ ಸಂಸ್ಥೆಯ ವರದಿಯ ಪ್ರಕಾರ ಈ ಅಭಿವೃದ್ಧಿಯ ಮಾದರಿಯಿಂದಾಗಿ ಬಡವ ಬಲ್ಲಿದರ ನಡುವಿನ ಅಂತರ ದಿನದಿಂದ ದಿನಕ್ಕೆ ದೊಡ್ಡದಾಗುತ್ತಾ ಹೋಗುತ್ತಿದೆ. ಭಾರತ ದೇಶದ ಶೇ.77ರಷ್ಟು ಸಂಪತ್ತು ಕೇವಲ ಶೇ.10ರಷ್ಟು ಜನರ ಬಳಿ ಸೇರಿದೆ. ವರ್ಷದಿಂದ ವರ್ಷಕ್ಕೆ ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗುತ್ತಿದ್ದಾರೆ. ಇದಷ್ಟೇ ಅಲ್ಲದೆ ಜನರಿಗೆ ತಮ್ಮ ಜೀವನದ ಮೇಲಿನ ಹಿಡಿತ ಕಡಿಮೆಯಾಗಿ, ನೆಮ್ಮದಿ ಹಾಗು ಸಂತೋಷ ಕುಸಿಯುತ್ತಿದೆ. ಹಾಗಾಗಿ ಪರಿಸರ ಸುಸ್ಥಿರತೆ ಮತ್ತು ಸಾಮಾಜಿಕ ಆರ್ಥಿಕ ಸಮಾನತೆಯನ್ನು ಹೆಚ್ಚಿಸಿ, ಜನರಿಗೆ ತಮ್ಮ ಬದುಕಿನ ಮೇಲೆ ಹೆಚ್ಚಿನ ಹಿಡಿತವನ್ನು ನೀಡಬಲ್ಲ ಅಭಿವೃದ್ಧಿಯ ಕಲ್ಪನೆಯನ್ನು ನೀಡಬೇಕಿದೆ. ಇಂತಹ ಒಂದು ಅಭಿವೃದ್ಧಿ ಕಲ್ಪನೆಯು ಮಹಾತ್ಮಗಾಂಧಿ ಹಾಗು ಅವರ ಒಡನಾಡಿ ಜೆ.ಸಿ ಕುಮಾರಪ್ಪನವರ ಚಿಂತನೆಯಲ್ಲಿ ಅಡಗಿದೆ. ಅದು ಸ್ವರಾಜ್ ಅಭಿವೃದ್ಧಿ ಕಲ್ಪನೆಯಾಗಿದೆ.

