Homeಮುಖಪುಟಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಘಟನೆ ಕುರಿತು ಗೌತಮ್ ಬುದ್ಧ ನಗರ ಪೊಲೀಸರು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಕಳೆದ ಗುರುವಾರ ಉತ್ತರ ಪ್ರದೇಶ ಪೊಲೀಸರ ಹಲ್ಲೆ, ಅಧಿಕಾರಿಗಳ ವರ್ತನೆ ಭಾರಿ ಟೀಕೆಗೆ ಗುರಿಯಾಗಿತ್ತು.

ಎರಡನೇ ಬಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್‌ಗೆ ತೆರಳುವಾಗ ದೆಹಲಿ-ಯುಪಿ ಗಡಿಯಲ್ಲಿ ಅವರ ಕುರ್ತಾ(ಬಟ್ಟೆ) ಹಿಡಿದುಕೊಂಡಿದ್ದ ಪೊಲೀಸ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಚಿತ್ರ ವೈರಲ್ ಆಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮೇಲೆ ಒತ್ತಡ ಉಂಟುಮಾಡಿತ್ತು.

ಮಹಾರಾಷ್ಟ್ರ ಬಿಜೆಪಿಯ ಉಪಾಧ್ಯಕ್ಷೆ ಚಿತ್ರಾ ವಾಘ್ ಪ್ರಿಯಾಂಕಾ ಗಾಂಧಿಯವರ ಮೇಲೆ ನಡೆದ ಹಲ್ಲೆ ಮತ್ತು ದೌರ್ಜನ್ಯಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಚಿತ್ರಾ ವಾಘ್ ”ಮಹಿಳಾ ನಾಯಕಿಯ ಬಟ್ಟೆಗೆ ಕೈಹಾಕಲು ಪುರುಷ ಪೊಲೀಸರಿಗೆ ಎಷ್ಟು ಧೈರ್ಯ..? ಎಂದು ಪ್ರಶ್ನಿಸಿದ್ದಾರೆ. ಪೊಲೀಸರು ಮಹಿಳೆಯರ ಘನತೆ ಬಗ್ಗೆ ಕಾಳಜಿವಹಿಸಬೇಕು. ಭಾರತೀಯ ಸಂಸ್ಕೃತಿಯನ್ನು ನಂಬುವ ಮುಖ್ಯಮಂತ್ರಿ ಆದಿತ್ಯನಾಥ್ ಈ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

 

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಯುವತಿಯ ಕುಟುಂಬವನ್ನು ಭೇಟಿ ಮಾಡಲು ಪ್ರಿಯಾಂಕಾ ಗಾಂಧಿ ಮತ್ತು ಅವರ ಸಹೋದರ ರಾಹುಲ್ ಗಾಂಧಿ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಶನಿವಾರ ಮಧ್ಯಾಹ್ನ ಹತ್ರಾಸ್‌ಗೆ ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದಿದ್ದರು.

ದೆಹಲಿ-ಯುಪಿ ಗಡಿಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಮತ್ತು ಗೌತಮ್ ಬುದ್ಧ ನಗರ (ನೋಯ್ಡಾ) ಪೊಲೀಸರ ನಡುವೆ ಜಟಾಪಟಿ ಸಂಭವಿಸಿತ್ತು. ಘಟನೆಯಲ್ಲಿ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಲು ಮುಂದಾದಾಗ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತಮ್ಮ ಕಾರ್ಯಕರ್ತರ ರಕ್ಷಣೆಗೆ ಮುಂದಾಗಿದ್ದರು. ಈ ಸಮಯದಲ್ಲಿ ಹೆಲ್ಮೆಟ್ ಧರಿಸಿದ ಪೊಲೀಸರು ಡಿಎನ್‌ಎ ಟೋಲ್ ಪ್ಲಾಜಾ ಬಳಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಧರಿಸಿದ್ಧ ಕುರ್ತಾಕ್ಕೆ ಕೈ ಹಾಕಿ ಹಿಡಿದಿದ್ದರು.

ಇದನ್ನೂ ಓದಿ: ಹತ್ರಾಸ್: ಕೊನೆಗೂ ಸಂತ್ರಸ್ತೆಯ ಮನೆ ತಲುಪಿದ ರಾಹುಲ್ ಗಾಂಧಿ-ವಿಡಿಯೋ ನೋಡಿ

ಹಿಂದಿ ಭಾಷೆಯಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ ನಾಯಕಿ ಚಿತ್ರಾ ವಾಘ್, “ಮಹಿಳಾ ರಾಜಕೀಯ ನಾಯಕಿಯ ಬಟ್ಟೆಗಳ ಮೇಲೆ ಪುರುಷ ಪೊಲೀಸ್ ಅಧಿಕಾರಿ ಕೈ ಹಾಕಲು ಎಷ್ಟು ಧೈರ್ಯ!” ಪೊಲೀಸರು ಯಾವಾಗಲೂ ತಮ್ಮ ಮಿತಿಗಳನ್ನು ಗಮನದಲ್ಲಿರಿಸಿಕೊಳ್ಳಬೇಕು’ ಎಂದಿದ್ದಾರೆ.

“ಭಾರತೀಯ ಸಂಸ್ಕೃತಿಯನ್ನು ನಂಬುವ ಯೋಗಿ ಆದಿತ್ಯನಾಥ್ ಜಿ, ಅಂತಹ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಟ್ವೀಟ್ ಜೊತೆಗೆ, ಪ್ರಿಯಾಂಕಾ ಗಾಂಧಿಯವರ ಬಟ್ಟೆಯನ್ನು ಪೊಲೀಸ್ ಸಿಬ್ಬಂದಿ ಹಿಡಿದು ಎಳೆಯುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕಿಯ ನಿಲುವನ್ನು ಮಹಾರಾಷ್ಟ್ರ ಯುವ ಕಾಂಗ್ರೆಸ್ ಮುಖ್ಯಸ್ಥ ಸತ್ಯಜಿತ್ ತಂಬೆ ಶ್ಲಾಘಿಸಿದ್ದಾರೆ.

 

ಕಳೆದ ವರ್ಷ ಬಿಜೆಪಿಗೆ ಸೇರಲು ಎನ್‌ಸಿಪಿಯನ್ನು ತೊರೆದ ಚಿತ್ರ ವಾಘ್ ಅವರು ತಮ್ಮ ಪಕ್ಷವನ್ನು ಬದಲಾಯಿಸಿದರೂ ತಮ್ಮ “ಸಂಸ್ಕಾರ” ಕ್ಕೆ ಅಂಟಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ತನಿಖೆಗೆ ಆದೇಶ

ಘಟನೆ ನಡೆದ ನಂತರ ಹಲ್ಲೆಯ ಚಿತ್ರಗಳು ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ವ್ಯಾಪಕ ಟೀಕಗಳು ಕೇಳಿಬಂದಿವೆ. ಹಾಗಾಗಿ ಗೌತಮ್ ಬುದ್ಧ ನಗರ ಪೊಲೀಸರು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...