Homeಮುಖಪುಟಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಘಟನೆ ಕುರಿತು ಗೌತಮ್ ಬುದ್ಧ ನಗರ ಪೊಲೀಸರು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ಕಳೆದ ಗುರುವಾರ ಉತ್ತರ ಪ್ರದೇಶ ಪೊಲೀಸರ ಹಲ್ಲೆ, ಅಧಿಕಾರಿಗಳ ವರ್ತನೆ ಭಾರಿ ಟೀಕೆಗೆ ಗುರಿಯಾಗಿತ್ತು.

ಎರಡನೇ ಬಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್‌ಗೆ ತೆರಳುವಾಗ ದೆಹಲಿ-ಯುಪಿ ಗಡಿಯಲ್ಲಿ ಅವರ ಕುರ್ತಾ(ಬಟ್ಟೆ) ಹಿಡಿದುಕೊಂಡಿದ್ದ ಪೊಲೀಸ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಚಿತ್ರ ವೈರಲ್ ಆಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮೇಲೆ ಒತ್ತಡ ಉಂಟುಮಾಡಿತ್ತು.

ಮಹಾರಾಷ್ಟ್ರ ಬಿಜೆಪಿಯ ಉಪಾಧ್ಯಕ್ಷೆ ಚಿತ್ರಾ ವಾಘ್ ಪ್ರಿಯಾಂಕಾ ಗಾಂಧಿಯವರ ಮೇಲೆ ನಡೆದ ಹಲ್ಲೆ ಮತ್ತು ದೌರ್ಜನ್ಯಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಚಿತ್ರಾ ವಾಘ್ ”ಮಹಿಳಾ ನಾಯಕಿಯ ಬಟ್ಟೆಗೆ ಕೈಹಾಕಲು ಪುರುಷ ಪೊಲೀಸರಿಗೆ ಎಷ್ಟು ಧೈರ್ಯ..? ಎಂದು ಪ್ರಶ್ನಿಸಿದ್ದಾರೆ. ಪೊಲೀಸರು ಮಹಿಳೆಯರ ಘನತೆ ಬಗ್ಗೆ ಕಾಳಜಿವಹಿಸಬೇಕು. ಭಾರತೀಯ ಸಂಸ್ಕೃತಿಯನ್ನು ನಂಬುವ ಮುಖ್ಯಮಂತ್ರಿ ಆದಿತ್ಯನಾಥ್ ಈ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

 

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಯುವತಿಯ ಕುಟುಂಬವನ್ನು ಭೇಟಿ ಮಾಡಲು ಪ್ರಿಯಾಂಕಾ ಗಾಂಧಿ ಮತ್ತು ಅವರ ಸಹೋದರ ರಾಹುಲ್ ಗಾಂಧಿ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಶನಿವಾರ ಮಧ್ಯಾಹ್ನ ಹತ್ರಾಸ್‌ಗೆ ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದಿದ್ದರು.

ದೆಹಲಿ-ಯುಪಿ ಗಡಿಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಮತ್ತು ಗೌತಮ್ ಬುದ್ಧ ನಗರ (ನೋಯ್ಡಾ) ಪೊಲೀಸರ ನಡುವೆ ಜಟಾಪಟಿ ಸಂಭವಿಸಿತ್ತು. ಘಟನೆಯಲ್ಲಿ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಲು ಮುಂದಾದಾಗ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತಮ್ಮ ಕಾರ್ಯಕರ್ತರ ರಕ್ಷಣೆಗೆ ಮುಂದಾಗಿದ್ದರು. ಈ ಸಮಯದಲ್ಲಿ ಹೆಲ್ಮೆಟ್ ಧರಿಸಿದ ಪೊಲೀಸರು ಡಿಎನ್‌ಎ ಟೋಲ್ ಪ್ಲಾಜಾ ಬಳಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಧರಿಸಿದ್ಧ ಕುರ್ತಾಕ್ಕೆ ಕೈ ಹಾಕಿ ಹಿಡಿದಿದ್ದರು.

ಇದನ್ನೂ ಓದಿ: ಹತ್ರಾಸ್: ಕೊನೆಗೂ ಸಂತ್ರಸ್ತೆಯ ಮನೆ ತಲುಪಿದ ರಾಹುಲ್ ಗಾಂಧಿ-ವಿಡಿಯೋ ನೋಡಿ

ಹಿಂದಿ ಭಾಷೆಯಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ ನಾಯಕಿ ಚಿತ್ರಾ ವಾಘ್, “ಮಹಿಳಾ ರಾಜಕೀಯ ನಾಯಕಿಯ ಬಟ್ಟೆಗಳ ಮೇಲೆ ಪುರುಷ ಪೊಲೀಸ್ ಅಧಿಕಾರಿ ಕೈ ಹಾಕಲು ಎಷ್ಟು ಧೈರ್ಯ!” ಪೊಲೀಸರು ಯಾವಾಗಲೂ ತಮ್ಮ ಮಿತಿಗಳನ್ನು ಗಮನದಲ್ಲಿರಿಸಿಕೊಳ್ಳಬೇಕು’ ಎಂದಿದ್ದಾರೆ.

“ಭಾರತೀಯ ಸಂಸ್ಕೃತಿಯನ್ನು ನಂಬುವ ಯೋಗಿ ಆದಿತ್ಯನಾಥ್ ಜಿ, ಅಂತಹ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಟ್ವೀಟ್ ಜೊತೆಗೆ, ಪ್ರಿಯಾಂಕಾ ಗಾಂಧಿಯವರ ಬಟ್ಟೆಯನ್ನು ಪೊಲೀಸ್ ಸಿಬ್ಬಂದಿ ಹಿಡಿದು ಎಳೆಯುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕಿಯ ನಿಲುವನ್ನು ಮಹಾರಾಷ್ಟ್ರ ಯುವ ಕಾಂಗ್ರೆಸ್ ಮುಖ್ಯಸ್ಥ ಸತ್ಯಜಿತ್ ತಂಬೆ ಶ್ಲಾಘಿಸಿದ್ದಾರೆ.

 

ಕಳೆದ ವರ್ಷ ಬಿಜೆಪಿಗೆ ಸೇರಲು ಎನ್‌ಸಿಪಿಯನ್ನು ತೊರೆದ ಚಿತ್ರ ವಾಘ್ ಅವರು ತಮ್ಮ ಪಕ್ಷವನ್ನು ಬದಲಾಯಿಸಿದರೂ ತಮ್ಮ “ಸಂಸ್ಕಾರ” ಕ್ಕೆ ಅಂಟಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ತನಿಖೆಗೆ ಆದೇಶ

ಘಟನೆ ನಡೆದ ನಂತರ ಹಲ್ಲೆಯ ಚಿತ್ರಗಳು ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ವ್ಯಾಪಕ ಟೀಕಗಳು ಕೇಳಿಬಂದಿವೆ. ಹಾಗಾಗಿ ಗೌತಮ್ ಬುದ್ಧ ನಗರ ಪೊಲೀಸರು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...