ಜೆ.ಸಿ ಕುಮಾರಪ್ಪ

ಸ್ವರಾಜ್ ಎಂದರೆ ಒಬ್ಬ ವ್ಯಕ್ತಿಯು ಸಂಪೂರ್ಣವಾಗಿ ತನ್ನ ಜೀವನದ ಮೇಲೆ ಹಿಡಿತವನ್ನು ತಾನೇ ಹೊಂದಿರುವುದು ಎಂಬುದಾಗಿದೆ. ಸ್ವರಾಜ್ ಅಭಿವೃದ್ಧಿ ಕಲ್ಪನೆಯು ನ್ಯಾಚುರಲ್ ಆರ್ಡರ್ ಎಂಬ ಸಮಷ್ಟಿ ದೃಷ್ಟಿಯ ಮೇಲೆ ನಿಂತಿದೆ. ಈ ಸಮಷ್ಟಿ ನೋಟವು ಪರಿಸರದಲ್ಲಿ ಮಾನವನ ಸ್ಥಾನವನ್ನು ಗುರುತಿಸಿ, ಸತ್ಯ ಮತ್ತು ಅಹಿಂಸೆ ಎಂಬ ಮೂಲ ತತ್ವಗಳನ್ನು ಆಧಾರವಾಗಿ ಹೊಂದಿದೆ. ಸತ್ಯವೆಂದರೆ ಮನುಷ್ಯನನ್ನೂ ಒಳಗೊಂಡಂತೆ ವಿಶ್ವದಲ್ಲಿರುವ ಎಲ್ಲಾ ಜೀವ ಹಾಗು ನಿರ್ಜೀವ ವಸ್ತುಗಳ ನಡುವೆ ಒಂದು ಅವಿನಾಭಾವ ಸಂಬಂಧವಿದೆ ಎಂಬ ದೃಷ್ಟಿಕೋನ. ಒಬ್ಬ ವ್ಯಕ್ತಿಯ ಒಳಿತು ವಿಶ್ವದ ಒಳಿತಿನಲ್ಲಿದೆ ಎಂಬುದು ಈ ದೃಷ್ಟಿಕೋನದ ನೈತಿಕ ನಿಲುವು. ಹಾಗಾಗಿ ಸತ್ಯದ ಅರಿವಿನಲ್ಲಿ ಬದುಕಲು, ಅಹಿಂಸಾತ್ಮಕ ಜೀವನ ಅನಿವಾರ್ಯವಾಗುತ್ತದೆ. ಇಲ್ಲಿ ಕೇವಲ ಒಬ್ಬ ವ್ಯಕ್ತಿ ಮತ್ತೊಬ್ಬನನ್ನು ಶೋಷಿಸದೆ, ಪ್ರೀತಿಯಿಂದ ಬದುಕುವುದರೊಟ್ಟಿಗೆ, ಬೇರೊಬ್ಬನು ತನ್ನನ್ನು ಶೋಷಿಸದಂತೆ ತಡೆಯುವುದೂ ಕೂಡ ಅಹಿಂಸೆಯ ಭಾಗವಾಗಿದೆ. ಈ ರೀತಿಯ ಅಹಿಂಸಾತ್ಮಕ ಬದುಕನ್ನು ನಡೆಸಲು ಎಲ್ಲ ಮನುಷ್ಯರಿಗೂ ತಮ್ಮ ಮೂಲಭೂತ ಭೌತಿಕ ಅಗತ್ಯತೆಗಳಾದ ಆಹಾರ, ಬಟ್ಟೆ ಮತ್ತು ವಸತಿಯ ಪೂರೈಕೆಯಾಗುವುದು ಅತ್ಯಗತ್ಯ. ಈ ಮೂಲಭೂತ ಅಗತ್ಯಗಳಿಂದ ವಂಚಿತನಾದವನಿಗೆ, ತನ್ನ ದೈಹಿಕ ಬದುಕು ಮುಖ್ಯವಾಗಿ, ಸಮಾಜದ ಒಳಿತು ಹಿಂದಕ್ಕೆ ಸರಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ ಸ್ವರಾಜ್ ಕಲ್ಪನೆಯಲ್ಲಿ ಅಭಿವೃದ್ಧಿಯು ಮೂಲಭೂತ ಭೌತಿಕ ಅಗತ್ಯತೆಗಳನ್ನು ಪೂರೈಸಿದ ನಂತರ ನೈತಿಕತೆಯ ಕಡೆಗೆ ಮುಖಮಾಡುತ್ತದೆ. ಇದು ಒಬ್ಬ ವ್ಯಕ್ತಿ ತನ್ನ ಅಹಂಅನ್ನು ಕಳೆದುಕೊಂಡು ವಿಶ್ವದೊಟ್ಟಿಗೆ ಒಂದಾಗಿ ಬದುಕಲು ಪ್ರೇರೇಪಿಸುತ್ತದೆ. ಇದರ ಫಲವೇ ವ್ಯಕ್ತಿಜೀವನದಲ್ಲಿ ಹಾಗೂ ಸಮಾಜದಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಗೊಳ್ಳುವಂತೆ ಮಾಡುತ್ತದೆ.

