Homeಕರ್ನಾಟಕಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್...

ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ - ಕಾಂಗ್ರೆಸ್

- Advertisement -
- Advertisement -

ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ ದಾಳಿ ನಡೆಸಿದೆ. ಈ ದಾಳಿಯನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, “ಮೋದಿ-ಯಡಿಯೂರಪ್ಪ ಜೋಡಿಯು ಕುತಂತ್ರಗಳ ಮೂಲಕ ಬೆದರಿಕೆ ಹಾಕುತ್ತಿದೆ. ತನ್ನ ಕೈಗೊಂಬೆ ಸಿಬಿಐ ಮೂಲಕ ಡಿಕೆ ಶಿವಕುಮಾರ್ ನಿವಾಸಗಳ ಮೇಲೆ ದಾಳಿ ಮಾಡಿಸುತ್ತಿದೆ. ಇದರಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಸಿಬಿಐ ಮೊದಲು ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರಗಳನ್ನು ಕಂಡುಹಿಡಿಯಬೇಕು. ಆದರೆ ಈ ದಾಳಿಯು ಕುತಂತ್ರದ ನಡೆಯಷ್ಟೇ” ಎಂದು ಟ್ವೀಟ್ ಮಾಡಿದ್ದಾರೆ.

“ಮೋದಿ ಮತ್ತು ಯಡಿಯೂರಪ್ಪ ಸರ್ಕಾರಗಳ ಮತ್ತು ಬಿಜೆಪಿಯ ಮುಂಚೂಣಿಯ ಸಂಸ್ಥೆಗಳಾದ ಸಿಬಿಐ-ಇಡಿ-ಆದಾಯ ತೆರಿಗೆ ಇಲಾಖೆಯ ಇಂತಹ ಪ್ರಯತ್ನಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ತಲೆಬಾಗುವುದಿಲ್ಲ ಅಥವಾ ಮಂಡಿಯೂರುವುದಿಲ್ಲ ಎಂದು ತಿಳಿಯಲಿ” ಎಂದು ಅವರು ಕಿಡಿಕಾಡಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ

“ಪ್ರಬಲ ಪ್ರಾದೇಶಿಕ ರಾಜ್ಯ ನಾಯಕರನ್ನು ಗುರಿಯಾಗಿಸುವುದು ಬಿಜೆಪಿ / ಆರ್‌ಎಸ್‌ಎಸ್ ಸಂಯೋಜನೆಯ ಕಾರ್ಯತಂತ್ರದ ಒಂದು ಭಾಗವಾಗಿದೆ. ಡಿಕೆ ಶಿವಕುಮಾರ್ ಗಟ್ಟಿ ಮನುಷ್ಯ, ಅವರು ತಮ್ಮ ಆರೋಪದಿಂದ ಮುಕ್ತರಾಗುತ್ತಾರೆ” ಎಂದು ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ BJP ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಸಿಬಿಐ ದಾಳಿ ಎಂಬುದು ಬಿಜೆಪಿಯ ಶಾಶ್ವತ ಚುನಾವಣಾ ಪ್ರಕ್ರಿಯೆ ಆಗಿದೆ. ಉಪ ಚುನಾವಣೆಯ ಸೋಲುವ ಭೀತಿ ಬಿಜೆಪಿಯಿಂದ ಏನೆಲ್ಲ ಮಾಡಿಸುತ್ತಿದೆ.! ದ್ವೇಷ ರಾಜಕಾರಣದ ಸಿಬಿಐ ದಾಳಿಯನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.

“ಸಿಬಿಐ ಎಂಬುದು ಕೇಂದ್ರ ತನಿಖಾ ದಳ ಎಂಬುದರಿಂದ ಬಿಜೆಪಿ ತನಿಖಾ ದಳ ಎಂದು ಬದಲಾಗಿದೆ. ಇನ್ನು ಇಡಿ ಸಂಸ್ಥೆಯು ಬಿಜೆಪಿ ಪಕ್ಷದ ಚುನಾವಣಾ ಮೋರ್ಚಾ ಘಟಕವಾಗಿ ಬದಲಾಗಿದೆ. ಅನೇಕ ಹೋರಾಟಗಳ ಮೂಲಕ ಮಹನೀಯರು ಕಟ್ಟಿದ ಭಾರತದ ಪ್ರಜಾಪ್ರಭುತ್ವವನ್ನು ಬಿಜೆಪಿಗರು ನಾಶ ಮಾಡಲು ಹೊರಟಿದ್ದಾರೆ!” ಎಂದು ಹೇಳಿದೆ.

“ಡಿಕೆ ಶಿವಕುಮಾರ್‌ ಅವರ ನಾಯಕತ್ವಕ್ಕೆ ಬೆದರಿ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂತಹ ನೀಚ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನರೇಂದ್ರ ಮೋದಿ ನಿಮಗೆ ನೈತಿಕತೆಯಿದ್ದರೆ ಮೊದಲು ಯಡಿಯೂರಪ್ಪ ಕುಟುಂಬದ ಹಗರಣಗಳನ್ನು ತನಿಖೆಗೆ ಒಳಪಡಿಸಲು ಆದೇಶ ನೀಡಿ” ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ಇದನ್ನೂ ಓದಿ: ಎರಡೂ ಕಡೆ ಪಕ್ಷಾಂತರಗಳು ಇನ್ನು ಮುಂದೆ ತುಂಬಾ ಹೆಚ್ಚಾಗಲಿವೆ: ಡಿ.ಕೆ ಶಿವಕುಮಾರ್‌

“CBI ದಾಳಿ ರಾಜಕೀಯ ಪ್ರೇರಿತ. ಶಿರಾ ಹಾಗೂ R.R.ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ. ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ. ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ. ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ CBIಗೆ ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದ್ಯಾಕೆ?” ಎಂದು ಕಾಂಗ್ರೆಸ್‌‌ನ ಮಾಜಿ ನಾಯಕ ಗುಂಡುರಾವ್ ಹೇಳಿದ್ದಾರೆ.

 

ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ, ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿದಂತೆ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ಕೆಲದಿನಗಳ ಹಿಂದೆಯಷ್ಟೇ ಸಿಬಿಐ ವಿಚಾರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದಾಗ ಅದರ ವಿರುದ್ಧ ಡಿಕೆಶಿ ಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದ್ದರು. ಅಷ್ಟರಲ್ಲಾಗಲೇ ಇಂದು 60 ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಯಾವುದೇ ಸುಳಿವು ಕೊಡದೇ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ – ಡಿ.ಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...