Homeಮುಖಪುಟ3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ, ಜನರು ಅನೇಕ ಹವ್ಯಾಸಗಳನ್ನ ರೂಡಿಸಿಕೊಂಡರು. ಕೆಲವು ಹೊಸ ಹೊಸ ಅಡಿಗೆ ಕಲಿಯಲು ಪ್ರಯತ್ನಿಸಿದರು. ಕೆಲವರು ಮನೆಯಲ್ಲೇ ಮಾಸ್ಕ್​ ತಯಾರಿಸೋದು, ಕೈದೋಟದ ಕೆಲಸ, ಮನೆಯಲ್ಲೇ ಜಿಮ್, ಡಯಟಿಂಗ್, ಹಾಡು, ಡ್ಯಾನ್ಸ್​ ತರಬೇತಿ ಮುಂತಾದವನ್ನು ಪ್ರಯತ್ನಿಸಿ ತಮ್ಮ ಬೇಸರ ಕಳೆದುಕೊಂಡಿದ್ದಾರೆ.

ಆದರೆ ಕೇರಳದ ಈ ಯುವತಿ ಲಾಕ್‌ಡೌನ್ ಸಮಯವನ್ನು ಅಧ್ಯಯನಕ್ಕಾಗಿ ಬಳಸಿ, 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್‌ಗಳನ್ನು ಮಾಡಿದ್ದಾರೆ. ಈ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆರತಿ ಕೊಚ್ಚಿಯ ಎಲಂಕಾರ ಮೂಲದವರಾಗಿದ್ದು, ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಎಸ್ಸಿ ಬಯೋಕೆಮಿಸ್ಟ್ರಿ ವಿದ್ಯಾರ್ಥಿನಿಯಾಗಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ವಿದ್ಯಾರ್ಥಿನಿ ಆರತಿ ಹೇಳುವಂತೆ, ’ನನ್ನ ಕಾಲೇಜು ಅಧ್ಯಾಪಕರು ನನಗೆ ಆನ್‌ಲೈನ್ ಕೋರ್ಸ್​​ಗಳನ್ನ ನನಗೆ ಪರಿಚಯಿಸಿದರು. ಆನ್‌ಲೈನ್ ಕೋರ್ಸ್‌ಗಳದ್ದು ಒಂದು ದೊಡ್ಡ ಶ್ರೇಣಿಯಿದೆ. ಪ್ರತಿ ಕೋರ್ಸ್​ನ ಅವಧಿ ಹಾಗೂ ಪಠ್ಯಕ್ರಮ ಭಿನ್ನವಾಗಿರುತ್ತದೆ. ನನ್ನ ಕಾಲೇಜು ಪ್ರಾಂಶುಪಾಲರಾದ ಪಿ.ಮೊಹಮ್ಮದ್, ಹನೀಫಾ ಕೆ.ಜಿ.ಮತ್ತು ಬೋಧಕ ಸಿಬ್ಬಂದಿ ನೀಲಿಮಾ ಟಿ.ಕೆ. ಅವರ ಸಹಾಯದಿಂದ ನಾನು ಪ್ರತಿ ಕೋರ್ಸ್ ಅನ್ನು ಸಮಯಕ್ಕೆ ಪೂರ್ಣಗೊಳಿಸಿದೆ’ ಎನ್ನುತ್ತಾರೆ.

ಆರತಿಯ ತಂದೆಯ ಹೆಸರು ಮಾಲಿಯೆಕ್ಕಲ್ ಮೇದತಿಲ್ ಎಂ.ಆರ್.ರಘುನಾಥ್ ಮತ್ತು ತಾಯಿಯ ಹೆಸರು ಕಲಾದೇವಿ. ವಿಶ್ವದಾಖಲೆ ನಿರ್ಮಿಸಿರುವ ಮಗಳ ಸಾಧನೆ ಬಗ್ಗೆ ತಂದೆ-ತಾಯಿ ಸಂತಸ ವ್ಯಕ್ತಪಡಿಸುತ್ತಾರೆ.

ಜಾನ್ ಹಾಕಿನ್ಸ್ ವಿಶ್ವವಿದ್ಯಾಲಯ, ವರ್ಜೀನಿಯಾ ವಿಶ್ವವಿದ್ಯಾಲಯ, ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯ, ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯ, ರೋಚೆಸ್ಟರ್ ವಿಶ್ವವಿದ್ಯಾಲಯ, ಎಮೋರಿ ವಿಶ್ವವಿದ್ಯಾಲಯ, ಕೊರ್ಸೆರಾ ಪ್ರಾಜೆಕ್ಟ್ ನೆಟ್‌ವರ್ಕ್ ಮತ್ತು ಡೆನ್ಮಾರ್ಕ್‌ನ ತಾಂತ್ರಿಕ ವಿಶ್ವವಿದ್ಯಾಲಯಗಳು ಆರತಿ ಕೋರ್ಸ್‌ಗಳನ್ನು ಪಡೆದ ವಿಶ್ವವಿದ್ಯಾಲಯಗಳಲ್ಲಿ ಸೇರಿವೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ’ಸರ್ವಾಧಿಕಾರಿ ಧೋರಣೆ’ ಖಂಡಿಸಿ ಬ್ರಿಟಿಷ್ ಸಂಸದರು, ತಜ್ಞರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...