ಸ್ವರಾಜ್ ಅಭಿವೃದ್ಧಿಯು ಮೂಲಭೂತ ಭೌತಿಕ ಅಗತ್ಯತೆಗಳನ್ನು ಎಲ್ಲರು ಪೂರೈಸಿಕೊಳ್ಳುವಂತೆ ಮಾಡಲು ರಾಜಕೀಯ ವಿಕೇಂದ್ರಿಕರಣ ಹಾಗು ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯನ್ನು ಪ್ರತಿಪಾದಿಸುತ್ತದೆ. ರಾಜಕೀಯ ವಿಕೇಂದ್ರಿಕರಣವು ಎರಡು ಮುಖವನ್ನು ಹೊಂದಿದೆ. ಒಂದು, ಅಹಿಂಸಾತ್ಮಕ ಪ್ರಜಾಪ್ರಭುತ್ವ, ಮತ್ತೊಂದು ಸತ್ಯಾಗ್ರಹದ ಮೂಲಕ ಶೋಷಣೆಯ ವಿರುದ್ಧ ಅಹಿಂಸಾತ್ಮಕ ಹೋರಾಟ. ಅಹಿಂಸಾತ್ಮಕ ಪ್ರಜಾಪ್ರಭುತ್ವವು ಹೆಚ್ಚಿನ ರಾಜಕೀಯ ಅಧಿಕಾರವನ್ನು ಸಮುದಾಯಕ್ಕೆ ನೀಡಿ, ನಿರ್ಧಾರಗಳನ್ನು ಆದಷ್ಟು ಒಮ್ಮತದ ಮೇಲೆ ಮಾಡುವಂತೆ ಪ್ರೋತ್ಸಾಹಿಸುತ್ತದೆ. ಈ ವ್ಯವಸ್ಥೆಯು ಸಮುದಾಯದ ಭಾಗವಾಗಿರುವ ವ್ಯಕ್ತಿಗೆ ತನ್ನ ಜೀವನದ ಮೇಲೆ ಹೆಚ್ಚಿನ ಹಿಡಿತವನ್ನು ನೀಡಿ ರಾಜಕೀಯ ಶೋಷಣೆಯನ್ನು ಕಡಿಮೆಗೊಳಿಸುತ್ತದೆ. ಈ ರೀತಿಯ ಪ್ರಜಾಪ್ರಭುತ್ವವು, ಬೆಂಗಳೂರಿನಲ್ಲೋ ಅಥವ ದೆಹಲಿಯಲ್ಲೋ ಕುಳಿತು ಯಾವುದೋ ಒಂದು ಹಳ್ಳಿಗೆ ಅಲ್ಲಿಯ ಜನರನ್ನು ಗಮನಕ್ಕೇ ತೆಗೆದುಕೊಳ್ಳದೇ ಏನು ಬೇಕು ಏನು ಬೇಡ ಎಂದು ನಿರ್ಧರಿಸುವ ಇಂದಿನ ರಾಜಕೀಯ ವ್ಯವಸ್ಥೆಗೆ ತದ್ವಿರುದ್ಧವಾಗಿದೆ. ಮನುಷ್ಯನಿಗೆ, ಪರಹಿತದ ಜೊತೆಗೆ ಸ್ವಹಿತಾಸಕ್ತಿಯ ಮುಖವೂ ಇರುವುದರಿಂದ ಅಹಿಂಸಾತ್ಮಕ ಪ್ರಜಾಪ್ರಭುತ್ವದಲ್ಲಿಯೂ ಶೋಷಣೆಯ ಸಾಧ್ಯತೆಗಳಿರುತ್ತದೆ. ಹಾಗಾಗಿ ಸತ್ಯಾಗ್ರಹ ಅಥವಾ ಪ್ರೀತಿಯ ಮೂಲಕ ಶೋಷಿತರು ಶೋಷಣೆ ಮಾಡುವರ ಮನಸ್ಸನ್ನು ಗೆದ್ದು ಶೋಷಣೆಯಿಂದ ಹೊರಬರುವುದು ಸ್ವರಾಜ್ ಅಭಿವೃದ್ಧಿಯಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ.

