Homeಚಳವಳಿಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ" ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿ ಹೇಳಿದರು

- Advertisement -
- Advertisement -

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸುತ್ತಾ ಹೇಳಿದರು.

“ಬಿಜೆಪಿಯ ಏಕೈಕ ಗುರಿ ಕನಿಷ್ಠ ಬೆಂಬಲ ಬೆಲೆ ಮತ್ತು ಆಹಾರ ಸಂಗ್ರಹಣೆಯನ್ನು ನಾಶಪಡಿಸುವುದೇ ಆಗಿದೆ. ಆದರೆ ಎಂದಿಗೂ ಇದನ್ನು ಮಾಡಲು ಕಾಂಗ್ರೆಸ್ ಬಿಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ ಎಂಬುದನ್ನು ನಾನು ಖಾತರಿಪಡಿಸುತ್ತೇನೆ. ನಾವು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೋರಾಡಿ ಈ ಕರಾಳ ಕಾನೂನುಗಳನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿಸುತ್ತವೆ: ರಾಹುಲ್ ಗಾಂಧಿ

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳನ್ನು ಐತಿಹಾಸಿಕ ಸುಧಾರಣೆಗಳು ಎಂದು ಬಿಜೆಪಿ ಹೇಳಿಕೊಂಡಿದೆ. ಆದರೆ, “ಬಿಜೆಪಿಯು ತನ್ನ ಹಿತಾಸಕ್ತಿಯನ್ನು ಈಡೇರಿಸಿಕೊಳ್ಳಲು ರೈತರನ್ನು ಮರಳುಮಾಡುತ್ತಿದೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ದೇಶದಾದ್ಯಂತ ರೈತರ ಪ್ರತಿಭಟನೆಗಳು ನಡೆಯುತ್ತಿದ್ದು, ಪಂಜಾಬ್‌ನಲ್ಲಿ ಇನ್ನೂ ತೀವ್ರವಾಗಿ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿಯೂ ಸುಮಾರು 39 ದಲಿತ, ಕಾರ್ಮಿಕ ಮತ್ತು ರೈತ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ಮಾಡುತ್ತಿವೆ. ಇದರ ಭಾಗವಾಗಿ ಕಳೆದ ತಿಂಗಳು ಭಾರತ್ ಬಂದ್‌ ಮಾಡಲಾಗಿತ್ತು. ಸೆ. 28ರಂದು ಕರ್ನಾಟಕ ಬಂದ್ ಕೂಡಾ ಯಶಸ್ವಿಯಾಗಿತ್ತು.

ಕೇಂದ್ರ ಸರ್ಕಾರದ ರೈತವಿರೋಧಿ ಕಾನೂನುಗಳನ್ನು ವಿರೋಧಿಸಿ, ಅಕಾಲಿ ಶಿರೋಮಣಿ ದಳದ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ತಿಂಗಳು ಸಚಿವ ಸಂಪುಟಕ್ಕೆ ರಾಜಿನಾಮೆ ನೀಡಿದ್ದರು.

ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ವಿವಾದಾತ್ಮಕ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ನಡೆಸಲಿದ್ದಾರೆ. ಇದಕ್ಕೂ ಮೊದಲು ಅಕ್ಟೋಬರ್ 3 ರಿಂದ 5ರವರೆಗೆ ರ್‍ಯಾಲಿ ನಿರ್ಧರಿಸಲಾಗಿತ್ತು.

ಟ್ರ್ಯಾಕ್ಟರ್ ರ್‍ಯಾಲಿಗಳಿಗೆ ರೈತರ ಸಂಘಟನೆಗಳು ಬೆಂಬಲ ನೀಡಲಿದ್ದು, ಮೂರು ದಿನಗಳಲ್ಲಿ 50 ಕಿ.ಮೀ ಗಿಂತಲೂ ಹೆಚ್ಚು ದೂರ ಕ್ರಮಿಸಲಿದೆ. ರ್‍ಯಾಲಿಗಳು ಪ್ರತಿದಿನ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಕೊವೀಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ಪಂಜಾಬ್ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...