ರಾಜಕೀಯ ವಿಕೇಂದ್ರಿಕರಣಕ್ಕೆ, ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯು ಅತ್ಯಗತ್ಯ. ಈ ವ್ಯವಸ್ಥೆಯು ಉತ್ಪತ್ತಿ ಹಾಗು ಕೊಳ್ಳುವಿಕೆಯು ಕೇವಲ ಭೌತಿಕ ವ್ಯವಹಾರವಲ್ಲದೆ, ನೈತಿಕ ವ್ಯವಹಾರ ಕೂಡ ಆಗಿದೆ ಎಂಬುದನ್ನು ಗುರುತಿಸುತ್ತದೆ. ಉದಾಹರಣೆಗೆ ಮಕ್ಕಳನ್ನು ಶೋಷಿಸಿ ತಯಾರಾದ ಒಂದು ವಸ್ತುವನ್ನು ಕೊಂಡ ವ್ಯಕ್ತಿಯೊಬ್ಬ ಪರೋಕ್ಷವಾಗಿ ಆ ಮಕ್ಕಳ ಶೋಷಣೆಗೆ ಕಾರಣನಾಗಿರುತ್ತಾನೆ. ಆದ್ದರಿಂದ ಒಬ್ಬ ವ್ಯಕ್ತಿಯು ಅಹಿಂಸಾತ್ಮಕ ಬದುಕನ್ನು ನಡೆಸಬೇಕಾದರೆ, ತಾನು ಕೊಂಡಿರುವ ವಸ್ತು ಹೇಗೆ ತಯಾರಾಗಿದೆ, ಅದರ ತಯಾರಿಕೆಯ ಹಿಂದಿನ ಕತೆಯೇನು ಎಂಬುದನ್ನು ಖುದ್ದು ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಹಾಗಾಗಿ ಉತ್ಪಾದಕ ಮತ್ತು ಗ್ರಾಹಕರ ನಡುವಿನ ಅಂತರ ಕಡಿಮೆ ಇರುವಂತೆ ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯು ಪ್ರೇರೇಪಿಸುತ್ತದೆ. ಈ ಅರ್ಥ ವ್ಯವಸ್ಥೆಯು ಮಾನವ ಶ್ರಮ ಆಧಾರಿತ ಉದ್ಯೋಗಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಏಕೆಂದರೆ ಮಾನವ ಶ್ರಮವನ್ನು ಒಂದು ಶಕ್ತಿಯ ರೂಪವಾಗಿ ನೋಡಿದರೆ, ಅದರಷ್ಟು ಪರಿಸರ ಸ್ನೇಹಿಯಾದ ಶಕ್ತಿಯ ಮೂಲ ಮತ್ತೊಂದಿಲ್ಲ. ಹಣದ ಬಂಡವಾಳ ಕೇವಲ ಕೆಲವರ ಬಳಿ ಮಾತ್ರ ಇದೆ. ಶ್ರಮಕ್ಕೆ ಬೇಕಾದ ಶಕ್ತಿ ಎಲ್ಲರ ಬಳಿಯಲ್ಲೂ ಇದೆ. ಹಾಗಾಗಿ ಶ್ರಮಾಧಾರಿತ ವ್ಯವಸ್ಥೆ ಹೆಚ್ಚಿನ ಜನ ತಮ್ಮ ಕಾಲ ಮೇಲೆ ನಿಲ್ಲಲು ಸಾಧ್ಯ ಮಾಡಿಕೊಡುತ್ತದೆ. ಉದಾಹರಣೆಗೆ ಶ್ರಮಾಧಾರಿತ ಕೈಮಗ್ಗಕ್ಕೆ ಬೇಕಾದ ಬಂಡವಾಳವು ಕೇವಲ ಇಪ್ಪತ್ತು ಸಾವಿರ ರೂಪಾಯಿಗಳಾದರೆ, ಬಂಡವಾಳ ಆಧಾರಿತ ವಿದ್ಯುತ್ ಮಗ್ಗಕ್ಕೆ ಎರಡು ಲಕ್ಷ ರುಪಾಯಿಗಳಷ್ಟು ಬೇಕಾಗುತ್ತದೆ. ಕೈಮಗ್ಗದ ಸ್ಥಾಪನೆಗೆ ಬಂಡವಾಳ ಕಡಿಮೆ ಇರುವುದರಿಂದ ಹೆಚ್ಚಿನ ಜನ ಸ್ವಂತ ಉದ್ಯೋಗವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಉತ್ಪಾದನೆಯ ಹಂತದಲ್ಲಿಯೇ ಸಂಪತ್ತು ಹಂಚಿಕೆಯಾಗಿ ಸಮಾಜದಲ್ಲಿ ಹೆಚ್ಚಿನ ಸಮಾನತೆ ಸಾಧ್ಯವಾಗುತ್ತದೆ. ಒಟ್ಟಾರೆಯಾಗಿ ಸ್ವರಾಜ್ ಅಭಿವೃದ್ಧಿಯತ್ತ ಹೊರಳುವುದು, ಮಾನವಕುಲದ ಉಳಿವಿಗೆ ಅನಿವಾರ್ಯವಾಗಿದೆ ಎಂಬುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ. ಈ ಅನಿವಾರ್ಯತೆಯೇ 150 ವರ್ಷಗಳ ನಂತರವೂ ಗಾಂಧಿಯ ಪ್ರಸ್ತುತತೆಯನ್ನು ನಮಗೆ ತಿಳಿಸುತ್ತದೆ.

  • ಸುಮನಸ್ ಕೌಲಗಿ

ಮೇಲುಕೋಟೆಯವರಾದ ಸುಮನಸ್, ಗಾಂಧಿ ವಿಚಾರಧಾರೆಯನ್ನು ಸ್ವತಃ ಮೈಗೂಡಿಸಿಕೊಂಡಿರುವುದಲ್ಲದೆ ಅದರ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ‘ಸ್ವರಾಜ್ ಅಭಿವೃದ್ಧಿ ಚಿಂತನೆ’ಯ ಬಗ್ಗೆ ಇಂಗ್ಲೆಡಿನ ಯೂನಿವರ್ಸಿಟಿ ಆಫ್ ಸಸೆಕ್ಸ್‌ನಲ್ಲಿ ಪಿಎಚ್‌ಡಿ ಪ್ರಬಂಧ ಮಂಡಿಸಿದ್ದಾರೆ.


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...